AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಲಾಕ್​ಡೌನ್​ನಿಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
ವಿವೇಕ್​-ಪಲ್ಲವಿ
TV9 Web
| Edited By: |

Updated on:Apr 05, 2022 | 4:13 PM

Share

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files Movie) ಮೂಲಕ ವಿವೇಕ್​ ಅಗ್ನಿಹೋತ್ರಿ ಅವರು ಅಪಾರ ಖ್ಯಾತಿ ಗಳಿಸಿದ್ದಾರೆ. ಈ ವರ್ಷ ಸಾಕಷ್ಟು ಚರ್ಚೆಗೆ ಒಳಗಾದ ಸಿನಿಮಾಗಳ ಪೈಕಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮುಂಚೂಣಿಯಲ್ಲಿ ನಿಲ್ಲುತ್ತದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮೊದಲೇ ಘೋಷಣೆ ಮಾಡಿದಂತೆ, ‘ದಿ ದಿಲ್ಲಿ ಫೈಲ್ಸ್​’ (The Delhi Files)ವಿವೇಕ್ ಅವರ ಮುಂದಿನ ಸಿನಿಮಾ ಆಗಬೇಕಿತ್ತು. ಆದರೆ, ಅದಕ್ಕೂ ಮೊದಲೇ ಸೀಕ್ರೇಟ್ ಆಗಿ ಸಿನಿಮಾ ಒಂದನ್ನು ಶೂಟ್​ ಮಾಡಿ ಮುಗಿಸಿದ್ದಾರೆ ವಿವೇಕ್​ ಅಗ್ನಿಹೋತ್ರಿ (Vivek Agnihotri). ಈ ವಿಚಾರ ಈಗ ರಿವೀಲ್ ಆಗಿದೆ.

ವಿವೇಕ್ ಅಗ್ನಿಹೋತ್ರಿ ಮಾಡುವ ಸಿನಿಮಾಗಳ ಬಜೆಟ್​ ತುಂಬಾನೇ ಸಣ್ಣ ಮಟ್ಟದಲ್ಲಿರುತ್ತದೆ. ‘ದಿ ಕಾಶ್ಮೀರ್ ಫೈಲ್ಸ್​’ 20 ಕೋಟಿ ರೂಪಾಯಿಯಲ್ಲಿ ಸಿದ್ಧಗೊಂಡ ಚಿತ್ರ. ವಿಶೇಷ ಎಂದರೆ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಲಾಕ್​ಡೌನ್​ನಿಂದ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಈ ಸಿನಿಮಾಗೆ ‘ನೌಟಂಕಿ’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ದಿ ಕಾಶ್ಮೀರ್ ಫೈಲ್ಸ್​’ನಲ್ಲಿ ಬಹುಮುಖ್ಯ ಪಾತ್ರ ಮಾಡಿರುವ ಅನುಪಮ್​ ಖೇರ್​ ಅವರು ‘ನೌಟಂಕಿ’ಯಲ್ಲಿ ಲೀಡ್​​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಗೆಳೆಯ ಸತೀಶ್ ಕೌಶಿಕ್​ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರೂಮಿ ಜಫ್ರಿ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆದಿದ್ದಾರೆ. ವಿವೇಕ್​ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಿದ್ಧಗೊಂಡಿದ್ದು ಹೇಗೆ ಎನ್ನುವ ಬಗ್ಗೆ ವಿವೇಕ್​ ಮಾಹಿತಿ ನೀಡಿದ್ದಾರೆ.

‘2021ರ ಮಾರ್ಚ್​ ತಿಂಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿದ್ದೆವು. ಆ ಸಂದರ್ಭದಲ್ಲಿ ಕೊರೊನಾದಿಂದ ಲಾಕ್​ಡೌನ್​ ಘೋಷಣೆ ಆಯಿತು. ಅನುಪಮ್​ ಖೇರ್​ ಅವರು ಅಮೆರಿಕದಿಂದ ಶೂಟಿಂಗ್​ಗಾಗಿ ಭಾರತಕ್ಕೆ ಬಂದಿದ್ದರು. ಲಾಕ್​ಡೌನ್​ನಿಂದ ಅವರು ಕೂಡ ಇಲ್ಲೇ ಉಳಿಯಬೇಕಾಯಿತು. ಈ ಸಮಯವನ್ನು ಬಳಕೆ ಮಾಡಿಕೊಳ್ಳಲು ನಾವು ನಿರ್ಧರಿಸಿದೆವು. ಸ್ಕ್ರಿಪ್ಟ್​ ರೆಡಿ ಇತ್ತು. ಹೀಗಾಗಿ ಮತ್ತೊಂದು ಸಿನಿಮಾದ ಶೂಟಿಂಗ್​ಅನ್ನು ಭೋಪಾಲ್​ನಲ್ಲಿ​ ಪೂರ್ಣಗೊಳಿಸಿದೆವು’ ಎಂದಿದ್ದಾರೆ ವಿವೇಕ್​.

‘ನೌಟಂಕಿ’ ಸಿನಿಮಾ ತುಂಬಾ ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಸಿನಿಮಾ ಎನ್ನಲಾಗುತ್ತಿದೆ. ‘ಇದು ಕಲೆ, ಸೃಜನಶೀಲತೆ, ರಂಗಭೂಮಿ ಹಾಗೂ ಸಿನಿಮಾಗೆ ನಾವು ನೀಡುತ್ತಿರುವ ಟ್ರಿಬ್ಯೂಟ್’​ ಎಂದು ವಿವೇಕ್ ಹೇಳಿಕೊಂಡಿದ್ದಾರೆ.

‘ನೌಟಂಕಿ ನನಗೆ ವಿಶೇಷವಾಗಿದೆ. ನನ್ನ ಹಳೆಯ ಮತ್ತು ಆತ್ಮೀಯ ಸ್ನೇಹಿತ ಸತೀಶ್ ಕೌಶಿಕ್ ಈ ಬಾರಿ ನನ್ನ ಸಹನಟನಾಗಿ ನಟಿಸಿದ್ದಾರೆ. ನಾವು ಹಲವು ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದೇವೆ’ ಎಂದಿದ್ದಾರೆ ಅನುಪಮ್ ಖೇರ್​.

ಇದನ್ನೂ ಓದಿ: ‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ

‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿನಿಂದ ಆಹ್ವಾನ

Published On - 2:51 pm, Tue, 5 April 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ