AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Nawab Malik: ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ
ಆರ್ಯನ್ ಖಾನ್​, ನವಾಬ್​ ಮಲಿಕ್​
TV9 Web
| Edited By: |

Updated on: Nov 07, 2021 | 12:47 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರ ಡ್ರಗ್ಸ್​ ಕೇಸ್​ ಅಂತಿಮವಾಗಿ ಏನಾಗಲಿದೆಯೋ ಗೊತ್ತಿಲ್ಲ. ಕೆಲವೇ ದಿನಗಳ ಹಿಂದೆ ಆರ್ಯನ್​ ಖಾನ್​ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ. ಅದರ ಬೆನ್ನಲ್ಲೇ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆಗೆ ಈ ಪ್ರಕರಣದಿಂದ ಹೊರಗುಳಿಯುವಂತೆ ಆದೇಶಿಸಲಾಗಿದೆ. ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲೇ ಇವೆ. ಈಗ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಅವರು ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಆರ್ಯನ್​ ಖಾನ್​ ಅವರನ್ನು ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅಲಿಯಾಸ್​ ಮೋಹಿತ್​ ಭಾರತೀಯ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ‘ಆರ್ಯನ್​ ಖಾನ್​ ಅರೆಸ್ಟ್​ ಹಿಂದೆ ಮಾಸ್ಟರ್​ ಮೈಂಡ್​ ಆಗಿ ಮೋಹಿತ್​ ಕೆಲಸ ಮಾಡಿದ್ದಾರೆ. ಹಣಕ್ಕಾಗಿ ಶಾರುಖ್​ಗೆ ಬೇಡಿಕೆ ಇಡುವಲ್ಲಿ ಸಮೀರ್​ ವಾಂಖೆಡೆ ಮತ್ತು ಮೋಹಿತ್ ಪಾರ್ಟ್ನರ್​ ಆಗಿದ್ದಾರೆ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

‘ಡ್ರಗ್ಸ್​ ಪಾರ್ಟಿ ನಡೆದಿತ್ತು ಎನ್ನಲಾದ ಐಷಾರಾಮಿ ಹಡಗಿನಲ್ಲಿ ಆರ್ಯನ್​ ಖಾನ್​ ಅಂದು ಟಿಕೆಟ್​ ಪಡೆದಿರಲಿಲ್ಲ. ಪ್ರತೀಕ್​ ಗಾಬಾ ಮತ್ತು ಆಮಿರ್​ ಫರ್ನೀಚರ್​ವಾಲ್ ಅವರು ಆರ್ಯನ್​ನನ್ನು ಹಡಗಿಗೆ ಕರೆದುಕೊಂಡು ಹೋಗಿದ್ದರು. ಇದು ಕಿಡ್ನಾಪ್​ ಮತ್ತು ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣ ಆಗಿದೆ. ಇದರ ಹಿಂದಿರುವ ಮಾಸ್ಟರ್​ ಮೈಂಡ್​ ಮೋಹಿತ್​’ ಎಂದು ನವಾಬ್​ ಮಲಿಕ್​ ಆರೋಪ ಹೊರಿಸಿದ್ದಾರೆ.

‘ಆರ್ಯನ್​ ಅರೆಸ್ಟ್​ ಆದ ಬಳಿಕ ನಡೆದ ಘಟನೆಗಳಿಂದ ಸಮೀರ್​ ವಾಂಖೆಡೆ ಭಯಗೊಂಡರು. ಹಾಗಾಗಿ ಅ.7ರಂದು ಓಶಿವಾರಾ ಸ್ಮಶಾನದ ಬಳಿ ಮೋಹಿತ್​ ಮತ್ತು ಸಮೀರ್​ ಭೇಟಿ ಆಗಿದ್ದರು. ಅವರ ಅದೃಷ್ಟಕ್ಕೆ ಅಲ್ಲಿನ ಸಿಸಿಟಿವಿ ಹಾಳಾಗಿತ್ತು. ಹಾಗಾಗಿ ಅದಕ್ಕೆ ಸೂಕ್ತ ಸಾಕ್ಷಿ ಸಿಗಲಿಲ್ಲ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

ಹೀಗೆ ಅನೇಕ ಆರೋಪಗಳನ್ನು ಹೊರಿಸುತ್ತಿರುವ ನವಾಬ್​ ಮಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನದೇವ್​ ಕಚ್ರುಜಿ ವಾಂಖೆಡೆ ಅವರು 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ‘ನವಾಬ್​ ಮಲ್ಲಿಕ್​ ಅವರು, ಸಮೀರ್​ ವಾಂಖೆಡೆ ಕುಟುಂಬವನ್ನು ವಂಚಕ ಕುಟುಂಬ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ಅವರ ಧಾರ್ಮಿಕ ನಂಬಿಕೆಯನ್ನೇ ಪ್ರಶ್ನಿಸಿದ್ದಾರೆ. ವಾಂಖೆಡೆ ಕುಟುಂಬದವನ್ನು ಹಿಂದೂಗಳಲ್ಲ ಎಂದು ಹೇಳಿದ್ದಾರೆ. ಅವರ ಇಡೀ ಕುಟುಂಬದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಹಾಗಾಗಿ ಸಮೀರ್​ ವಾಂಖೆಡೆಯ ಕುಟುಂಬದ ಗೌರವ, ಸಾಮಾಜಿಕ ಗೌರವ ಮತ್ತು ಅವರೆಲ್ಲರ ಹೆಸರಿಗೆ ಹಾನಿ ಉಂಟಾಗಿದೆ. ಇದು ಸರಿಪಡಿಸಲಾಗದ ನಷ್ಟವಾಗಿದೆ’ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು