AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಬ್ಯಾನ್​ಗೆ ಒತ್ತಾಯಿಸುವ ಮೂಲಕ, ಕಾಂಗ್ರೆಸ್ ಭಯೋತ್ಪಾದಕರೊಟ್ಟಿಗೆ ನಿಂತಿದೆ: ಪ್ರಧಾನಿ ಮೋದಿ

The Kerala Story: ಬಳ್ಳಾರಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

'ದಿ ಕೇರಳ ಸ್ಟೋರಿ' ಬ್ಯಾನ್​ಗೆ ಒತ್ತಾಯಿಸುವ ಮೂಲಕ, ಕಾಂಗ್ರೆಸ್ ಭಯೋತ್ಪಾದಕರೊಟ್ಟಿಗೆ ನಿಂತಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಮಂಜುನಾಥ ಸಿ.
|

Updated on:May 05, 2023 | 3:39 PM

Share

ಇಂದು (ಮೇ 05) ಬಿಡುಗಡೆ ಆಗಿರುವ ವಿವಾದಾತ್ಮಕ ‘ದಿ ಕೇರಳ ಸ್ಟೋರಿ‘ (The Kerala Story) ಸಿನಿಮಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ. ಇಂದು ಬಳ್ಳಾರಿಯಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರಧಾನಿ ಮೋದಿ, ”ದಿ ಕೇರಳ ಸ್ಟೋರಿ’ ಸಿನಿಮಾವು ಸುಂದರ ರಾಜ್ಯ ಕೇರಳದಲ್ಲಿ ನಡೆದಿರುವ ಕರಾಳ ಘಟನೆಗಳ ಮೇಲೆ ಆಧರಿಸಿದ್ದೆ. ಆದರೆ ಕಾಂಗ್ರೆಸ್​ನವರು ಆ ಸಿನಿಮಾವನ್ನು ಬ್ಯಾನ್ ಮಾಡಲು ಒತ್ತಾಯಿಸುವ ಮೂಲಕ ಭಯೋತ್ಪಾದಕರ ಜೊತೆಗೆ ನಿಂತಿದ್ದಾರೆ” ಎಂದಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾವು ಕೇರಳದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳನ್ನು ಲೋಕದ ಮುಂದೆ ತೆರೆದಿಟ್ಟಿದೆ. ಆದರೆ ದೇಶದ ಈ ದುರಾದೃಷ್ಟಕರ ಸಂಗತಿ ಎಂದರೆ ಕಾಂಗ್ರೆಸ್ ಪಕ್ಷವು ಈ ಭಯೋತ್ಪಾದಕರ ಮನಸ್ಥಿತಿಯವರ ಬೆಂಬಲಕ್ಕೆ ನಿಂತಿದ್ದಾರೆ, ಆ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ, ಈ ಭಯೋತ್ಪಾದನೆಯ ಪ್ರವೃತ್ತಿಯೊಂದಿಗೆ ನಂಟು ಹೊಂದಿರುವವರೊಂದಿಗೆ ಹಿಂಬಾಗಿಲಿನ ರಾಜಕೀಯ ಮಾತುಕತೆಗಳನ್ನು ಸಹ ಕಾಂಗ್ರೆಸ್ ನಡೆಸುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ ಪ್ರಧಾನಿ ಮೋದಿ.

ಸುದಿಪ್ತೊ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾವು ಕೇರಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಾಂತರ, ಲವ್ ಜಿಹಾದ್​ನ ಕತೆಯನ್ನು ಒಳಗೊಂಡಿದೆ. ಈ ಸಿನಿಮಾವು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಬಿತ್ತುವ ಹಾಗೂ ಕೇರಳ ರಾಜ್ಯದ ಘನತೆಗೆ ಕುತ್ತು ತರುವ ಪೂರ್ವೋದ್ದೇಶದಿಂದ ನಿರ್ಮಿಸಲಾಗಿದೆ ಎಂದು ಕೇರಳದ ಆಡಳಿತ ಸರ್ಕಾರ, ವಿಪಕ್ಷವಾದ ಕಾಂಗ್ರೆಸ್, ಕೇರಳ ಕಾಂಗ್ರೆಸ್ ಹಾಗೂ ಇನ್ನಿತರೆ ಕೆಲವು ಪಕ್ಷಗಳು ವಿರೋಧಿಸಿವೆ. ಸಿನಿಮಾವು ಕೇರಳದಲ್ಲಿ ಬಿಡುಗಡೆ ಆಗದಂತೆ ತಡೆಯಲು ಮನವಿಯನ್ನು ಸಹ ಮಾಡಿದ್ದವು.

ಈ ಹಿಂದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಕ್ಕೂ ಬೆಂಬಲಿಸಿ ಪ್ರಧಾನಿ ಮೋದಿ ಮಾತನಾಡಿದ್ದರು. ಆ ಸಿನಿಮಾ ಕಾಶ್ಮೀರದಲ್ಲಿ 1990 ರಲ್ಲಿ ನಡೆದಿದೆ ಎನ್ನಲಾಗುವ ಹಿಂದುಗಳ ಹತ್ಯಾಕಾಂಡದ ಕುರಿತಾದ ಕತೆಯನ್ನು ಒಳಗೊಂಡಿತ್ತು. ಆ ಸಿನಿಮಾ ಸಹ ಬಿಡುಗಡೆಗೆ ಮುನ್ನ ಭಾರಿ ವಿವಾದ ಸೃಷ್ಟಿಸಿತ್ತು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಸೃಷ್ಟಿಸುವ ಕಾರಣ ನಿರ್ಮಿಸಲಾದ ಪ್ರೊಪೊಗ್ಯಾಂಡಾ ಸಿನಿಮಾ ಇದಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಇತರೆ ಕೆಲವು ಪಕ್ಷಗಳು ಟೀಕಿಸಿದ್ದವು. ಇದೀಗ ‘ದಿ ಕೇರಳ ಸ್ಟೋರಿ’ ಸಿನಿಮಾದ ವಿರುದ್ಧವೂ ಅಂಥಹುದೇ ಆರೋಪಗಳು ಕೇಳಿಬರುತ್ತಿರುವಾಗಲೇ ಪ್ರಧಾನಿ ಮೋದಿಯವರು ಸಿನಿಮಾದ ಪರವಾಗಿ ಮಾತನಾಡಿದ್ದಾರೆ.

ಸಿಬಿಎಫ್​ಸಿಯಿಂದ ಎ ಪ್ರಮಾಣ ‘ದಿ ಕೇರಳ ಸ್ಟೋರಿ’ ಸಿನಿಮಾವು ಮೇ 5 ರಂದು ಬಿಡುಗಡೆ ಆಗಿದೆ. ಅದಾ ಶರ್ಮಾ, ಯೋಗಿತಾ ಬಿಹಾನಿ, ಸೋನಿಯಾ ಬಿಲಾನಿ, ಸಿದ್ದ ಇದ್ನಾನಿ ಇನ್ನಿತರರು ನಟಿಸಿದ್ದಾರೆ. ಸುದಿಪ್ತೊ ಸೇನ್ ನಿರ್ದೇಶಿಸಿರುವ ಈ ಸಿನಿಮಾವನ್ನು ವಿಪುಲ್ ಅಮೃತಲ್ ಶಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Fri, 5 May 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ