AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಲಿ ಬಿಚ್ಚಿಟ್ಟು ‘ಹನುಮಾನ್ ಅಂಶ್’ ಸಿನಿಮಾ ನೋಡಿದ ಮುಸ್ಲಿಂ ವ್ಯಕ್ತಿ: ವಿಡಿಯೋ ವೈರಲ್

ಆಗಸ್ಟ್ 7ರಂದು ಬಿಡುಗಡೆಯಾದ ‘ಹನುಮಾನ್ ಅಂಶ್’ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಇದುವರೆಗೆ ಸುಮಾರು 72.88 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವ ಈ ಸಿನಿಮಾಗೆ ಪ್ರೇಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ಭಕ್ತಿಪ್ರಧಾನ ಕಥಾಹಂದರ ಇರುವ ಈ ಸಿನಿಮಾವನ್ನು ಪ್ರೇಕ್ಷಕರು ಧರ್ಮಭೇದವಿಲ್ಲದೇ ನೋಡುತ್ತಿದ್ದಾರೆ ಎಂಬುದು ವಿಶೇಷ.

ಚಪ್ಪಲಿ ಬಿಚ್ಚಿಟ್ಟು ‘ಹನುಮಾನ್ ಅಂಶ್’ ಸಿನಿಮಾ ನೋಡಿದ ಮುಸ್ಲಿಂ ವ್ಯಕ್ತಿ: ವಿಡಿಯೋ ವೈರಲ್
Hanuman AnshImage Credit source: X/@Geetashloks
ಮದನ್​ ಕುಮಾರ್​
|

Updated on: Sep 04, 2026 | 4:38 PM

Share

ಬಾಲಿವುಡ್‌ನ ಯಾವುದೇ ಘಟಾನುಘಟಿ ಸೂಪರ್‌ಸ್ಟಾರ್‌ಗಳಿಲ್ಲದೆ, ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿರುವ ಭಕ್ತಿಪ್ರಧಾನ ಸಿನಿಮಾ ‘ಹನುಮಾನ್ ಅಂಶ್’ ಬಗ್ಗೆ ಎಲ್ಲ ಕಡೆಗಳಲ್ಲಿ ಚರ್ಚೆ ನಡೆಯುತ್ತಿದೆ. ಆರಂಭದ ದಿನಗಳಲ್ಲಿ ಕೇವಲ 10 ಲಕ್ಷ ರೂಪಾಯಿ ಗಳಿಕೆ ಮಾಡಿದ್ದ ಈ ಸಿನಿಮಾ, ಪ್ರೇಕ್ಷಕರ ಬಾಯಿಮಾತಿನ ಪ್ರಚಾರದಿಂದಾಗಿ ಈಗ ಕೋಟಿ ಕೋಟಿ ರೂಪಾಯಿ ಬಾಚಿಕೊಳ್ಳುತ್ತಿದೆ. ಇದರ ನಡುವೆ, ಮುಸ್ಲಿಂ ವ್ಯಕ್ತಿಯೊಬ್ಬರು ಥಿಯೇಟರ್‌ನಲ್ಲಿ ಬರಿಗಾಲಿನಲ್ಲಿ ಕುಳಿತು ಈ ಸಿನಿಮಾ ವೀಕ್ಷಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, ಬಿಳಿ ಬಣ್ಣದ ಕುರ್ತಾ-ಪೈಜಾಮ ಹಾಗೂ ಟೋಪಿ ಧರಿಸಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಬರಿಗಾಲಿನಲ್ಲಿ ಕುಳಿತು ಅತ್ಯಂತ ತನ್ಮಯತೆಯಿಂದ ‘ಹನುಮಾನ್ ಅಂಶ್’ ಸಿನಿಮಾ ವೀಕ್ಷಿಸುವುದನ್ನು ಕಾಣಬಹುದು. ನೀಮ್ ಕರೋಲಿ ಬಾಬಾ ಅವರ ಜೀವನಾಧಾರಿತ ಚಿತ್ರವನ್ನು ಈ ವ್ಯಕ್ತಿ ಇಷ್ಟೊಂದು ಭಕ್ತಿಯಿಂದ ವೀಕ್ಷಿಸುತ್ತಿರುವುದಕ್ಕೆ ನೆಟ್ಟಿಗರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋಗೆ ಕಾಮೆಂಟ್ ಮಾಡಿರುವ ಬಳಕೆದಾರರೊಬ್ಬರು, ‘ರಾಜಕೀಯ ಲಾಭಕ್ಕಾಗಿ ದಶಕಗಳಿಂದ ನಡೆಯುತ್ತಿರುವ ಧ್ರುವೀಕರಣ ಇವರ ಮನಸ್ಸನ್ನು ಕಲುಷಿತಗೊಳಿಸಲು ಸಾಧ್ಯವಾಗಿಲ್ಲ’ ಎಂದಿದ್ದಾರೆ. ಮತ್ತೊಬ್ಬರು ‘ಇದು ರಾಜಕೀಯವಿಲ್ಲದ ನಿಜವಾದ ಭಾರತ’ ಎಂದಿದ್ದಾರೆ. ‘ನಾನು ಮುಸ್ಲಿಂ, ಆದರೆ ಈ ಸಿನಿಮಾ ನನಗಿಷ್ಟವಾಯಿತು. ಏಕೆಂದರೆ ಇದರಲ್ಲಿ ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಲ್ಲ’ ಎಂಬ ಕಮೆಂಟ್ ಕೂಡ ಬಂದಿದೆ.

ವೈರಲ್ ವಿಡಿಯೋ:

You watched or not ? pic.twitter.com/m99ePJffK2

— Bhagavad Gita 🪷 (@Geetashloks) September 2, 2026

‘ಹನುಮಾನ್ ಅಂಶ್’ ಸಿನಿಮಾದ ಕಥೆ ಏನು?

ವಿಶಾಲ್ ಚತುರ್ವೇದಿ ಬರೆದು ನಿರ್ದೇಶಿಸಿರುವ ಈ ಚಿತ್ರವು ‘ಡಿವೈನ್ ಡಿಟೂರ್: ದಟ್ ಚೇಂಜ್ಡ್ ಮೈ ಲೈಫ್’ ಪುಸ್ತಕವನ್ನು ಆಧರಿಸಿದೆ. ತಾಯಿಯನ್ನು ಕಳೆದುಕೊಂಡ ಲಕ್ಷ್ಮಣ್ ದಾಸ್ ಎಂಬ ಹುಡುಗ, ಜೀವನ ಮತ್ತು ದೇವರ ಹುಡುಕಾಟದಲ್ಲಿ ಆಧ್ಯಾತ್ಮಿಕ ಪಯಣ ಬೆಳೆಸುವ ಕಥೆ ಇಲ್ಲಿದೆ. ಉತ್ತರ ಭಾರತದಾದ್ಯಂತ ಸಂಚರಿಸಿ ಸಾಧು-ಸಂತರನ್ನು ಭೇಟಿಯಾಗುವ ಆತ, ಮುಂದೆ ನೀಮ್ ಕರೋಲಿ ಬಾಬಾ ಆಗಿ ಬದಲಾಗುವ ಹಂತವನ್ನು ಚಿತ್ರದಲ್ಲಿ ಮನಮುಟ್ಟುವಂತೆ ತೋರಿಸಲಾಗಿದೆ. ಶೋಭಿನವ್ ಸತ್ಯಾ ಹಾಗೂ ಚಂದನ್ ಆನಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಹನುಮಾನ್ ಅಂಶ್’ ಮೆಚ್ಚಿದ ಕಂಗನಾ: ಆದರೆ ಚಿತ್ರತಂಡಕ್ಕೆ ಪ್ರೇಮಾನಂದ್ ಮಹಾರಾಜ್ ಎಚ್ಚರಿಕೆ

ಬಾಲಿವುಡ್ ಮಂದಿ ಆರಂಭದಲ್ಲಿ ಬೆಂಬಲ ನೀಡದಿದ್ದರೂ, ಚಿತ್ರದ ಯಶಸ್ಸು ಕಂಡು ಈಗ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ನಿರ್ದೇಶಕರು ಹೇಳಿದ್ದಾರೆ. ಈ ನಡುವೆ, ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಈ ಸಿನಿಮಾವನ್ನು ಸೆಪ್ಟೆಂಬರ್ 11ರಂದು ವಿದೇಶಗಳಲ್ಲೂ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೆ, ಈ ಸೂಪರ್ ಹಿಟ್ ಚಿತ್ರಕ್ಕೆ ಸೀಕ್ವೆಲ್ ಕೂಡ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್
ರಾಜ್​ಕುಮಾರ್​ಗೆ ಪೌರಾಣಿಕ ಕಥೆ ಹೇಳಿದ್ದ ನಾಗತಿಹಳ್ಳಿ ಚಂದ್ರಶೇಖರ್