Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಲಾಕ್​ಡೌನ್​ನಿಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
ವಿವೇಕ್​-ಪಲ್ಲವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Apr 05, 2022 | 4:13 PM

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files Movie) ಮೂಲಕ ವಿವೇಕ್​ ಅಗ್ನಿಹೋತ್ರಿ ಅವರು ಅಪಾರ ಖ್ಯಾತಿ ಗಳಿಸಿದ್ದಾರೆ. ಈ ವರ್ಷ ಸಾಕಷ್ಟು ಚರ್ಚೆಗೆ ಒಳಗಾದ ಸಿನಿಮಾಗಳ ಪೈಕಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮುಂಚೂಣಿಯಲ್ಲಿ ನಿಲ್ಲುತ್ತದೆ. ಈ ಕಾರಣಕ್ಕೆ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಚರ್ಚೆ ಜೋರಾಗಿದೆ. ಈ ಮೊದಲೇ ಘೋಷಣೆ ಮಾಡಿದಂತೆ, ‘ದಿ ದಿಲ್ಲಿ ಫೈಲ್ಸ್​’ (The Delhi Files)ವಿವೇಕ್ ಅವರ ಮುಂದಿನ ಸಿನಿಮಾ ಆಗಬೇಕಿತ್ತು. ಆದರೆ, ಅದಕ್ಕೂ ಮೊದಲೇ ಸೀಕ್ರೇಟ್ ಆಗಿ ಸಿನಿಮಾ ಒಂದನ್ನು ಶೂಟ್​ ಮಾಡಿ ಮುಗಿಸಿದ್ದಾರೆ ವಿವೇಕ್​ ಅಗ್ನಿಹೋತ್ರಿ (Vivek Agnihotri). ಈ ವಿಚಾರ ಈಗ ರಿವೀಲ್ ಆಗಿದೆ.

ವಿವೇಕ್ ಅಗ್ನಿಹೋತ್ರಿ ಮಾಡುವ ಸಿನಿಮಾಗಳ ಬಜೆಟ್​ ತುಂಬಾನೇ ಸಣ್ಣ ಮಟ್ಟದಲ್ಲಿರುತ್ತದೆ. ‘ದಿ ಕಾಶ್ಮೀರ್ ಫೈಲ್ಸ್​’ 20 ಕೋಟಿ ರೂಪಾಯಿಯಲ್ಲಿ ಸಿದ್ಧಗೊಂಡ ಚಿತ್ರ. ವಿಶೇಷ ಎಂದರೆ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಶೂಟಿಂಗ್​ ಲಾಕ್​ಡೌನ್​ನಿಂದ ಅರ್ಧಕ್ಕೆ ನಿಂತಾಗ ಅದೇ ಗ್ಯಾಪ್​ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್​ ಪೂರ್ಣಗೊಳಿಸಿದ್ದಾರೆ ವಿವೇಕ್​.

ಈ ಸಿನಿಮಾಗೆ ‘ನೌಟಂಕಿ’ ಎನ್ನುವ ಶೀರ್ಷಿಕೆ ಇಡಲಾಗಿದೆ. ‘ದಿ ಕಾಶ್ಮೀರ್ ಫೈಲ್ಸ್​’ನಲ್ಲಿ ಬಹುಮುಖ್ಯ ಪಾತ್ರ ಮಾಡಿರುವ ಅನುಪಮ್​ ಖೇರ್​ ಅವರು ‘ನೌಟಂಕಿ’ಯಲ್ಲಿ ಲೀಡ್​​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಗೆಳೆಯ ಸತೀಶ್ ಕೌಶಿಕ್​ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರೂಮಿ ಜಫ್ರಿ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆದಿದ್ದಾರೆ. ವಿವೇಕ್​ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಸಿದ್ಧಗೊಂಡಿದ್ದು ಹೇಗೆ ಎನ್ನುವ ಬಗ್ಗೆ ವಿವೇಕ್​ ಮಾಹಿತಿ ನೀಡಿದ್ದಾರೆ.

‘2021ರ ಮಾರ್ಚ್​ ತಿಂಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿದ್ದೆವು. ಆ ಸಂದರ್ಭದಲ್ಲಿ ಕೊರೊನಾದಿಂದ ಲಾಕ್​ಡೌನ್​ ಘೋಷಣೆ ಆಯಿತು. ಅನುಪಮ್​ ಖೇರ್​ ಅವರು ಅಮೆರಿಕದಿಂದ ಶೂಟಿಂಗ್​ಗಾಗಿ ಭಾರತಕ್ಕೆ ಬಂದಿದ್ದರು. ಲಾಕ್​ಡೌನ್​ನಿಂದ ಅವರು ಕೂಡ ಇಲ್ಲೇ ಉಳಿಯಬೇಕಾಯಿತು. ಈ ಸಮಯವನ್ನು ಬಳಕೆ ಮಾಡಿಕೊಳ್ಳಲು ನಾವು ನಿರ್ಧರಿಸಿದೆವು. ಸ್ಕ್ರಿಪ್ಟ್​ ರೆಡಿ ಇತ್ತು. ಹೀಗಾಗಿ ಮತ್ತೊಂದು ಸಿನಿಮಾದ ಶೂಟಿಂಗ್​ಅನ್ನು ಭೋಪಾಲ್​ನಲ್ಲಿ​ ಪೂರ್ಣಗೊಳಿಸಿದೆವು’ ಎಂದಿದ್ದಾರೆ ವಿವೇಕ್​.

‘ನೌಟಂಕಿ’ ಸಿನಿಮಾ ತುಂಬಾ ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಸಿನಿಮಾ ಎನ್ನಲಾಗುತ್ತಿದೆ. ‘ಇದು ಕಲೆ, ಸೃಜನಶೀಲತೆ, ರಂಗಭೂಮಿ ಹಾಗೂ ಸಿನಿಮಾಗೆ ನಾವು ನೀಡುತ್ತಿರುವ ಟ್ರಿಬ್ಯೂಟ್’​ ಎಂದು ವಿವೇಕ್ ಹೇಳಿಕೊಂಡಿದ್ದಾರೆ.

‘ನೌಟಂಕಿ ನನಗೆ ವಿಶೇಷವಾಗಿದೆ. ನನ್ನ ಹಳೆಯ ಮತ್ತು ಆತ್ಮೀಯ ಸ್ನೇಹಿತ ಸತೀಶ್ ಕೌಶಿಕ್ ಈ ಬಾರಿ ನನ್ನ ಸಹನಟನಾಗಿ ನಟಿಸಿದ್ದಾರೆ. ನಾವು ಹಲವು ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದೇವೆ’ ಎಂದಿದ್ದಾರೆ ಅನುಪಮ್ ಖೇರ್​.

ಇದನ್ನೂ ಓದಿ: ‘ಆ ನಗರಕ್ಕೆ ಸಲಿಂಗಕಾಮಿ ಎಂಬ ಅರ್ಥವಿದೆ’; ವಿವಾದದಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ

‘ದಿ ಕಾಶ್ಮೀರ್ ಫೈಲ್ಸ್​’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ತಿನಿಂದ ಆಹ್ವಾನ

Published On - 2:51 pm, Tue, 5 April 22

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​