AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?

Nag Ashwin: ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ನಿರ್ದೇಶಕ ನಾಗ್ ಅಶ್ವಿನ್, ‘ನಾನು ಆಲಿಯಾ ಭಟ್ ಜೊತೆಗೆ ಸಿನಿಮಾ ಮಾಡುತ್ತಿಲ್ಲ’ ಎಂದಿದ್ದಾರೆ.

‘ನಾನು ಆಲಿಯಾ ಜೊತೆ ಸಿನಿಮಾ ಮಾಡ್ತಿಲ್ಲ’: ನಾಗ್ ಅಶ್ವಿನ್ ಹೀಗೆ ಹೇಳಿದ್ದೇಕೆ?
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 13, 2024 | 6:35 AM

Share

‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿ ಫೇಮಸ್ ಆದ ನಾಗ್ ಅಶ್ವಿನ್ ಅವರು ಸದ್ಯ ಈ ಚಿತ್ರದ ಸೀಕ್ವೆಲ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ಕಲ್ಕಿ 2898 ಎಡಿ’ ಚಿತ್ರದ ನಿರ್ದೇಶಕ ಈಗ ಆಲಿಯಾ ಭಟ್ ಜೊತೆ ಸಿನಿಮಾ ಮಾಡುತ್ತಾರೆ ಎಂದು ವರದಿ ಆಗಿತ್ತು. ಈ ವಿಚಾರ ಕೇಳಿ ಫ್ಯಾನ್ಸ್ ಭರ್ಜರಿ ಖುಷಿ ಆಗಿದ್ದರು. ಆದರೆ, ಇದನ್ನು ನಾಗ್ ಅಶ್ವಿನ್ ಅಲ್ಲಗಳೆದಿದ್ದಾರೆ.

ನಾಗ್ ಅಶ್ವಿನ್ ಅವರ ಬೇಡಿಕೆ ಹೆಚ್ಚಿದೆ. ಇದಕ್ಕೆ ಕಾರಣ ಆಗಿರೋದು ‘ಕಲ್ಕಿ 2898 ಎಡಿ’ ಸಿನಿಮಾ. ಕಲ್ಪನೆಯಲ್ಲಿ ಮೂಡಿ ಬಂದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಸೀಕ್ವೆಲ್ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ. ಹೀಗಿರುವಾಗಲೇ ಅವರು ಆಲಿಯಾ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ನಾಗ್ ಅಶ್ವಿನ್ ಅವರು ಸಿನಿಮಾಗಳನ್ನು ಮಾಡುತ್ತಿರುವುದು ತೆಲುಗಿನಲ್ಲಿ. ಆಲಿಯಾ ಭಟ್ ಅವರಿಗೆ ತೆಲುಗು ಚಿತ್ರರಂಗ ಹೊಸದೇನು ಅಲ್ಲ. ಅವರು ಈಗಾಗಲೇ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈಗ ನಾಗ್ ಅಶ್ವಿನ್ ಅವರು ಮಹಿಳಾ ಪ್ರಧಾನ ಪಾತ್ರ ಮಾಡಲು ಹೊರಟಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ಆಲಿಯಾ ಹೀರೋಯಿನ್ ಎಂದು ಹೇಳಲಾಗಿತ್ತು.

ಇದನ್ನೂ ಓದಿ:ಆಲಿಯಾ ಭಟ್ ಬ್ಯಾಗ್ ಬೆಲೆ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ

ಆಲಿಯಾ ಭಟ್ ಅವರು ಹಲವು ಮಹಿಳಾ ಪ್ರಧಾನ ಸಿನಿಮಾ ಮಾಡಿ ಗಮನ ಸೆಳೆದಿದ್ದಾರೆ. ‘ರಾಜಿ’ ಚಿತ್ರದಲ್ಲಿ ಅವರ ನಟನೆ ತೋರಿಸಿದ್ದಾರೆ. ‘ಜಿಗ್ರಾ’ ಸಿನಿಮಾದಲ್ಲೂ ಅವರು ಪವರ್​ಫುಲ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಆಲಿಯಾ ಭಟ್ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ. ಅವರು ಇದೇ ರೀತಿಯ ಪಾತ್ರ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಆಲಿಯಾ ಭಟ್ ಅವರು ಇದಲ್ಲದೆ, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಲವ್ ಆ್ಯಂಡ್ ವಾರ್’ ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದಲ್ಲಿಯೂ ಆಲಿಯಾ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರದ ಸೀಕ್ವೆಲ್ನಲ್ಲಿ ಬ್ಯುಸಿ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ