AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ: ಈಗಲಾದರು ಸಿನಿಮಾದ ಕಲೆಕ್ಷನ್ ಮೇಲೇರುತ್ತಾ?

Narendra Modi: 'ದಿ ಕಾಶ್ಮೀರ್ ಫೈಲ್ಸ್', 'ದಿ ಕೇರಳ ಸ್ಟೋರಿ' ಸಿನಿಮಾದ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು 'ದಿ ವ್ಯಾಕ್ಸಿನ್ ವಾರ್' ಸಿನಿಮಾದ ಬಗ್ಗೆ ಮಾತನಾಡಿದ್ದು, ಸಿನಿಮಾ ನಿರ್ಮಿಸಿರುವ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

'ದಿ ವ್ಯಾಕ್ಸಿನ್ ವಾರ್' ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ: ಈಗಲಾದರು ಸಿನಿಮಾದ ಕಲೆಕ್ಷನ್ ಮೇಲೇರುತ್ತಾ?
ನರೇಂದ್ರ ಮೋದಿ
Follow us
ಮಂಜುನಾಥ ಸಿ.
|

Updated on: Oct 05, 2023 | 7:16 PM

ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶಿಸಿರುವ ‘ದಿ ವ್ಯಾಕ್ಸಿನ್ ವಾರ್’ (The Vaccine war) ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದೆ. ಈ ಸಿನಿಮಾವು ಕೋವಿಡ್​ಗೆ ಭಾರತೀಯ ವ್ಯಾಕ್ಸಿನ್ ತಯಾರಿಸಿದ ಘಟನೆಯನ್ನು ಆಧರಿಸಿದೆ. ಸಿನಿಮಾಕ್ಕೆ ಬಾಕ್ಸ್ ಆಫೀಸ್​ನಲ್ಲಿ ನೀರಸ ಪತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಚಿತ್ರಮಂದಿರಗಳಲ್ಲಿ ಎತ್ತಂಗಡಿಯಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (Narendra Modi) ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಪ್ರಶಂಸಿದ್ದು, ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರನ್ನು ಅಭಿನಂದಿಸಿದ್ದಾರೆ.

ಜೋಧ್​ಪುರ್​ನಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾಷಣದ ಮಧ್ಯೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾವನ್ನು ಪ್ರಶಂಸಿದರು. ”ದಿ ವ್ಯಾಕ್ಸಿನ್ ವಾರ್’ ಹೆಸರಿನ ಸಿನಿಮಾ ಒಂದು ಇತ್ತೀಚೆಗೆ ಬಂದಿದೆ ಎಂದು ನಾನು ಕೇಳ್ಪಟ್ಟೆ. ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟಕ್ಕೆ ನಮ್ಮ ವಿಜ್ಞಾನಿಗಳು ಹಗಲು-ರಾತ್ರಿ ಪಟ್ಟ ಶ್ರಮ, ತಮ್ಮ ಲ್ಯಾಬ್​ನಲ್ಲಿ ಋಷಿಗಳ ರೀತಿಯಲ್ಲಿ ಮಾಡಿದ ಸಾಧನೆ, ಅದರಲ್ಲಿಯೂ ನಮ್ಮ ಮಹಿಳಾ ವಿಜ್ಞಾನಿಗಳು ಮಾಡಿರುವ ಸಾಧನೆಯನ್ನು ‘ದಿ ವ್ಯಾಕ್ಸಿನ ವಾರ್’ ಸಿನಿಮಾದಲ್ಲಿ ಅದ್ಭುತ ರೀತಿಯಲ್ಲಿ ತೋರಿಸಲಾಗಿದೆ. ಆ ಸಿನಿಮಾ ಇದೇ ವಾರ ತೆರೆಗೆ ಬಂದಿದೆ” ಎಂದಿದ್ದಾರೆ ಮೋದಿ.

”ನಮ್ಮ ವಿಜ್ಞಾನಿಗಳು ಇಷ್ಟು ಅದ್ಭುತವಾದ ಕಾರ್ಯ ಮಾಡಿದ್ದಾರೆಯೇ ಎಂದು ಆ ಸಿನಿಮಾ ನೋಡಿದ ಬಳಿಕ ಪ್ರತಿ ಭಾರತೀಯನಿಗೂ ಹೆಮ್ಮೆ ಎನಿಸುತ್ತಿದೆ. ಚಂದ್ರಯಾನ ನಡೆಯುತ್ತದೆ, ನಮ್ಮ ವಿಜ್ಞಾನಿಗಳ ಬಗ್ಗೆ ಗೌರವ ಹೆಚ್ಚುತ್ತದೆ. ವ್ಯಾಕ್ಸಿನ್ ನಿರ್ಮಾಣ ಆಗುತ್ತದೆ ನಮ್ಮ ವಿಜ್ಞಾನಿಗಳಿಗೆ ಗೌರವ ಸಂದಾಯವಾಗುತ್ತದೆ. ದೇಶದ ಯುವಕರು ವಿಜ್ಞಾನಿಗಳ ಬಗ್ಗೆ ವಿಜ್ಞಾನದ ಬಗ್ಗೆ ಆಕರ್ಷಿತರಾಗುತ್ತಿದ್ದಾರೆ” ಎಂದಿದ್ದಾರೆ ಮೋದಿ.

ಇದನ್ನೂ ಓದಿ:ಮತ್ತಷ್ಟು ತಗ್ಗಿತು ‘ದಿ ವ್ಯಾಕ್ಸಿನ್ ವಾರ್’ ಗಳಿಕೆ; ಎರಡನೇ ದಿನ ಕೆಲವೇ ಲಕ್ಷ ಗಳಿಸಿದ ವಿವೇಕ್ ಸಿನಿಮಾ

”ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರ್ಮಿಸಿದ ತಂಡಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಸಿನಿಮಾ ಮೂಲಕ ನೀವು ದೇಶದ ವಿಜ್ಞಾನಿಗಳು ಹಾಗೂ ವಿಜ್ಞಾನಕ್ಕೆ ಮಹತ್ವ ನೀಡಿದ್ದೀರಿ. ಈ ನಿಮ್ಮ ಕಾರ್ಯವು ಮುಂಬರುವ ಪೀಳಿಗೆಗೆ ಉಪಯುಕ್ತವಾಗಲಿದೆ” ಎಂದಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆಯೂ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಪರವಾಗಿ ಮಾತನಾಡಿದ್ದರು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ದಿ ಕೇರಳ ಸ್ಟೋರಿ’ ಸಿನಿಮಾದ ಪರವಾಗಿಯೂ ಮಾತನಾಡಿದ್ದರು. ಈ ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಹಿಟ್ ಆಗುವ ಜೊತೆಗೆ ವಿವಾದವನ್ನೂ ಹುಟ್ಟು ಹಾಕಿದ್ದವು. ಸಮಾಜದಲ್ಲಿ ದ್ವೇಷ ಹುಟ್ಟಿಸುವ ಸಿನಿಮಾಗಳು ಇವಾಗಿವೇ ಎಂದು ಹಲವರು ಆರೋಪ ಹೊರಹಾಕಿದ್ದರು. ಕೆಲವು ರಾಜ್ಯಗಳು ಈ ಸಿನಿಮಾಕ್ಕೆ ವಿರೋಧ ವ್ಯಕ್ತಪಡಿಸಿ ಬ್ಯಾನ್ ಸಹ ಮಾಡಿದವು.

ಇದೀಗ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು ಬಾಕ್ಸ್ ಆಫೀಸ್​ನಲ್ಲಿ ಕುಸಿಯುತ್ತಿರುವ ಸಿನಿಮಾದ ಕಲೆಕ್ಷನ್ ಅನ್ನು ಮೇಲೆತ್ತುವ ನಿರೀಕ್ಷೆ ಹುಟ್ಟಿಸಿದೆ. ಈ ಹಿಂದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ವಿಷಯದಲ್ಲಿಯೂ ಇದೇ ರೀತಿ ಆಗಿತ್ತು. ಪ್ರಧಾನಿ ಮೋದಿಯವರು ಸಿನಿಮಾದ ಬಗ್ಗೆ ಮಾತನಾಡಿದ ಬಳಿಕ ಸಿನಿಮಾದ ಕಲೆಕ್ಷನ್ ಭಾರಿ ದೊಡ್ಡ ಮಟ್ಟದಲ್ಲಿ ಏರಿಕೆ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು