AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ

ವಿವಾದಿತ ಗೋದ್ರಾ ಹತ್ಯಾಕಾಂಡದ ವಿಷಯವನ್ನು ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮಾಡಲಾಗಿದೆ. ಇಂದು (ಡಿಸೆಂಬರ್​ 2) ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಬಳಿಕ ಅವರು ಸೋಶಿಯಲ್ ಮೀಡಿಯಾ ಮೂಲಕ ಚಿತ್ರತಂಡಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ನೋಡಿ ಮನಸಾರೆ ಹೊಗಳಿದ ನರೇಂದ್ರ ಮೋದಿ
‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಮೋದಿ
ಮದನ್​ ಕುಮಾರ್​
|

Updated on: Dec 02, 2024 | 8:08 PM

Share

ಬಾಲಿವುಡ್​ ನಟ ವಿಕ್ರಾಂತ್ ಮಾಸಿ ಪ್ರಮುಖ ಪಾತ್ರ ಮಾಡಿರುವ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವೀಕ್ಷಿಸಿದ್ದಾರೆ. ಇಂದು (ಡಿಸೆಂಬರ್​ 2) ಸಂಸತ್ ಭವನದ ಬಾಲಯೋಗಿ ಸಭಾಂಗಣದಲ್ಲಿ ಅವರು ಸಿನಿಮಾ ನೋಡಿದರು. ಅವರ ಜೊತೆ ಅನೇಕ ಸಚಿವರು, ಸಂಸದರು ಹಾಗೂ ಚಿತ್ರತಂಡದವರು ಕೂಡ ಭಾಗಿ ಆಗಿದ್ದರು. ಸಿನಿಮಾ ವೀಕ್ಷಿಸಿದ ನಂತರ ಸೋಶಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ ಅವರು ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡಕ್ಕೆ ಭೇಷ್​ ಎಂದಿದ್ದಾರೆ.

ಧೀರಜ್ ಅವರು ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಏಕ್ತಾ ಕಪೂರ್​, ಶೋಭಾ ಕಪೂರ್​, ಅಮೂಲ್ ವಿ. ಮೋಹನ್, ಅನ್ಶೂಲ್ ಮೋಹನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಕ್ರಾಂತ್ ಮಾಸಿ, ರಾಶಿ ಖನ್ನಾ, ರಿಧಿ ಡೋಗ್ರ, ಬರ್ಕಾ ಸಿಂಗ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರತಂಡದ ಪ್ರಯತ್ನವನ್ನು ಮೋದಿ ಹೊಗಳಿದ್ದಾರೆ.

ಸಿನಿಮಾ ವೀಕ್ಷಿಸಿದ ನಂತರ ನರೇಂದ್ರ ಮೋದಿ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಎನ್​ಡಿಎ ಸಂಸದರ ಜೊತೆಗೂಡಿ ದಿ ಸಾಬರಮತಿ ರಿಪೋರ್ಟ್​ ಸಿನಿಮಾ ನೋಡಿದೆ. ಚಿತ್ರತಂಡದ ಪ್ರಯತ್ನಕ್ಕೆ ನಾನು ಶ್ಲಾಘನೆ ವ್ಯಕ್ತಪಡಿಸುತ್ತೇನೆ’ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ. ಅವರಿಂದ ಈ ಹೊಗಳಿಕೆ ಸಿಕ್ಕದ್ದಕ್ಕೆ ‘ದಿ ಸಾಬರಮತಿ ರಿಪೋರ್ಟ್​’ ಚಿತ್ರತಂಡದವರಿಗೆ ತುಂಬ ಖುಷಿ ಆಗಿದೆ.

ನರೇಂದ್ರ ಮೋದಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಸಚಿವ ಜೆಪಿ ನಡ್ಡಾ ಕೂಡ ಸಿನಿಮಾ ವೀಕ್ಷಿಸಿದರು. ಚಿತ್ರತಂಡದವರಾದ ವಿಕ್ರಾಂತ್ ಮಾಸಿ, ಏಕ್ತಾ ಕಪೂರ್​, ರಿದ್ಧಿ ಡೋಗ್ರ, ನಿರ್ದೇಶಕ ಧೀರಜ್ ಮುಂತಾದವರು ಸಹ ಮೋದಿ ಜೊತೆ ಕುಳಿತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಕ್ರಾಂತ್ ಮಾಸಿ ಅವರು, ‘ಇದು ತುಂಬ ಭಿನ್ನ ಅನುಭವ. ನನಗೆ ತುಂಬ ಖುಷಿ ಆಗಿದೆ. ಈ ಅನುಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿ ಜೊತೆ ಕುಳಿತು ಸಿನಿಮಾ ನೋಡಿದ್ದು, ನನ್ನ ವೃತ್ತಿಜೀವನದ ಉತ್ತುಂಗ ಕ್ಷಣ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋಧ್ರಾ ದುರಂತದ ಸತ್ಯ ಹೊರಬರ್ತಿದೆ: ‘ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಮೋದಿ ಟ್ವೀಟ್

‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಬಿಡುಗಡೆ ಆದಾಗ ಕೂಡ ಮೋದಿ ಅವರು ಟ್ವೀಟ್ ಮಾಡಿದ್ದರು. ‘ಜನಸಾಮಾನ್ಯರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲದವರೆಗೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಅಂತಿಮವಾಗಿ ಸತ್ಯ ಹೊರಗೆ ಬರುತ್ತದೆ’ ಎಂದು ಅವರು ಪೋಸ್ಟ್ ಮಾಡಿದ್ದರು. 2002ರ ಫೆಬ್ರವರಿ 27ರಂದು ನಡೆದ ಗೋದ್ರಾ ರೈಲು ದುರಂತದ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾ ಮೂಡಿಬಂದಿದೆ. ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು