AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?

Nag Ashwin: ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ನಾಗ್ ಅಶ್ವಿನ್, ‘ನಾನು ಆಲಿಯಾ ಭಟ್ ಜೊತೆಗೆ ಸಿನಿಮಾ ಮಾಡುತ್ತಿಲ್ಲ’ ಎಂದಿದ್ದಾರೆ.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:35 AM

Share

‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಭರ್ಜರಿ ಖುಷಿ ಆಗಿದ್ದರು. ಆದರೆ, ಇದನ್ನು ನಾಗ್ ಅಶ್ವಿನ್ ಅಲ್ಲಗಳೆದಿದ್ದಾರೆ.

ನಾಗ್ ಅಶ್ವಿನ್ ಅವರ ಬೇಡಿಕೆ ಹೆಚ್ಚಿದೆ. ಇದಕ್ಕೆ ಕಾರಣ ಆಗಿರೋದು ‘ಕಲ್ಕಿ 2898 ಎಡಿ’ ಸಿನಿಮಾ. ಕಲ್ಪನೆಯಲ್ಲಿ ಮೂಡಿ ಬಂದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಸೀಕ್ವೆಲ್ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ಅವರು ಆಲಿಯಾ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.

ಇದನ್ನೂ ಓದಿ:ಆಲಿಯಾ ಭಟ್ ಬ್ಯಾಗ್ ಬೆಲೆ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ

ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್​ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!