AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ

The Kerala Story: ‘ಒಂದು ರೀತಿಯಲ್ಲಿ ಇದು ಅಪಾಯಕಾರಿ ಟ್ರೆಂಡ್​. ಅದರಲ್ಲಿ ಅನುಮಾನವೇ ಇಲ್ಲ. ಹಿಟ್ಲರ್​ ಕಾಲದ ನಾಜಿ ಜರ್ಮನಿ ರೀತಿ ನಾವು ಆಗುತ್ತಿದ್ದೇವೆ’ ಎಂದು ನಸೀರುದ್ದೀನ್​ ಶಾ ಹೇಳಿದ್ದಾರೆ.

Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ
ನಸೀರುದ್ದೀನ್​, ‘ದಿ ಕೇರಳ ಸ್ಟೋರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 02, 2023 | 6:12 PM

Share

ತೀವ್ರ ವಿವಾದಕ್ಕೆ ಕಾರಣವಾದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾಗಿದೆ. ಕೆಲವರು ಈ ಚಿತ್ರದ ಪರವಾಗಿದ್ದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಾಲಿವುಡ್​ನ ಖ್ಯಾತ ನಟ ನಸೀರುದ್ದೀನ್​ ಶಾ (Naseeruddin Shah) ಅವರು ಈಗ ಟೀಕೆ ಮಾಡಿದ್ದಾರೆ. ‘ಬೀಡ್​, ಅಫ್ವಾ, ಫರಾಝ್​ ಮುಂತಾದ ಸಿನಿಮಾಗಳು ಸೋತಿವೆ. ಅಂಥ ಚಿತ್ರಗಳನ್ನು ನೋಡಲು ಜನರಿಗೆ ಇಷ್ಟ ಇಲ್ಲ. ಆದರೆ ದಿ ಕೇರಳ ಸ್ಟೋರಿ ನೋಡಲು ಜನರು ಮುಗಿಬೀಳುತ್ತಾರೆ. ಆ ಚಿತ್ರ ನೋಡುವ ಉದ್ದೇಶ ನನಗೆ ಇಲ್ಲ. ಯಾಕೆಂದರೆ ಅದರ ಬಗ್ಗೆ ಸಾಕಷ್ಟು ಓದಿದ್ದೇನೆ’ ಎಂದು ನಸೀರುದ್ದೀನ್​ ಶಾ ಅವರು ಹೇಳಿದ್ದಾರೆ. ‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಒಂದು ರೀತಿಯಲ್ಲಿ ಇದು ಅಪಾಯಕಾರಿ ಟ್ರೆಂಡ್​. ಅದರಲ್ಲಿ ಅನುಮಾನವೇ ಇಲ್ಲ. ಹಿಟ್ಲರ್​ ಕಾಲದ ನಾಜಿ ಜರ್ಮನಿ ರೀತಿ ನಾವು ಆಗುತ್ತಿದ್ದೇವೆ. ಆಗ ಸಿನಿಮಾ ಮಾಡುವವರು ಆಯ್ಕೆ ಮಾಡಿಕೊಳ್ಳಲಾಗಿತ್ತು. ಹಿಟ್ಲರ್​ನ ಹೊಗಳುವ ಮತ್ತು ಯಹೂದಿಗಳನ್ನು ತೆಗಳುವ ರೀತಿಯ ಸಿನಿಮಾಗಳನ್ನು ಮಾಡಿಸಲಾಗಿತ್ತು’ ಎಂದು ನಸೀರುದ್ದೀನ್​ ಶಾ ಹೇಳಿದ್ದಾರೆ. ಅವರ ಈ ಹೇಳಿಕೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಖಂಡ ಮನೋಜ್​ ತಿವಾರಿ ಅವರು ಖಂಡಿಸಿದ್ದಾರೆ. ‘ನಸೀರುದ್ದೀನ್​ ಶಾ ಅವರು ಒಳ್ಳೆಯ ನಟ. ಆದರೆ ಅವರ ಉದ್ದೇಶ ಸರಿಯಿಲ್ಲ. ಇದನ್ನು ನಾನು ತುಂಬ ಬೇಸರದಿಂದ ಹೇಳುತ್ತಿದ್ದೇನೆ’ ಎಂದು ಮನೋಜ್​ ತಿವಾರಿ ಹೇಳಿದ್ದಾರೆ.

ಇದನ್ನೂ ಓದಿ: Naseeruddin Shah: ‘ಮೊಘಲರು ಲೂಟಿ ಮಾಡಲು ಬಂದವರಲ್ಲ, ಭಾರತಕ್ಕೆ ಅವರ ಕೊಡುಗೆಯೂ ಇದೆ’: ನಸೀರುದ್ದೀನ್​ ಷಾ

ಇತ್ತೀಚೆಗೆ ಅಬುಧಾಬಿಯಲ್ಲಿ ನಡೆದ ‘ಐಫಾ ಅವಾರ್ಡ್ಸ್​’ ಕಾರ್ಯಕ್ರಮದಲ್ಲಿ ಕಮಲ್​ ಹಾಸನ್​ ಅವರು ಭಾಗಿ ಆಗಿದ್ದರು. ಆ ವೇಳೆ ಅವರಿಗೆ ‘ದಿ ಕೇರಳ ಸ್ಟೋರಿ ’ ಸಿನಿಮಾ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಚಿತ್ರವನ್ನು ತೆಗಳಿದರು. ‘ನಾನು ಆಗಲೇ ಹೇಳಿದ್ದೇನೆ. ಇದು ಪ್ರೊಪೊಗಾಂಡ ಸಿನಿಮಾ. ನಾನು ಅದರ ವಿರುದ್ಧವಾಗಿದ್ದೇನೆ. ಸಿನಿಮಾ ಶೀರ್ಷಿಕೆಯ ಕೆಳಗಡೆ ‘ಸತ್ಯ ಘಟನೆ’ ಅಂತ ಬರೆದರೆ ಸಾಕಾಗುವುದಿಲ್ಲ. ಅದು ನಿಜಕ್ಕೂ ಸತ್ಯ ಘಟನೆಯೇ ಆಗಿರಬೇಕು. ಆದರೆ ಈ ಚಿತ್ರದಲ್ಲಿನ ವಿಷಯ ನಿಜವಲ್ಲ’ ಎಂದು ಕಮಲ್​ ಹಾಸನ್​ ಹೇಳಿದರು.

ಇದನ್ನೂ ಓದಿ: ತಾಲಿಬಾನ್​ ಪರ ಇರುವ ಭಾರತದ ಮುಸ್ಲಿಮರಿಗೆ ನಟ ನಸೀರುದ್ದೀನ್​ ಷಾ ಛೀಮಾರಿ; ವಿಡಿಯೋ ವೈರಲ್​

‘ದಿ ಕೇರಳ ಸ್ಟೋರಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿದೆ. ಆದರೆ ಈ ಕಲೆಕ್ಷನ್​ನಿಂದ ನಿರ್ದೇಶಕ ಸುದೀಪ್ತೋ ಸೇನ್​ ಅವರಿಗೆ ಸಮಾಧಾನ ಆಗಿಲ್ಲ. ಅವರ ಉದ್ದೇಶ ಬೇರೆಯೇ ಇದೆ. ‘ನಮ್ಮ ಸಿನಿಮಾವನ್ನು ಇನ್ನಷ್ಟು ಜನರು ನೋಡಬೇಕು. ವಿಶ್ವಾದ್ಯಂತ ಇರುವ ಭಾರತದ ಜನರಲ್ಲಿ ಶೇಕಡ 10ರಷ್ಟು ಜನರಿಗಾದರೂ ನಮ್ಮ ಚಿತ್ರದ ಸಂದೇಶ ತಲುಪಬೇಕು. ಆಗಲೇ ಇದನ್ನು ಸಕ್ಸಸ್​ ಅಂತ ನಾವು ಕರೆಬಹುದು’ ಎಂದು ಸುದೀಪ್ತೋ ಸೇನ್​ ಇತ್ತೀಚೆಗೆ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!