AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?

Nag Ashwin: ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ನಾಗ್ ಅಶ್ವಿನ್, ‘ನಾನು ಆಲಿಯಾ ಭಟ್ ಜೊತೆಗೆ ಸಿನಿಮಾ ಮಾಡುತ್ತಿಲ್ಲ’ ಎಂದಿದ್ದಾರೆ.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:35 AM

Share

‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಭರ್ಜರಿ ಖುಷಿ ಆಗಿದ್ದರು. ಆದರೆ, ಇದನ್ನು ನಾಗ್ ಅಶ್ವಿನ್ ಅಲ್ಲಗಳೆದಿದ್ದಾರೆ.

ನಾಗ್ ಅಶ್ವಿನ್ ಅವರ ಬೇಡಿಕೆ ಹೆಚ್ಚಿದೆ. ಇದಕ್ಕೆ ಕಾರಣ ಆಗಿರೋದು ‘ಕಲ್ಕಿ 2898 ಎಡಿ’ ಸಿನಿಮಾ. ಕಲ್ಪನೆಯಲ್ಲಿ ಮೂಡಿ ಬಂದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಸೀಕ್ವೆಲ್ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ಅವರು ಆಲಿಯಾ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.

ಇದನ್ನೂ ಓದಿ:ಆಲಿಯಾ ಭಟ್ ಬ್ಯಾಗ್ ಬೆಲೆ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ

ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್​ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ