AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ

ವಿವಾದಿತ ಗೋದ್ರಾ ಹತ್ಯಾಕಾಂಡದ ವಿಷಯವನ್ನು ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮಾಡಲಾಗಿದೆ. ಇಂದು (ಡಿಸೆಂಬರ್​ 2) ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಬಳಿಕ ಅವರು ಸೋಶಿಯಲ್ ಮೀಡಿಯಾ ಮೂಲಕ ಚಿತ್ರತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಮೋದಿ
Follow us
ಮದನ್​ ಕುಮಾರ್​
|

Updated on: Dec 02, 2024 | 8:08 PM

ಬಾಲಿವುಡ್​ ನಟ ವಿಕ್ರಾಂತ್ ಮಾಸಿ ಪ್ರಮುಖ ಪಾತ್ರ ಮಾಡಿರುವ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವೀಕ್ಷಿಸಿದ್ದಾರೆ. ಇಂದು (ಡಿಸೆಂಬರ್​ 2) ಸಂಸತ್ ಭವನದ ಬಾಲಯೋಗಿ ಸಭಾಂಗಣದಲ್ಲಿ ಅವರು ಸಿನಿಮಾ ನೋಡಿದರು. ಅವರ ಜೊತೆ ಅನೇಕ ಸಚಿವರು, ಸಂಸದರು ಹಾಗೂ ಚಿತ್ರತಂಡದವರು ಕೂಡ ಭಾಗಿ ಆಗಿದ್ದರು. ಸಿನಿಮಾ ವೀಕ್ಷಿಸಿದ ನಂತರ ಸೋಶಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ ಅವರು ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡಕ್ಕೆ ಭೇಷ್​ ಎಂದಿದ್ದಾರೆ.

ಧೀರಜ್ ಅವರು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​, ಶೋಭಾ ಕಪೂರ್​, ಅಮೂಲ್ ವಿ. ಮೋಹನ್, ಅನ್ಶೂಲ್ ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿಧಿ ಡೋಗ್ರ, ಬರ್ಕಾ ಸಿಂಗ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರತಂಡದ ಪ್ರಯತ್ನವನ್ನು ಮೋದಿ ಹೊಗಳಿದ್ದಾರೆ.

ಸಿನಿಮಾ ವೀಕ್ಷಿಸಿದ ನಂತರ ನರೇಂದ್ರ ಮೋದಿ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಎನ್​ಡಿಎ ಸಂಸದರ ಜೊತೆಗೂಡಿ ದಿ ಸಾಬರಮತಿ ರಿಪೋರ್ಟ್​ ಸಿನಿಮಾ ನೋಡಿದೆ. ಚಿತ್ರತಂಡದ ಪ್ರಯತ್ನಕ್ಕೆ ನಾನು ಶ್ಲಾಘನೆ ವ್ಯಕ್ತಪಡಿಸುತ್ತೇನೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ. ಅವರಿಂದ ಈ ಹೊಗಳಿಕೆ ಸಿಕ್ಕದ್ದಕ್ಕೆ ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡದವರಿಗೆ ತುಂಬ ಖುಷಿ ಆಗಿದೆ.

ನರೇಂದ್ರ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಚಿವ ಜೆಪಿ ನಡ್ಡಾ ಕೂಡ ಸಿನಿಮಾ ವೀಕ್ಷಿಸಿದರು. ಚಿತ್ರತಂಡದವರಾದ ವಿಕ್ರಾಂತ್ ಮಾಸಿ, ಏಕ್ತಾ ಕಪೂರ್​, ರಿದ್ಧಿ ಡೋಗ್ರ, ನಿರ್ದೇಶಕ ಧೀರಜ್ ಮುಂತಾದವರು ಸಹ ಮೋದಿ ಜೊತೆ ಕುಳಿತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಕ್ರಾಂತ್ ಮಾಸಿ ಅವರು, ‘ಇದು ತುಂಬ ಭಿನ್ನ ಅನುಭವ. ನನಗೆ ತುಂಬ ಖುಷಿ ಆಗಿದೆ. ಈ ಅನುಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿ ಜೊತೆ ಕುಳಿತು ಸಿನಿಮಾ ನೋಡಿದ್ದು, ನನ್ನ ವೃತ್ತಿಜೀವನದ ಉತ್ತುಂಗ ಕ್ಷಣ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಬಿಡುಗಡೆ ಆದಾಗ ಕೂಡ ಮೋದಿ ಅವರು ಟ್ವೀಟ್ ಮಾಡಿದ್ದರು. ‘ಜನಸಾಮಾನ್ಯರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲದವರೆಗೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಅಂತಿಮವಾಗಿ ಸತ್ಯ ಹೊರಗೆ ಬರುತ್ತದೆ’ ಎಂದು ಅವರು ಪೋಸ್ಟ್ ಮಾಡಿದ್ದರು. 2002ರ ಫೆಬ್ರವರಿ 27ರಂದು ನಡೆದ ಗೋದ್ರಾ ರೈಲು ದುರಂತದ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮೂಡಿಬಂದಿದೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ