AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ

Shah Rukh Khan | Narendra Modi: ಶಾರುಖ್​ ಖಾನ್​ ಅವರ ಫ್ಯಾನ್​ ಪೇಜ್​ಗಳಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Pathaan Movie: ‘ಶ್ರೀನಗರದಲ್ಲಿ ದಶಕಗಳ ಬಳಿಕ ಹೌಸ್​ಫುಲ್​ ಆಗಿದೆ’: ‘ಪಠಾಣ್​’ ಗೆಲುವಿನ ಬಳಿಕ ಸಂಸತ್ತಿನಲ್ಲಿ ಮೋದಿ ಭಾಷಣ
ಶಾರುಖ್ ಖಾನ್, ನರೇಂದ್ರ ಮೋದಿ
ಮದನ್​ ಕುಮಾರ್​
|

Updated on: Feb 09, 2023 | 3:36 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರ ‘ಪಠಾಣ್​’ ಸಿನಿಮಾ ಎಲ್ಲೆಲ್ಲೂ ಧೂಳೆಬ್ಬಿಸಿದೆ. ವಿಶ್ವಾದ್ಯಂತ ಈ ಚಿತ್ರ ಉತ್ತಮ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಮಾತ್ರವಲ್ಲದೇ ಹಲವಾರು ಸೆಲೆಬ್ರಿಟಿಗಳು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲೂ ‘ಪಠಾಣ್​’ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಇದು ಶಾರುಖ್​ ಖಾನ್​ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ. ಈಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಂಸತ್ತಿನಲ್ಲಿ ಆಡಿದ ಒಂದು ಮಾತು ಸಖತ್​ ವೈರಲ್​ ಆಗಿದೆ. ‘ದಶಕಗಳ ಬಳಿಕ ಶ್ರೀನಗರದಲ್ಲಿ ಚಿತ್ರಮಂದಿರಗಳು ಹೌಸ್​ಫುಲ್​ ಆಗಿವೆ’ ಎಂದು ಅವರು ಹೇಳಿದ್ದಾರೆ. ‘ಪಠಾಣ್​’ (Pathaan Movie) ಚಿತ್ರವನ್ನೇ ಉದ್ದೇಶಿಸಿ ಅವರು ಈ ಮಾತು ಹೇಳಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಮೊದಲಿನ ಪರಿಸ್ಥಿತಿ ಹೇಗಿತ್ತು? ಈಗ ಹೇಗಿದೆ ಎಂಬುದರ ಕುರಿತು ಮಾತನಾಡುವಾಗ ನರೇಂದ್ರ ಮೋದಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಎಷ್ಟೋ ವರ್ಷಗಳ ಬಳಿಕ ಅಲ್ಲಿನ ಚಿತ್ರಮಂದಿರಗಳಲ್ಲಿ ಸಿನಿಮಾಗಳು ಹೌಸ್​​ ಫುಲ್ ಪ್ರದರ್ಶನ ಕಾಣುತ್ತಿವೆ. ಅಷ್ಟರಮಟ್ಟಿಗೆ ಅಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಆದರೆ ಅವರು ‘ಪಠಾಣ್​’ ಚಿತ್ರದ ಹೆಸರನ್ನು ಪ್ರಸ್ತಾಪಿಸಿಲ್ಲ. ಇತ್ತೀಚಿನ ದಿನಗಳಲ್ಲಿ ‘ಪಠಾಣ್​’ ಚಿತ್ರವೇ ಅಲ್ಲಿ ಹೌಸ್​ ಫುಲ್​ ಆಗಿರುವುದರಿಂದ ಮೋದಿ ಮಾತನಾಡಿರುವುದು ಈ ಸಿನಿಮಾದ ಕುರಿತಾಗಿಯೇ ಎಂದು ಫ್ಯಾನ್ಸ್​ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: Pathaan: ‘ಪಠಾಣ್​ ಇಷ್ಟ ಆಗಿಲ್ಲ’: ಮಗುವಿನ ವಿಮರ್ಶೆಯನ್ನೂ ಗಂಭೀರವಾಗಿ ತೆಗೆದುಕೊಂಡ ಶಾರುಖ್​ ಖಾನ್​

ಶಾರುಖ್​ ಖಾನ್​ ಅವರ ಫ್ಯಾನ್​ ಪೇಜ್​ಗಳಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಮೋದಿ ಹೇಳಿದ ಮೇಲೆ ಎಲ್ಲರೂ ಒಪ್ಪಲೇಬೇಕು’ ಎನ್ನುತ್ತಿದ್ದಾರೆ ನೆಟ್ಟಿಗರು. ‘ಇದು ನಮ್ಮ ಶಾರುಖ್​ ಖಾನ್​ ತಾಕತ್ತು’ ಎಂದು ಅಪ್ಪಟ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

‘ಕೆಜಿಎಫ್​ 2’ ಚಿತ್ರದ ದಾಖಲೆ ಮುರಿದ ‘ಪಠಾಣ್​’:

‘ಪಠಾಣ್​’ ಸಿನಿಮಾ ಗೆಲ್ಲಲಿ ಎಂಬುದು ಅಭಿಮಾನಿಗಳ ಬಯಕೆ ಮತ್ತು ಹಾರೈಕೆ ಆಗಿತ್ತು. ಈ ಸಿನಿಮಾ ಗೆದ್ದಿರುವುದು ಮಾತ್ರವಲ್ಲದೇ ಅನೇಕ ದಾಖಲೆಗಳನ್ನು ಕೂಡ ಬರೆಯುತ್ತಿದೆ. ‘ಕೆಜಿಎಫ್​ 2’ ಚಿತ್ರ ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ ಒಟ್ಟು ಹಣ 434.70 ಕೋಟಿ ರೂಪಾಯಿ. ಈ ದಾಖಲೆಯನ್ನು ಮುರಿಯುವಲ್ಲಿ ‘ಪಠಾಣ್​’ ಸಿನಿಮಾ ಯಶಸ್ವಿ ಆಗಿದೆ. ಮಂಗಳವಾರವೇ (ಫೆ.7) ಈ ಸಿನಿಮಾದ ಗಳಿಕೆ 430.25 ಕೋಟಿ ರೂಪಾಯಿ ಆಗಿತ್ತು. ಬುಧವಾರ ಕೂಡ ಹಲವು ಕಡೆಗಳಲ್ಲಿ ಉತ್ತಮ ಪ್ರದರ್ಶನ ಕಂಡಿರುವುದರಿಂದ ಅನಾಯಾಸವಾಗಿ ‘ಕೆಜಿಎಫ್​ 2’ ಚಿತ್ರವನ್ನು ಇದು ಹಿಂದಿಕ್ಕಿದೆ ಎಂದು ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್