AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಿಂದ ಹೇಳಿದ ಕಥೆ ನಂಬುತ್ತಿಲ್ಲ ಮುಂಬೈ ಪೊಲೀಸರು; ಗುಂಡೇಟು ಪ್ರಕರಣಕ್ಕೆ ಟ್ವಿಸ್ಟ್​

ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಿಂದ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆದರೆ ಗೋವಿಂದ ಹೇಳಿದ್ದನ್ನು ಪೂರ್ತಿಯಾಗಿ ನಂಬಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಇನ್ನೊಮ್ಮೆ ಹೇಳಿಕೆಯನ್ನು ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಗೋವಿಂದ ಹೇಳಿದ ಕಥೆ ನಂಬುತ್ತಿಲ್ಲ ಮುಂಬೈ ಪೊಲೀಸರು; ಗುಂಡೇಟು ಪ್ರಕರಣಕ್ಕೆ ಟ್ವಿಸ್ಟ್​
ಗೋವಿಂದ
ಮದನ್​ ಕುಮಾರ್​
|

Updated on: Oct 02, 2024 | 6:09 PM

Share

ನಟ ಗೋವಿಂದ ಅವರಿಗೆ ಬುಧವಾರ (ಅಕ್ಟೋಬರ್​ 1) ಬೆಳಗ್ಗೆ ಗುಂಡೇಟು ತಗುಲಿತು. ತಮ್ಮದೇ ರಿವೋಲ್ವಾರ್​ನಿಂದ ಆಕಸ್ಮಿಕವಾಗಿ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದಾರೆ. ಅವರ ಕಾಲಿಗೆ ಗಾಯವಾಗಿದೆ. ಆದರೆ ತಾನಾಗಿಯೇ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದನ್ನು ಮುಂಬೈ ಪೊಲೀಸರು ನಂಬುತ್ತಿಲ್ಲ ಎನ್ನಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗೋವಿಂದ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಗುಂಡೇಟಿನ ಹಿಂದಿರುವ ಅಸಲಿ ವಿಷಯ ಏನು ಎಂಬುದು ತನಿಖೆ ಮುಗಿದ ನಂತರ ತಿಳಿಯಲಿದೆ.

ಗೋವಿಂದ ಅವರ ಮನೆಯಲ್ಲೇ ಈ ಘಟನೆ ನಡೆಯಿತು. ರಿವೋಲ್ವಾರ್​ನಿಂದ ಗುಂಡು ಸಿಡಿದಾಗ ಆ ಸ್ಥಳದಲ್ಲಿ ಗೋವಿಂದ ಒಬ್ಬರೇ ಇದ್ದರು. ಆದ್ದರಿಂದ ಬೇರೆ ಯಾರಿಂದಲೋ ಹತ್ಯೆ ಪ್ರಯತ್ನ ನಡೆದಿಲ್ಲ ಎಂಬುದನ್ನು ಪೊಲೀಸರು ನಂಬಿದ್ದಾರೆ. ಆದರೆ ತಂತಾನೇ ಬುಲೆಟ್​ ಸಿಡಿಯಿತು ಎಂದು ಗೋವಿಂದ ಹೇಳಿದ್ದನ್ನು ಪೊಲೀಸರು ಪೂರ್ತಿಯಾಗಿ ಒಪ್ಪಿಕೊಂಡಿಲ್ಲ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ.

ಇದನ್ನೂ ಓದಿ: ಕಾಲಿಗೆ ಗುಂಡೇಟು ಬಿದ್ದ ಪ್ರಕರಣ; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಗೋವಿಂದ

ಇನ್ಸ್​ಪೆಕ್ಟರ್​ ದಯಾನಾಯಕ್​ ಅವರ ನೇತೃತ್ವದ ತಂಡವು ಈ ಪ್ರಕರಣದ ತನಿಖೆ ಮಾಡುತ್ತಿದೆ. ಗೋವಿಂದ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ, ನಟನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಬುಧವಾರ ಮುಂಜಾನೆ ಗುಂಡು ಹಾರಿದ್ದು ಹೇಗೆ ಎಂಬುದನ್ನು ಗೋವಿಂದ ವಿವರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಅವರ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ತಮ್ಮ ಭದ್ರತೆಗಾಗಿ ಗೋವಿಂದ ಅವರು ರಿವೋಲ್ವಾರ್​ ಲೈಸೆನ್ಸ್​ ಹೊಂದಿದ್ದಾರೆ. ಅವರ ರಿವೋಲ್ವಾರ್​ ತುಂಬ ಹಳೆಯದಾಗಿದ್ದು, ಸರಿಯಾಗಿ ಲಾಕ್​ ಆಗಿರದ ಕಾರಣ ಮಿಸ್​ಫೈರ್​ ಆಗಿದೆ ಎಂಬ ಮಾಹಿತಿ ಇದೆ. ಗೋವಿಂದ ಅವರ ಕಾಲಿಗೆ ಗಾಯ ಆಗಿದ್ದು, 8ರಿಂದ 10 ಹೊಲಿಗೆ ಹಾಕಲಾಗಿದೆ. ಸದ್ಯದಲ್ಲೇ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಲಿದ್ದಾರೆ. ಗೋವಿಂದ ಅವರ ಆಪ್ತರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್