AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ಹೀಗೆ ಮಾಡಲ್ಲ, ಕ್ಷಮಿಸಿ’: ಅಭಿಮಾನಿಗೆ ಹೊಡೆದು ಕ್ಷಮೆ ಕೇಳಿದ ನಾನಾ ಪಾಟೇಕರ್​

ವಿಡಿಯೋ ವೈರಲ್​ ಆದ ಬಳಿಕ ‘ಇದು ಸಿನಿಮಾದ ಒಂದು ದೃಶ್ಯ’ ಎಂದು ‘ಜರ್ನಿ’ ಚಿತ್ರತಂಡದವರು ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ‘ನಾವು ರಿಹರ್ಸಲ್​ ಮಾಡುತ್ತಿದ್ದೆವು. 2ನೇ ಬಾರಿ ರಿಹರ್ಸಲ್​ ಮಾಡುವಾಗ ಈ ಹುಡುಗ ಬಂದ. ಅವನು ನಮ್ಮ ತಂಡದವನೇ ಅಂತ ನಾನು ಭಾವಿಸಿದ್ದೆ’ ಎಂದು ನಾನಾ ಪಾಟೇಕರ್​ ಹೇಳಿದ್ದಾರೆ.

‘ಇನ್ಮುಂದೆ ಹೀಗೆ ಮಾಡಲ್ಲ, ಕ್ಷಮಿಸಿ’: ಅಭಿಮಾನಿಗೆ ಹೊಡೆದು ಕ್ಷಮೆ ಕೇಳಿದ ನಾನಾ ಪಾಟೇಕರ್​
ನಾನಾ ಪಾಟೇಕರ್​
ಮದನ್​ ಕುಮಾರ್​
|

Updated on: Nov 16, 2023 | 11:51 AM

Share

ನಟ ನಾನಾ ಪಾಟೇಕರ್​ (Nana Patekar) ಅವರು ಅಭಿಮಾನಿಗೆ ಹೊಡೆದು ವಿವಾದಕ್ಕೆ ಸಿಲುಕಿದ್ದಾರೆ. ತಮ್ಮ ಜೊತೆ ಫೋಟೋ ತೆಗೆದುಕೊಳ್ಳಲು ಬಂದ ಹುಡುಗನಿಗೆ ಅವರು ಹೊಡೆದ ವಿಡಿಯೋ ವೈರಲ್​ (Nana Patekar Viral Video) ಆಗಿತ್ತು. ಈ ಕೃತ್ಯಕ್ಕೆ ಎಲ್ಲರಿಂದ ಟೀಕೆ ವ್ಯಕ್ತವಾದ ಬಳಿಕ ನಾನಾ ಪಾಟೇಕರ್​ ಅವರು ಕ್ಷಮೆ ಕೇಳಿದ್ದಾರೆ. ‘ಈವರೆಗೂ ನಾನು ಯಾರಿಗೂ ಫೋಟೋ ಕೊಡಲ್ಲ ಎಂದು ಹೇಳಿರಲಿಲ್ಲ. ಅಚಾತುರ್ಯದಿಂದ ಹೀಗೆ ಆಗಿದೆ. ದಯವಿಟ್ಟು ನನ್ನನ್ನು ಕ್ಷಮಿಸಿ. ಇನ್ಮುಂದೆ ಹೀಗೆ ಮಾಡುವುದಿಲ್ಲ. ಆ ಹುಡುಗನ ಬಳಿ ನಾನು ನೇರವಾಗಿ ಕ್ಷಮೆ ಕೇಳುವವನಿದ್ದೆ. ಆದರೆ ಆತ ಭಯದಿಂದ ಓಡಿಹೋದ’ ಎಂದು ಅವರು ಹೇಳಿದ್ದಾರೆ. ಅವರು ಕ್ಷಮೆ (Nana Patekar Apology) ಕೇಳಿದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

ಏನಿದು ಘಟನೆ?

‘ಜರ್ನಿ’ ಚಿತ್ರದ ಚಿತ್ರೀಕರಣದಲ್ಲಿ ನಾನಾ ಪಾಟೇಕರ್​ ಅವರು ತೊಡಗಿಕೊಂಡಿದ್ದಾರೆ. ವಾರಾಣಸಿಯಲ್ಲಿ ಈ ಚಿತ್ರದ ಶೂಟಿಂಗ್​ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಅವರು ತೊಡಗಿದ್ದಾಗ ಒಬ್ಬ ಅಭಿಮಾನಿಯು ನಾನಾ ಪಾಟೇಕರ್​ ಜತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾನೆ. ಆಗ ನಾನಾ ಪಾಟೇಕರ್​ಗೆ ತೀವ್ರ ಸಿಟ್ಟು ಬಂದಿದೆ. ಮೊಬೈಲ್​ ಹಿಡಿದುಕೊಂಡು ಸೆಲ್ಫಿ ಕೇಳಲು ಬಂದ ಹುಡುಗನ ತಲೆಗೆ ಅವರು ಹೊಡೆದಿದ್ದಾರೆ. ಕೂಡಲೇ ಸೆಟ್​ನಲ್ಲಿದ್ದ ಇನ್ನುಳಿದ ಸಿಬ್ಬಂದಿ ಕೂಡ ಆ ಹುಡುಗನ ಕುತ್ತಿಗೆ ಹಿಡಿದು ಹೊರಗೆ ದೂಡಿದ್ದಾರೆ. ಇದನ್ನು ನೆಟ್ಟಿಗರು ಖಂಡಿಸಿದ್ದಾರೆ.

ಸಿನಿಮಾದ ದೃಶ್ಯ ಎಂದು ತೇಪೆ:

ವಿಡಿಯೋ ವೈರಲ್​ ಆದ ಬಳಿಕ ‘ಇದು ಸಿನಿಮಾದ ಒಂದು ದೃಶ್ಯ’ ಎಂದು ‘ಜರ್ನಿ’ ಚಿತ್ರತಂಡದವರು ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ‘ನಾನು ಒಬ್ಬ ಹುಡುಗನಿಗೆ ಹೊಡೆದ ವಿಡಿಯೋ ವೈರಲ್​ ಆಗಿದೆ. ಅದು ನಮ್ಮ ಸಿನಿಮಾದ ಶೂಟಿಂಗ್​ ಸನ್ನಿವೇಶ. ಏ ಮುದಕ.. ನೀನು ಟೋಪಿ ಮಾರುತ್ತೀಯಾ ಅಂತ ಒಬ್ಬ ಹುಡುಗ ಬಂದು ನನ್ನನ್ನು ಕೇಳುವ ದೃಶ್ಯ ಅದು. ಆತನಿಗೆ ನಾನು ಹೊಡೆದ ಕಳಿಸಬೇಕಿತ್ತು. ಅದರ ರಿಹರ್ಸಲ್​ ಮಾಡುತ್ತಿದ್ದೆವು. ಎರಡನೇ ಬಾರಿ ರಿಹರ್ಸಲ್​ ಮಾಡುವಾಗ ಈ ಹುಡುಗ ಬಂದ. ಇವನು ನಮ್ಮ ತಂಡದವನೇ ಎಂದು ನಾನು ಭಾವಿಸಿದ್ದೆ. ಆದರೆ ಆತ ಬೇರೆ ಯಾರೋ ಆಗಿದ್ದ. ಕೂಡಲೇ ಅವನು ಓಡಿ ಹೋದ. ಆತನ ಸ್ನೇಹಿತರು ಈ ವಿಡಿಯೋ ಶೂಟ್​ ಮಾಡಿದ್ದಾರೆ’ ಎಂದು ನಾನಾ ಪಾಟೇಕರ್​ ಹೇಳಿದ್ದಾರೆ.

ನಾನಾ ಪಾಟೇಕರ್​ ಅವರಿಗೆ ವಿವಾದ ಹೊಸದಲ್ಲ. ಈ ಹಿಂದೆ ಅವರ ಮೇಲೆ ನಟಿ ತನುಶ್ರೀ ದತ್ತ ಅವರು ಮೀಟೂ ಆರೋಪ ಹೊರಿಸಿದ್ದರು. ಈಗ ಹುಡುಗನಿಗೆ ಹೊಡೆದ ಕಾರಣಕ್ಕೆ ಅವರು ಸುದ್ದಿ ಆಗುತ್ತಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಪೋಷಕ ಪಾತ್ರ ಸೇರಿದಂತೆ ಎಲ್ಲ ರೀತಿಯ ಪಾತ್ರಗಳ ಮೂಲಕ ಅವರು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರದಲ್ಲಿ ಅವರು ಒಂದು ಪ್ರಮುಖ ಪಾತ್ರ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ