AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Nawab Malik: ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ
ಆರ್ಯನ್ ಖಾನ್​, ನವಾಬ್​ ಮಲಿಕ್​
TV9 Web
| Edited By: |

Updated on: Nov 07, 2021 | 12:47 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರ ಡ್ರಗ್ಸ್​ ಕೇಸ್​ ಅಂತಿಮವಾಗಿ ಏನಾಗಲಿದೆಯೋ ಗೊತ್ತಿಲ್ಲ. ಕೆಲವೇ ದಿನಗಳ ಹಿಂದೆ ಆರ್ಯನ್​ ಖಾನ್​ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ. ಅದರ ಬೆನ್ನಲ್ಲೇ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆಗೆ ಈ ಪ್ರಕರಣದಿಂದ ಹೊರಗುಳಿಯುವಂತೆ ಆದೇಶಿಸಲಾಗಿದೆ. ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲೇ ಇವೆ. ಈಗ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಅವರು ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಆರ್ಯನ್​ ಖಾನ್​ ಅವರನ್ನು ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅಲಿಯಾಸ್​ ಮೋಹಿತ್​ ಭಾರತೀಯ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ‘ಆರ್ಯನ್​ ಖಾನ್​ ಅರೆಸ್ಟ್​ ಹಿಂದೆ ಮಾಸ್ಟರ್​ ಮೈಂಡ್​ ಆಗಿ ಮೋಹಿತ್​ ಕೆಲಸ ಮಾಡಿದ್ದಾರೆ. ಹಣಕ್ಕಾಗಿ ಶಾರುಖ್​ಗೆ ಬೇಡಿಕೆ ಇಡುವಲ್ಲಿ ಸಮೀರ್​ ವಾಂಖೆಡೆ ಮತ್ತು ಮೋಹಿತ್ ಪಾರ್ಟ್ನರ್​ ಆಗಿದ್ದಾರೆ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

‘ಡ್ರಗ್ಸ್​ ಪಾರ್ಟಿ ನಡೆದಿತ್ತು ಎನ್ನಲಾದ ಐಷಾರಾಮಿ ಹಡಗಿನಲ್ಲಿ ಆರ್ಯನ್​ ಖಾನ್​ ಅಂದು ಟಿಕೆಟ್​ ಪಡೆದಿರಲಿಲ್ಲ. ಪ್ರತೀಕ್​ ಗಾಬಾ ಮತ್ತು ಆಮಿರ್​ ಫರ್ನೀಚರ್​ವಾಲ್ ಅವರು ಆರ್ಯನ್​ನನ್ನು ಹಡಗಿಗೆ ಕರೆದುಕೊಂಡು ಹೋಗಿದ್ದರು. ಇದು ಕಿಡ್ನಾಪ್​ ಮತ್ತು ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣ ಆಗಿದೆ. ಇದರ ಹಿಂದಿರುವ ಮಾಸ್ಟರ್​ ಮೈಂಡ್​ ಮೋಹಿತ್​’ ಎಂದು ನವಾಬ್​ ಮಲಿಕ್​ ಆರೋಪ ಹೊರಿಸಿದ್ದಾರೆ.

‘ಆರ್ಯನ್​ ಅರೆಸ್ಟ್​ ಆದ ಬಳಿಕ ನಡೆದ ಘಟನೆಗಳಿಂದ ಸಮೀರ್​ ವಾಂಖೆಡೆ ಭಯಗೊಂಡರು. ಹಾಗಾಗಿ ಅ.7ರಂದು ಓಶಿವಾರಾ ಸ್ಮಶಾನದ ಬಳಿ ಮೋಹಿತ್​ ಮತ್ತು ಸಮೀರ್​ ಭೇಟಿ ಆಗಿದ್ದರು. ಅವರ ಅದೃಷ್ಟಕ್ಕೆ ಅಲ್ಲಿನ ಸಿಸಿಟಿವಿ ಹಾಳಾಗಿತ್ತು. ಹಾಗಾಗಿ ಅದಕ್ಕೆ ಸೂಕ್ತ ಸಾಕ್ಷಿ ಸಿಗಲಿಲ್ಲ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

ಹೀಗೆ ಅನೇಕ ಆರೋಪಗಳನ್ನು ಹೊರಿಸುತ್ತಿರುವ ನವಾಬ್​ ಮಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನದೇವ್​ ಕಚ್ರುಜಿ ವಾಂಖೆಡೆ ಅವರು 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ‘ನವಾಬ್​ ಮಲ್ಲಿಕ್​ ಅವರು, ಸಮೀರ್​ ವಾಂಖೆಡೆ ಕುಟುಂಬವನ್ನು ವಂಚಕ ಕುಟುಂಬ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ಅವರ ಧಾರ್ಮಿಕ ನಂಬಿಕೆಯನ್ನೇ ಪ್ರಶ್ನಿಸಿದ್ದಾರೆ. ವಾಂಖೆಡೆ ಕುಟುಂಬದವನ್ನು ಹಿಂದೂಗಳಲ್ಲ ಎಂದು ಹೇಳಿದ್ದಾರೆ. ಅವರ ಇಡೀ ಕುಟುಂಬದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಹಾಗಾಗಿ ಸಮೀರ್​ ವಾಂಖೆಡೆಯ ಕುಟುಂಬದ ಗೌರವ, ಸಾಮಾಜಿಕ ಗೌರವ ಮತ್ತು ಅವರೆಲ್ಲರ ಹೆಸರಿಗೆ ಹಾನಿ ಉಂಟಾಗಿದೆ. ಇದು ಸರಿಪಡಿಸಲಾಗದ ನಷ್ಟವಾಗಿದೆ’ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್