AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ 25ರ ಯುವಕನ ಬಂಧನ

ರಾಜಸ್ಥಾನ ಮೂಲದ ಯುವಕನು ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಯೂಟ್ಯೂಬ್​ ವಿಡಿಯೋದಲ್ಲಿ ಆತ ಬಿಷ್ಣೋಯ್​ ಗ್ಯಾಂಗ್​ನ ಬಗ್ಗೆಯೂ ಮಾತನಾಡಿದ್ದಾನೆ. ಆರೋಪಿಯ ವಿರುದ್ಧ ಮುಂಬೈ ಪೊಲೀಸರು ಕಾನೂನಿನ ಕ್ರಮಕ್ಕೆ ಮುಂದಾಗಿದ್ದಾರೆ. ಮುಂಬೈನಲ್ಲಿರುವ ಸಲ್ಮಾನ್​ ಖಾನ್​ ಅವರ ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಭದ್ರತೆ ಹೆಚ್ಚಿಸಲಾಗಿದೆ.

ಯೂಟ್ಯೂಬ್​ನಲ್ಲಿ ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ 25ರ ಯುವಕನ ಬಂಧನ
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jun 16, 2024 | 6:10 PM

Share

ಬಾಲಿವುಡ್​ನ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಬೆದರಿಕೆ ಹಾಕಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಎಲ್ಲರಿಗೂ ಮಾತನಾಡುವ ಸ್ವಾತಂತ್ರ್ಯ ಇದೆ. ಆದರೆ ಇದನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಸಲ್ಮಾನ್​ ಖಾನ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ಕೊಲೆ ಬೆದರಿಕೆ (Threat) ಹಾಕಿದ ಆರೋಪದ ಮೇಲೆ 25 ವರ್ಷ ವಯಸ್ಸಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಟ್ರೋಲ್​ ಮಾಡುವವರಿಗೆ, ಬೆದರಿಕೆ ಹಾಕುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಸಲ್ಮಾನ್​ ಖಾನ್​ ಅವರನ್ನು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನವರು ಟಾರ್ಗೆಟ್​ ಮಾಡಿರುವುದು ಗೊತ್ತೇ ಇದೆ. ಈಗಾಗಲೇ ಸಲ್ಮಾನ್​ ಖಾನ್​ ಹತ್ಯೆಗೆ ಈ ಖದೀಮರು ಅನೇಕ ಬಾರಿ ಪ್ರಯತ್ನಿಸಿದ್ದಾರೆ. ಕೆಲವೇ ತಿಂಗಳ ಹಿಂದೆ ಸಲ್ಮಾನ್​ ಖಾನ್​ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಗುಂಡಿನ ದಾಳಿ ಮಾಡಲಾಗಿತ್ತು. ಆ ಬಳಿಕ ಸಲ್ಮಾನ್​ ಖಾನ್​ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದಾರೆ. ಈಗ ಯೂಟ್ಯೂಬ್​ ಮೂಲಕ ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿ ಕೂಡ ತನ್ನ ವಿಡಿಯೋದಲ್ಲಿ ಬಿಷ್ಣೋಯ್​ ಗ್ಯಾಂಗ್​ ಬಗ್ಗೆ ಉಲ್ಲೇಖಿಸಿದ್ದಾನೆ ಎಂದು ವರದಿ ಆಗಿದೆ.

ಯೂಟ್ಯೂಬ್​ ಮೂಲಕ ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿದ ಯುವಕ ರಾಜಸ್ಥಾನ ಮೂಲದವನು. ಬನ್ವರ್​ಲಾಲ್​ ಲತುರ್ಲಾಲ್​ ಗುಜ್ಜರ್​ ಎಂದು ಆತನನ್ನು ಗುರುತಿಸಲಾಗಿದೆ. ಗ್ರಾಮೀಣ ಭಾಗದ ಯುವಕನಾದ ಆತ ತನ್ನ ಯೂಟ್ಯೂಬ್​ ಚಾನೆಲ್​ ಮೂಲಕ ಸ್ಟಾರ್​ ನಟನಿಗೆ ಬೆದರಿಕೆ ಹಾಕಿದ್ದಾನೆ. ಮುಂಬೈ ಸೈಬರ್​ ಪೊಲೀಸರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜಸ್ಥಾನಕ್ಕೆ ತೆರಳಿ ಆತನನ್ನು ಅರೆಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಸಲ್ಲುಗೆ ಕೊಲೆ ಬೆದರಿಕೆ ಹಾಕಿರುವ ಬನ್ವರ್​ಲಾಲ್​ ಲತುರ್ಲಾಲ್​ ಗುಜ್ಜರ್​ ವಿರುದ್ಧ ಐಪಿಸಿ ಸೆಕ್ಷನ್​ನ ಹಲವು ವಿಭಾಗಗಳ ಅಡಿಯಲ್ಲಿ ಕೇಸ್​ ದಾಖಲು ಮಾಡಲಾಗಿದೆ. ಇದು ಗಂಭೀರ ಪ್ರಕರಣ ಆದ್ದರಿಂದ ಮುಂಬೈ ಪೊಲೀಸರ ತಂಡವು ರಾಜಸ್ಥಾನಕ್ಕೆ ಹೋಗಿ ಆರೋಪಿಯನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆತರುತ್ತಿದ್ದಾರೆ. ಕಿಡಿಗೇಡಿಗಳಿಂದ ಬೆದರಿಕೆ ಹೊಂದಿರುವ ಸಲ್ಮಾನ್​ ಖಾನ್​ ಅವರು ಅದರ ನಡುವೆಯೂ ‘ಸಿಕಂದರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್