Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ

The Kerala Story: ‘ಒಂದು ರೀತಿಯಲ್ಲಿ ಇದು ಅಪಾಯಕಾರಿ ಟ್ರೆಂಡ್​. ಅದರಲ್ಲಿ ಅನುಮಾನವೇ ಇಲ್ಲ. ಹಿಟ್ಲರ್​ ಕಾಲದ ನಾಜಿ ಜರ್ಮನಿ ರೀತಿ ನಾವು ಆಗುತ್ತಿದ್ದೇವೆ’ ಎಂದು ನಸೀರುದ್ದೀನ್​ ಶಾ ಹೇಳಿದ್ದಾರೆ.

Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ
ನಸೀರುದ್ದೀನ್​, ‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
Follow us
|

Updated on: Jun 02, 2023 | 6:12 PM

ತೀವ್ರ ವಿವಾದಕ್ಕೆ ಕಾರಣವಾದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾಗಿದೆ. ಕೆಲವರು ಈ ಚಿತ್ರದ ಪರವಾಗಿದ್ದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಾಲಿವುಡ್​ನ ಖ್ಯಾತ ನಟ ನಸೀರುದ್ದೀನ್​ ಶಾ (Naseeruddin Shah) ಅವರು ಈಗ ಟೀಕೆ ಮಾಡಿದ್ದಾರೆ. ‘ಬೀಡ್​, ಅಫ್ವಾ, ಫರಾಝ್​ ಮುಂತಾದ ಸಿನಿಮಾಗಳು ಸೋತಿವೆ. ಅಂಥ ಚಿತ್ರಗಳನ್ನು ನೋಡಲು ಜನರಿಗೆ ಇಷ್ಟ ಇಲ್ಲ. ಆದರೆ ದಿ ಕೇರಳ ಸ್ಟೋರಿ ನೋಡಲು ಜನರು ಮುಗಿಬೀಳುತ್ತಾರೆ. ಆ ಚಿತ್ರ ನೋಡುವ ಉದ್ದೇಶ ನನಗೆ ಇಲ್ಲ. ಯಾಕೆಂದರೆ ಅದರ ಬಗ್ಗೆ ಸಾಕಷ್ಟು ಓದಿದ್ದೇನೆ’ ಎಂದು ನಸೀರುದ್ದೀನ್​ ಶಾ ಅವರು ಹೇಳಿದ್ದಾರೆ. ‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಒಂದು ರೀತಿಯಲ್ಲಿ ಇದು ಅಪಾಯಕಾರಿ ಟ್ರೆಂಡ್​. ಅದರಲ್ಲಿ ಅನುಮಾನವೇ ಇಲ್ಲ. ಹಿಟ್ಲರ್​ ಕಾಲದ ನಾಜಿ ಜರ್ಮನಿ ರೀತಿ ನಾವು ಆಗುತ್ತಿದ್ದೇವೆ. ಆಗ ಸಿನಿಮಾ ಮಾಡುವವರು ಆಯ್ಕೆ ಮಾಡಿಕೊಳ್ಳಲಾಗಿತ್ತು. ಹಿಟ್ಲರ್​ನ ಹೊಗಳುವ ಮತ್ತು ಯಹೂದಿಗಳನ್ನು ತೆಗಳುವ ರೀತಿಯ ಸಿನಿಮಾಗಳನ್ನು ಮಾಡಿಸಲಾಗಿತ್ತು’ ಎಂದು ನಸೀರುದ್ದೀನ್​ ಶಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಮನೋಜ್​ ತಿವಾರಿ ಅವರು ಖಂಡಿಸಿದ್ದಾರೆ. ‘ನಸೀರುದ್ದೀನ್​ ಶಾ ಅವರು ಒಳ್ಳೆಯ ನಟ. ಆದರೆ ಅವರ ಉದ್ದೇಶ ಸರಿಯಿಲ್ಲ. ಇದನ್ನು ನಾನು ತುಂಬ ಬೇಸರದಿಂದ ಹೇಳುತ್ತಿದ್ದೇನೆ’ ಎಂದು ಮನೋಜ್​ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: Naseeruddin Shah: ‘ಮೊಘಲರು ಲೂಟಿ ಮಾಡಲು ಬಂದವರಲ್ಲ, ಭಾರತಕ್ಕೆ ಅವರ ಕೊಡುಗೆಯೂ ಇದೆ’: ನಸೀರುದ್ದೀನ್​ ಷಾ

ಇತ್ತೀಚೆಗೆ ಅಬುಧಾಬಿಯಲ್ಲಿ ನಡೆದ ‘ಐಫಾ ಅವಾರ್ಡ್ಸ್​’ ಕಾರ್ಯಕ್ರಮದಲ್ಲಿ ಕಮಲ್​ ಹಾಸನ್​ ಅವರು ಭಾಗಿ ಆಗಿದ್ದರು. ಆ ವೇಳೆ ಅವರಿಗೆ ‘ದಿ ಕೇರಳ ಸ್ಟೋರಿ ’ ಸಿನಿಮಾ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಚಿತ್ರವನ್ನು ತೆಗಳಿದರು. ‘ನಾನು ಆಗಲೇ ಹೇಳಿದ್ದೇನೆ. ಇದು ಪ್ರೊಪೊಗಾಂಡ ಸಿನಿಮಾ. ನಾನು ಅದರ ವಿರುದ್ಧವಾಗಿದ್ದೇನೆ. ಸಿನಿಮಾ ಶೀರ್ಷಿಕೆಯ ಕೆಳಗಡೆ ‘ಸತ್ಯ ಘಟನೆ’ ಅಂತ ಬರೆದರೆ ಸಾಕಾಗುವುದಿಲ್ಲ. ಅದು ನಿಜಕ್ಕೂ ಸತ್ಯ ಘಟನೆಯೇ ಆಗಿರಬೇಕು. ಆದರೆ ಈ ಚಿತ್ರದಲ್ಲಿನ ವಿಷಯ ನಿಜವಲ್ಲ’ ಎಂದು ಕಮಲ್​ ಹಾಸನ್​ ಹೇಳಿದರು.

ಇದನ್ನೂ ಓದಿ: ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​

‘ದಿ ಕೇರಳ ಸ್ಟೋರಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ. ಆದರೆ ಈ ಕಲೆಕ್ಷನ್​ನಿಂದ ನಿರ್ದೇಶಕ ಸುದೀಪ್ತೋ ಸೇನ್​ ಅವರಿಗೆ ಸಮಾಧಾನ ಆಗಿಲ್ಲ. ಅವರ ಉದ್ದೇಶ ಬೇರೆಯೇ ಇದೆ. ‘ನಮ್ಮ ಸಿನಿಮಾವನ್ನು ಇನ್ನಷ್ಟು ಜನರು ನೋಡಬೇಕು. ವಿಶ್ವಾದ್ಯಂತ ಇರುವ ಭಾರತದ ಜನರಲ್ಲಿ ಶೇಕಡ 10ರಷ್ಟು ಜನರಿಗಾದರೂ ನಮ್ಮ ಚಿತ್ರದ ಸಂದೇಶ ತಲುಪಬೇಕು. ಆಗಲೇ ಇದನ್ನು ಸಕ್ಸಸ್​ ಅಂತ ನಾವು ಕರೆಬಹುದು’ ಎಂದು ಸುದೀಪ್ತೋ ಸೇನ್​ ಇತ್ತೀಚೆಗೆ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ