AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಬ್ಯಾನ್​ಗೆ ಒತ್ತಾಯಿಸುವ ಮೂಲಕ, ಕಾಂಗ್ರೆಸ್ ಭಯೋತ್ಪಾದಕರೊಟ್ಟಿಗೆ ನಿಂತಿದೆ: ಪ್ರಧಾನಿ ಮೋದಿ

The Kerala Story: ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

'ದಿ ಕೇರಳ ಸ್ಟೋರಿ' ಬ್ಯಾನ್​ಗೆ ಒತ್ತಾಯಿಸುವ ಮೂಲಕ, ಕಾಂಗ್ರೆಸ್ ಭಯೋತ್ಪಾದಕರೊಟ್ಟಿಗೆ ನಿಂತಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಮಂಜುನಾಥ ಸಿ.
|

Updated on:May 05, 2023 | 3:39 PM

Share

ಇಂದು (ಮೇ 05) ಬಿಡುಗಡೆ ಆಗಿರುವ ವಿವಾದಾತ್ಮಕ ‘ದಿ ಕೇರಳ ಸ್ಟೋರಿ‘ (The Kerala Story) ಸಿನಿಮಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ. ಇಂದು ಬಳ್ಳಾರಿಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ”ದಿ ಕೇರಳ ಸ್ಟೋರಿ’ ಸಿನಿಮಾವು ಸುಂದರ ರಾಜ್ಯ ಕೇರಳದಲ್ಲಿ ನಡೆದಿರುವ ಕರಾಳ ಘಟನೆಗಳ ಮೇಲೆ ಆಧರಿಸಿದ್ದೆ. ಆದರೆ ಕಾಂಗ್ರೆಸ್​ನವರು ಆ ಸಿನಿಮಾವನ್ನು ಬ್ಯಾನ್ ಮಾಡಲು ಒತ್ತಾಯಿಸುವ ಮೂಲಕ ಭಯೋತ್ಪಾದಕರ ಜೊತೆಗೆ ನಿಂತಿದ್ದಾರೆ” ಎಂದಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾವು ಕೇರಳದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಲೋಕದ ಮುಂದೆ ತೆರೆದಿಟ್ಟಿದೆ. ಆದರೆ ದೇಶದ ಈ ದುರಾದೃಷ್ಟಕರ ಸಂಗತಿ ಎಂದರೆ ಕಾಂಗ್ರೆಸ್ ಪಕ್ಷವು ಈ ಭಯೋತ್ಪಾದಕರ ಮನಸ್ಥಿತಿಯವರ ಬೆಂಬಲಕ್ಕೆ ನಿಂತಿದ್ದಾರೆ, ಆ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ, ಈ ಭಯೋತ್ಪಾದನೆಯ ಪ್ರವೃತ್ತಿಯೊಂದಿಗೆ ನಂಟು ಹೊಂದಿರುವವರೊಂದಿಗೆ ಹಿಂಬಾಗಿಲಿನ ರಾಜಕೀಯ ಮಾತುಕತೆಗಳನ್ನು ಸಹ ಕಾಂಗ್ರೆಸ್ ನಡೆಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ ಪ್ರಧಾನಿ ಮೋದಿ.

ಸುದಿಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾವು ಕೇರಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಾಂತರ, ಲವ್ ಜಿಹಾದ್​ನ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಬಿತ್ತುವ ಹಾಗೂ ಕೇರಳ ರಾಜ್ಯದ ಘನತೆಗೆ ಕುತ್ತು ತರುವ ಪೂರ್ವೋದ್ದೇಶದಿಂದ ನಿರ್ಮಿಸಲಾಗಿದೆ ಎಂದು ಕೇರಳದ ಆಡಳಿತ ಸರ್ಕಾರ, ವಿಪಕ್ಷವಾದ ಕಾಂಗ್ರೆಸ್, ಕೇರಳ ಕಾಂಗ್ರೆಸ್ ಹಾಗೂ ಇನ್ನಿತರೆ ಕೆಲವು ಪಕ್ಷಗಳು ವಿರೋಧಿಸಿವೆ. ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯಲು ಮನವಿಯನ್ನು ಸಹ ಮಾಡಿದ್ದವು.

ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೂ ಬೆಂಬಲಿಸಿ ಪ್ರಧಾನಿ ಮೋದಿ ಮಾತನಾಡಿದ್ದರು. ಆ ಸಿನಿಮಾ ಕಾಶ್ಮೀರದಲ್ಲಿ 1990 ರಲ್ಲಿ ನಡೆದಿದೆ ಎನ್ನಲಾಗುವ ಹಿಂದುಗಳ ಹತ್ಯಾಕಾಂಡದ ಕುರಿತಾದ ಕತೆಯನ್ನು ಒಳಗೊಂಡಿತ್ತು. ಆ ಸಿನಿಮಾ ಸಹ ಬಿಡುಗಡೆಗೆ ಮುನ್ನ ಭಾರಿ ವಿವಾದ ಸೃಷ್ಟಿಸಿತ್ತು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಸೃಷ್ಟಿಸುವ ಕಾರಣ ನಿರ್ಮಿಸಲಾದ ಪ್ರೊಪೊಗ್ಯಾಂಡಾ ಸಿನಿಮಾ ಇದಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಇತರೆ ಕೆಲವು ಪಕ್ಷಗಳು ಟೀಕಿಸಿದ್ದವು. ಇದೀಗ ‘ದಿ ಕೇರಳ ಸ್ಟೋರಿ’ ಸಿನಿಮಾದ ವಿರುದ್ಧವೂ ಅಂಥಹುದೇ ಆರೋಪಗಳು ಕೇಳಿಬರುತ್ತಿರುವಾಗಲೇ ಪ್ರಧಾನಿ ಮೋದಿಯವರು ಸಿನಿಮಾದ ಪರವಾಗಿ ಮಾತನಾಡಿದ್ದಾರೆ.

ಸಿಬಿಎಫ್​ಸಿಯಿಂದ ಎ ಪ್ರಮಾಣ ‘ದಿ ಕೇರಳ ಸ್ಟೋರಿ’ ಸಿನಿಮಾವು ಮೇ 5 ರಂದು ಬಿಡುಗಡೆ ಆಗಿದೆ. ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಿಲಾನಿ, ಸಿದ್ದ ಇದ್ನಾನಿ ಇನ್ನಿತರರು ನಟಿಸಿದ್ದಾರೆ. ಸುದಿಪ್ತೊ ಸೇನ್ ನಿರ್ದೇಶಿಸಿರುವ ಈ ಸಿನಿಮಾವನ್ನು ವಿಪುಲ್ ಅಮೃತಲ್ ಶಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Fri, 5 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್