AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದೂಕಿನೊಂದಿಗೆ ಆಟ, ಮಾಜಿ ಬಿಗ್​ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲು

Abdu Rozik: ಮಾಜಿ ಬಿಗ್​ಬಾಸ್ ಸ್ಪರ್ಧಿ, ಗಾಯಕ ಅಬ್ದು ರೋಜಿಕ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದೂಕಿನೊಂದಿಗೆ ಆಟ, ಮಾಜಿ ಬಿಗ್​ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲು
ಅಬ್ದು ರೋಜಿಕ್
ಮಂಜುನಾಥ ಸಿ.
|

Updated on: May 12, 2023 | 10:23 PM

Share

ಹಿಂದಿ ಬಿಗ್​ಬಾಸ್​ನ (Hindi Bigg Boss) ಕಳೆದ ಸೀಸನ್ ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಜನಪ್ರಿಯ ರ್ಯಾಪರ್ ಎಂಸಿ ಸ್ಟ್ಯಾನ್ (MC Stan) ಆ ಸೀಸನ್​ನ ವಿಜೇತರಾದರು. ಆದರೆ ಆ ಸೀಸನ್​ನಲ್ಲಿ ಎಂಸಿ ಸ್ಟ್ಯಾನ್ ಮಾತ್ರವಲ್ಲದೆ ಕುಬ್ಜ ಅಬ್ದು ರೋಜಿಕ್ (Abdu Rozik) ಸಹ ಬಹಳ ಜನಪ್ರಿಯತೆ ಗಳಿಸಿದ್ದರು. ನೋಡಲು ಸಣ್ಣ ಮಗುವಿನ ಕಾಣುವ ಅಬ್ದು ವಯಸ್ಸು 20 ವರ್ಷ. ತಜಕೀಸ್ತಾನ ಮೂಲದ ಅಬ್ದು ರೋಜಿಕ್ ಈಗ ಹೆಚ್ಚಿನ ಸಮಯವನ್ನು ಭಾರತದಲ್ಲಿಯೇ ಕಳೆಯುತ್ತಿದ್ದು, ಭಾರತದಲ್ಲಿ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇದೀಗ ಅಬ್ದು ರೋಜಿಕ್ ಸಂಕಷ್ಟಕ್ಕೆ ಸಿಲುಕಿದ್ದು ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಬ್ದು ರೋಜಿಕ್​ರ ವಿಡಿಯೋ ಒಂದು ಇತ್ತೀಚೆಗೆ ಸಖತ್ ವೈರಲ್ ಆಗಿತ್ತು. ಹೋಟೆಲ್ ಒಂದರಲ್ಲಿದ್ದ ಅಬ್ದು ಲೋಡ್ ಆಗಿರುವ ಬಂದೂಕೊಂದನ್ನು ಹಿಡಿದುಕೊಂಡು ಫೋಸ್ ನೀಡುತ್ತಾ ಆಟವಾಡುತ್ತಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೆ ಮುಂಬೈ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆಯಡಿ ಅಬ್ದು ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅಬ್ದು ಅನ್ನು ವಶಕ್ಕೆ ಪಡೆದು ವಿಚಾರಣೆ ಸಹ ನಡೆಸಿದ್ದರು.

ಅಸಲಿಗೆ, ಅಬ್ದು ಕೈಗೆ ಲೋಡೆಡ್ ಬಂದೂಕು ಸಿಗಲು ಕಾರಣ ಗೋಲ್ಡನ್ ಬ್ರದರ್ಸ್ ಎಂದೇ ಖ್ಯಾತಿಯಾಗಿರುವ ಸನ್ನಿ ಹಾಗೂ ಸಂಜಯ್ ಅವರುಗಳಿಂದ. ಮೈಮೇಲೆ ಕೇಜಿಗಟ್ಟಲೆ ಚಿನ್ನ ಧರಿಸಿಕೊಂಡು ಓಡಾಡುವ ಸನ್ನಿ ಹಾಗೂ ಸಂಜಯ್ ಅವರುಗಳ ಬಾಡಿಗಾರ್ಡ್​ಗಳ ಬಂದೂಕು ಹಿಡಿದುಕೊಂಡು ಅಬ್ದು ಫೋಸು ನೀಡಿದ್ದರು. ವಿಡಿಯೋ ಮಾಡಿಕೊಂಡಿದ್ದರು. ಅದೇ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಸ್ತ್ರಾಸ್ತ್ರ ಕಾಯ್ದೆಯನ್ವಯ ಯಾವ ವ್ಯಕ್ತಿಯ ಬಳಿ ಬಂದೂಕಿನ ಪರವಾನಗಿ ಇರುತ್ತದೆಯೋ ಆ ವ್ಯಕ್ತಿಯ ಹೊರತಾಗಿ ಇನ್ಯಾರೂ ಬಂದೂಕು ಮುಟ್ಟುವಂತಿಲ್ಲ. ಹಾಗಾಗಿ ಈಗ ಅಬ್ದು ಹಾಗೂ ಬಂದೂಕಿನ ಪರವಾನಗಿ ಹೊಂದಿದ್ದ ಗೋಲ್ಡನ್ ಬ್ರದರ್ಸ್​ರ ಬಾಡಿಗಾರ್ಡ್ ವಿರುದ್ಧ ಮುಂಬೈನ ಓಶಿವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಅಬ್ದುಗೆ ಸಂಬಂಧಿಸಿದವರು ಮಾಧ್ಯಮಗಳಿಗೆ ಹೇಳಿರುವಂತೆ, ಅಬ್ದು ಕೇವಲ ಕೆಲವೇ ಸೆಕೆಂಡ್​ಗಳಿಗಾಗಿ ಬಂದೂಕನ್ನು ಎತ್ತಿಕೊಂಡು ಹಾಗೆಯೇ ವಾಪಸ್ ಇಟ್ಟುಬಿಟ್ಟಿದ್ದರು ಎಂದಿದ್ದಾರೆ.

ಅಬ್ದು ರೋಜಿಕ್ ತಜಿಕಿಸ್ತಾನದ ನಾಗರೀಕ. ಅಲ್ಲಿನ ಜನಪ್ರಿಯ ರ್ಯಪರ್ ಬರೋನ್ ಬೆಂಬಲದಿಂದ ಹಾಡುವುದು ಪ್ರಾರಂಭಿಸಿದರು. ಕೆಲವು ತಜಿಕಿಸ್ತಾನ ಹಾಡುಗಳನ್ನು ಹಾಡಿದ್ದ ಅಬ್ದು, ಒಮ್ಮೆ ಅರಿಜಿತ್​ರ ಹಿಂದಿ ಹಾಡೊಂದನ್ನು ಹಾಡಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅದು ಬಹಳ ವೈರಲ್ ಆಗಿತ್ತು. ಆ ಬಳಿಕ ಅಬ್ದು ಅವರನ್ನು ದುಬೈನಲ್ಲಿ ನಡೆದ ಫಿಲಂಫೇರ್​ ಕಾರ್ಯಕ್ರಮಕ್ಕೆ ಆಹ್ವಾನಿಸಿ ಹಾಡಲು ಅವಕಾಶ ನೀಡಲಾಯ್ತು. ಅಲ್ಲಿಯೂ ಉತ್ತಮವಾಗಿ ಪ್ರದರ್ಶನ ನೀಡಿ ಜನಮನ ಗೆದ್ದರು ಅಬ್ದು. ಆ ಬಳಿಕ ಅವರಿಗೆ ಬಿಗ್​ಬಾಸ್ 16 ನಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯಿತು. ಸಲ್ಮಾನ್ ಖಾನ್​ರ ಇತ್ತೀಚೆಗಿನ ಸಿನಿಮಾ ಕಿಸಿ ಕ ಭಾಯ್ ಕಿಸಿ ಕೀ ಜಾನ್ ಸಿನಿಮಾದಲ್ಲಿಯೂ ಇವರು ನಟಿಸಿದ್ದಾರೆ. ಇದೀಗ ಗಾಯನದ ಜೊತೆಗೆ ಯೂಟ್ಯೂಬರ್ ಸಹ ಆಗಿರುವ ಅಬ್ದು, ಮುಂಬೈನಲ್ಲಿ ರೆಸ್ಟೊರೆಂಟ್ ಒಂದನ್ನು ಸಹ ತೆರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್