AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?

Nag Ashwin: ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ನಾಗ್ ಅಶ್ವಿನ್, ‘ನಾನು ಆಲಿಯಾ ಭಟ್ ಜೊತೆಗೆ ಸಿನಿಮಾ ಮಾಡುತ್ತಿಲ್ಲ’ ಎಂದಿದ್ದಾರೆ.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:35 AM

Share

‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಭರ್ಜರಿ ಖುಷಿ ಆಗಿದ್ದರು. ಆದರೆ, ಇದನ್ನು ನಾಗ್ ಅಶ್ವಿನ್ ಅಲ್ಲಗಳೆದಿದ್ದಾರೆ.

ನಾಗ್ ಅಶ್ವಿನ್ ಅವರ ಬೇಡಿಕೆ ಹೆಚ್ಚಿದೆ. ಇದಕ್ಕೆ ಕಾರಣ ಆಗಿರೋದು ‘ಕಲ್ಕಿ 2898 ಎಡಿ’ ಸಿನಿಮಾ. ಕಲ್ಪನೆಯಲ್ಲಿ ಮೂಡಿ ಬಂದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಸೀಕ್ವೆಲ್ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ಅವರು ಆಲಿಯಾ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.

ಇದನ್ನೂ ಓದಿ:ಆಲಿಯಾ ಭಟ್ ಬ್ಯಾಗ್ ಬೆಲೆ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ

ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್​ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ