AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ‘ಆ ವ್ಯಕ್ತಿಯೇ ಅಶ್ಲೀಲ, ಅವಕಾಶವಾದಿ’: ನಡಾವ್​ ಲಪಿಡ್ ಬಗ್ಗೆ ಅನುಪಮ್​ ಖೇರ್​ ಗರಂ

The Kashmir Files | Anupam Kher: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಬಗ್ಗೆ ಕಟು ಟೀಕೆ ಮಾಡಿದ ನಡಾವ್​ ಲಪಿಡ್ ವಿರುದ್ಧ ನಟ ಅನುಪಮ್​ ಖೇರ್​ ಗರಂ ಆಗಿದ್ದಾರೆ. ಈ ಕುರಿತು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Anupam Kher: ‘ಆ ವ್ಯಕ್ತಿಯೇ ಅಶ್ಲೀಲ, ಅವಕಾಶವಾದಿ’: ನಡಾವ್​ ಲಪಿಡ್ ಬಗ್ಗೆ ಅನುಪಮ್​ ಖೇರ್​ ಗರಂ
ಅನುಪಮ್ ಖೇರ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 29, 2022 | 10:00 PM

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ತಯಾರಾದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈಗ ಮತ್ತೆ ಆ ಚಿತ್ರದ ಕುರಿತು ಪರ-ವಿರೋಧದ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಸಮಾರೋಪಗೊಂಡ ಗೋವಾ ಸಿನಿಮೋತ್ಸವದಲ್ಲಿ ಜ್ಯೂರಿ ಕಮಿಟಿ ಅಧ್ಯಕ್ಷ ನಡಾವ್​ ಲಪಿಡ್​ (Nadav Lapid) ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಕಟುವಾಗಿ ಟೀಕಿಸಿದರು. ಅದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಚಿತ್ರದ ನಟ ಅನುಪಮ್​ ಖೇರ್​ (Anupam Kher) ಅವರು ನಡಾವ್​ ಲಪಿಡ್​ ವಿರುದ್ಧ ಗರಂ ಆಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ‘ಆ ವ್ಯಕ್ತಿಯೇ ಅಶ್ಲೀಲ ಮತ್ತು ಅವಕಾಶವಾದಿ’ ಎಂದು ನಡಾವ್​ ಲಪಿಡ್​ಗೆ ತಿರುಗೇಟು ನೀಡಿದ್ದಾರೆ.

‘ಅಭಿವ್ಯಕ್ತಿ ಸ್ವಾತಂತ್ರ್ಯ ಇರುವ ಎಲ್ಲ ದೇಶದಲ್ಲೂ ಇಂತಹ ಕೆಲವು ವ್ಯಕ್ತಿಗಳು ಈ ರೀತಿಯ ವೇದಿಕೆಯನ್ನು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಲು ಬಳಸಿಕೊಳ್ಳುತ್ತಾರೆ. ನಿಮಗೆ ಸಿನಿಮಾ ಇಷ್ಟ ಆಗಿಲ್ಲದೇ ಇದ್ದರೆ ಅದನ್ನು ಹೇಳಬಹುದು. ಆದರೆ ನೀವು ಜ್ಯೂರಿ ತಂಡದ ಸದಸ್ಯರಾಗಿರುವಾಗ ನಿಮಗೆ ಜವಾಬ್ದಾರಿ ಇರಬೇಕು. ನನಗೆ ಅನಿಸಿದಂತೆ ಆ ವ್ಯಕ್ತಿ ಅಶ್ಲೀಲವಾಗಿ ಮಾತಾಡಿದ್ದಾರೆ. ತಮ್ಮ ವಿಚಾರಗಳ ಪ್ರಚಾರಕ್ಕಾಗಿ ಈ ವೇದಿಕೆಯನ್ನು ಬಳಸಿಕೊಂಡ ಆ ವ್ಯಕ್ತಿಯೇ ಅಶ್ಲೀಲ ಮತ್ತು ಅವಕಾಶವಾದಿ’ ಎಂದು ಅನುಪಮ್​ ಖೇರ್​ ಕಿಡಿಕಾರಿದ್ದಾರೆ.

ಇದನ್ನೂ ಓದಿ
Image
Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ
Image
‘ದಿ ಕಾಶ್ಮೀರ್​ ಫೈಲ್ಸ್​’ ನಟರಿಗೆ ಸಿಕ್ಕಿದೆ ಕೋಟಿ ರೂ. ಸಂಬಳ; ಅತಿ ಹೆಚ್ಚು ಸಂಭಾವನೆ ಪಡೆದಿದ್ದು ಯಾರು?

‘ಇಂಥವರಿಂದ ಸತ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಒಬ್ಬರು ಅಥವಾ 10 ಜನರು ಇಡೀ ದೇಶದ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ನೋವು ಜನರನ್ನು ಒಗ್ಗೂಡಿಸುತ್ತದೆ. ಇಸ್ರೇಲ್​ನಿಂದಲೂ ನನಗೆ ಜನರು ಮೆಸೇಜ್​ ಮಾಡಿದ್ದಾರೆ. ಅಲ್ಲಿನ ಜನರು ಒಳ್ಳೆಯ ಮಾತುಗಳನ್ನು ತಿಳಿಸಿದ್ದಾರೆ’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

ನಡಾವ್​ ಲಪಿಡ್​ ಹೇಳಿದ್ದೇನು?

‘ಅಂತಾರಾಷ್ಟ್ರೀಯ ಸಿನಿಮಾ ಸ್ಪರ್ಧೆಯ ವಿಭಾಗದಲ್ಲಿ ನಾವು 15 ಚಿತ್ರಗಳನ್ನು ನೋಡಿದೆವು. 14 ಸಿನಿಮಾಗಳು ಗುಣಮಟ್ಟದಿಂದ ಕೂಡಿದ್ದು, ಚರ್ಚೆ ಹುಟ್ಟುಹಾಕಿದವು. ಆದರೆ 15ನೇ ಸಿನಿಮಾ ದಿ ಕಾಶ್ಮೀರ್​ ಫೈಲ್ಸ್​ ನೋಡಿ ನಮಗೆಲ್ಲ ಶಾಕ್​ ಆಯಿತು. ಅದೊಂದು ಪ್ರಚಾರದ, ಅಶ್ಲೀಲ ಸಿನಿಮಾ ಅಂತ ನನಗೆ ಅನಿಸಿತು. ಇಂಥ ಪ್ರತಿಷ್ಠಿತ ಸಿನಿಮೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಇರಲು ಅದು ಸೂಕ್ತವಲ್ಲ ಎನಿಸಿತು. ಈ ವೇದಿಕೆಯಲ್ಲಿ ನನ್ನ ಅಭಿಪ್ರಾಯವನ್ನು ತಿಳಿಸಲು ನಾನು ಕಂಫರ್ಟಬಲ್​ ಆಗಿದ್ದೇನೆ. ಸಿನಿಮೋತ್ಸವದಲ್ಲಿ ಈ ವಿಮರ್ಶಾತ್ಮಕ ಚರ್ಚೆಯನ್ನು ಒಪ್ಪಿಕೊಳ್ಳಬಹುದು. ಬದುಕಿಗೆ ಮತ್ತು ಕಲೆಗೆ ಅದು ಅವಶ್ಯಕ’ ಎಂದು ನಡಾವ್​ ಲಪಿಡ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:00 pm, Tue, 29 November 22

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ