AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

‘ರಾಜ್​ ಕುಂದ್ರಾ ಲ್ಯಾಪ್​ಟಾಪ್​ನಲ್ಲಿ ಎಲ್ಲವೂ ಇತ್ತು’; ಕೋರ್ಟ್​ಗೆ ಮಾಹಿತಿ ನೀಡಿದ ಮುಂಬೈ ಪೊಲೀಸರು
ರಾಜ್​ ಕುಂದ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 02, 2021 | 7:28 PM

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಉದ್ಯಮಿ ರಾಜ್​ ಕುಂದ್ರಾ ಅವರನ್ನು ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ರಾಜ್​ ಕುಂದ್ರಾ ಅವರು ಬಾಂಬೇ ಹೈಕೋರ್ಟ್​ ಮೊರೆ ಹೋಗಿದ್ದಾರೆ. ತಮಗೆ ಜಾಮೀನು ನೀಡುವಂತೆ ಕೋರಿದ್ದಾರೆ. ಆದರೆ, ಈ ಅರ್ಜಿಯನ್ನು ವಜಾ ಮಾಡುವಂತೆ ಮುಂಬೈ ಪೊಲೀಸರ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಲ್ಲದೆ, ಸಾಕ್ಷ್ಯ ನಾಶದ ಗಂಭೀರ ಆರೋಪವನ್ನು ಕೂಡ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.

ರಾಜ್​ ಕುಂದ್ರಾ ಮತ್ತು ಇತರರ ನಡುವೆ ನಡೆದ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಲಾಗಿದೆ ಎನ್ನಲಾಗಿದೆ. ರಾಜ್​ ಕುಂದ್ರಾ ಅವರ ಐಟಿ ಎಕ್ಸ್​​ಪರ್ಟ್​ ರಯಾನ್​ ಥೋರ್ಪೆ ಸಾಕ್ಷ್ಯ ನಾಶ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದರಲ್ಲಿ ಇವರ ಪಾತ್ರ ದೊಡ್ಡದಿದೆ ಎನ್ನಲಾಗಿದೆ. ಈ ಕುರಿತು ಮುಂಬೈ ಪೊಲೀಸರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ.

‘ರಾಜ್​ ಕುಂದ್ರಾ ಹಾಗೂ ರಯಾನ್​ ವಾಟ್ಸಾಪ್​ ಚಾಟ್​ ಡಿಲೀಟ್​ ಮಾಡಿದ್ದಾರೆ. ಎಷ್ಟು ಡೇಟಾ ಡಿಲೀಟ್​ ಮಾಡಲಾಗಿದೆ ಎಂಬುದು ಗೊತ್ತಿಲ್ಲ. ಡಿಲೀಟ್​ ಆದ ಡೇಟಾಗಳನ್ನು ನಾವು ಮರಳಿ ಪಡೆಯೋಕೆ ಪ್ರಯತ್ನಿಸುತ್ತಿದ್ದೇವೆ. ಆರೋಪಿಯು ಎಲ್ಲಾ ಸಾಕ್ಷ್ಯಗಳನ್ನು ನಾಶ ಮಾಡುತ್ತಿದ್ದಾನೆ ಎಂದಾದರೆ ತನಿಖಾ ಸಂಸ್ಥೆಯು ಇದನ್ನು ಸುಮ್ಮನೆ ನೋಡುತ್ತಿರಬೇಕೇ? ಇದು ಸಾಧ್ಯವಿಲ್ಲ’ ಎಂದು ಸರ್ಕಾರದ ಪರ ವಕೀಲೆ ಅರುಣಾ ಪೈ ಕೋರ್ಟ್​ಗೆ ಹೇಳಿದ್ದಾರೆ.

ರಾಜ್​ ಕುಂದ್ರಾ ಪರ ವಕೀಲರು ಸಾಕ್ಷ್ಯ ನಾಶದ ಹೇಳಿಕೆಯನ್ನು ನಿರಾಕರಿಸಿದ್ದಾರೆ. ‘ರಾಜ್​ ಕುಂದ್ರಾಗೆ ಸಂಬಂಧಿಸಿದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪೊಲೀಸರು ಶೋಧದ ಸಮಯದಲ್ಲೇ ವಶಪಡಿಸಿಕೊಂಡಿದ್ದಾರೆ. ಹೀಗಿರುವಾಗ ಸಾಕ್ಷ್ಯ ನಾಶ ಮಾಡೋಕೆ ಹೇಗೆ ಸಾಧ್ಯ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಲ್ಯಾಪ್​ಟಾಪ್​ನಿಂದ ಅಶ್ಲೀಲ ಸಿನಿಮಾಗಳು, ಹಣಕಾಸಿನ ಯೋಜನೆ ಮೊದಲಾದ ಕೆಲ ಪ್ರಮುಖ ಮಾಹಿತಿಯನ್ನು ಮುಂಬೈ ಕ್ರೈಮ್​ ಬ್ರ್ಯಾಂಚ್​ ವಶಕ್ಕೆ ಪಡೆದಿದೆ. ಇದರ ಜತೆಗೆ ರಾಜ್​ ಕುಂದ್ರಾ ಹಾಗೂ ಅವರ ಭಾವ ಪ್ರದೀಪ್​ ಭಕ್ಷಿ ಜತೆ ನಡೆದ ಇಮೇಲ್​ ಸಂಭಾಷಣೆ ಕೂಡ ಪೊಲೀಸರಿಗೆ ಸಿಕ್ಕಿದೆ. ಕೆಲವು ಮಾಹಿತಿಗಳು ಡಿಲೀಟ್​ ಆಗಿವೆ’ ಎಂದು ಅರುಣಾ ಪೈ ಕೋರ್ಟ್​ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ನನ್ನಿಂದ ಬಲವಂತವಾಗಿ ರಾಜ್​ ಕುಂದ್ರಾ ಹೆಸರು ಹೇಳಿಸಲು ಪ್ರಯತ್ನಿಸಿದ್ರು; ನಟಿ ಗೆಹನಾ ಸ್ಫೋಟಕ ಆರೋಪ

Published On - 7:22 pm, Mon, 2 August 21

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ