AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿಂದ ಹೇಳಿದ ಕಥೆ ನಂಬುತ್ತಿಲ್ಲ ಮುಂಬೈ ಪೊಲೀಸರು; ಗುಂಡೇಟು ಪ್ರಕರಣಕ್ಕೆ ಟ್ವಿಸ್ಟ್​

ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಿಂದ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆದರೆ ಗೋವಿಂದ ಹೇಳಿದ್ದನ್ನು ಪೂರ್ತಿಯಾಗಿ ನಂಬಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇನ್ನೊಮ್ಮೆ ಹೇಳಿಕೆಯನ್ನು ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಗೋವಿಂದ ಹೇಳಿದ ಕಥೆ ನಂಬುತ್ತಿಲ್ಲ ಮುಂಬೈ ಪೊಲೀಸರು; ಗುಂಡೇಟು ಪ್ರಕರಣಕ್ಕೆ ಟ್ವಿಸ್ಟ್​
ಗೋವಿಂದ
ಮದನ್​ ಕುಮಾರ್​
|

Updated on: Oct 02, 2024 | 6:09 PM

Share

ನಟ ಗೋವಿಂದ ಅವರಿಗೆ ಬುಧವಾರ (ಅಕ್ಟೋಬರ್​ 1) ಬೆಳಗ್ಗೆ ಗುಂಡೇಟು ತಗುಲಿತು. ತಮ್ಮದೇ ರಿವೋಲ್ವಾರ್​ನಿಂದ ಆಕಸ್ಮಿಕವಾಗಿ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದಾರೆ. ಅವರ ಕಾಲಿಗೆ ಗಾಯವಾಗಿದೆ. ಆದರೆ ತಾನಾಗಿಯೇ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದನ್ನು ಮುಂಬೈ ಪೊಲೀಸರು ನಂಬುತ್ತಿಲ್ಲ ಎನ್ನಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗೋವಿಂದ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಗುಂಡೇಟಿನ ಹಿಂದಿರುವ ಅಸಲಿ ವಿಷಯ ಏನು ಎಂಬುದು ತನಿಖೆ ಮುಗಿದ ನಂತರ ತಿಳಿಯಲಿದೆ.

ಗೋವಿಂದ ಅವರ ಮನೆಯಲ್ಲೇ ಈ ಘಟನೆ ನಡೆಯಿತು. ರಿವೋಲ್ವಾರ್​ನಿಂದ ಗುಂಡು ಸಿಡಿದಾಗ ಆ ಸ್ಥಳದಲ್ಲಿ ಗೋವಿಂದ ಒಬ್ಬರೇ ಇದ್ದರು. ಆದ್ದರಿಂದ ಬೇರೆ ಯಾರಿಂದಲೋ ಹತ್ಯೆ ಪ್ರಯತ್ನ ನಡೆದಿಲ್ಲ ಎಂಬುದನ್ನು ಪೊಲೀಸರು ನಂಬಿದ್ದಾರೆ. ಆದರೆ ತಂತಾನೇ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದನ್ನು ಪೊಲೀಸರು ಪೂರ್ತಿಯಾಗಿ ಒಪ್ಪಿಕೊಂಡಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಇದನ್ನೂ ಓದಿ: ಕಾಲಿಗೆ ಗುಂಡೇಟು ಬಿದ್ದ ಪ್ರಕರಣ; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಗೋವಿಂದ

ಇನ್ಸ್​ಪೆಕ್ಟರ್​ ದಯಾನಾಯಕ್​ ಅವರ ನೇತೃತ್ವದ ತಂಡವು ಈ ಪ್ರಕರಣದ ತನಿಖೆ ಮಾಡುತ್ತಿದೆ. ಗೋವಿಂದ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ, ನಟನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬುಧವಾರ ಮುಂಜಾನೆ ಗುಂಡು ಹಾರಿದ್ದು ಹೇಗೆ ಎಂಬುದನ್ನು ಗೋವಿಂದ ವಿವರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅವರ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ತಮ್ಮ ಭದ್ರತೆಗಾಗಿ ಗೋವಿಂದ ಅವರು ರಿವೋಲ್ವಾರ್​ ಲೈಸೆನ್ಸ್​ ಹೊಂದಿದ್ದಾರೆ. ಅವರ ರಿವೋಲ್ವಾರ್​ ತುಂಬ ಹಳೆಯದಾಗಿದ್ದು, ಸರಿಯಾಗಿ ಲಾಕ್​ ಆಗಿರದ ಕಾರಣ ಮಿಸ್​ಫೈರ್​ ಆಗಿದೆ ಎಂಬ ಮಾಹಿತಿ ಇದೆ. ಗೋವಿಂದ ಅವರ ಕಾಲಿಗೆ ಗಾಯ ಆಗಿದ್ದು, 8ರಿಂದ 10 ಹೊಲಿಗೆ ಹಾಕಲಾಗಿದೆ. ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ. ಗೋವಿಂದ ಅವರ ಆಪ್ತರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು