AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Nawab Malik: ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ
ಆರ್ಯನ್ ಖಾನ್​, ನವಾಬ್​ ಮಲಿಕ್​
TV9 Web
| Edited By: |

Updated on: Nov 07, 2021 | 12:47 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರ ಡ್ರಗ್ಸ್​ ಕೇಸ್​ ಅಂತಿಮವಾಗಿ ಏನಾಗಲಿದೆಯೋ ಗೊತ್ತಿಲ್ಲ. ಕೆಲವೇ ದಿನಗಳ ಹಿಂದೆ ಆರ್ಯನ್​ ಖಾನ್​ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ. ಅದರ ಬೆನ್ನಲ್ಲೇ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆಗೆ ಈ ಪ್ರಕರಣದಿಂದ ಹೊರಗುಳಿಯುವಂತೆ ಆದೇಶಿಸಲಾಗಿದೆ. ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲೇ ಇವೆ. ಈಗ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಅವರು ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಆರ್ಯನ್​ ಖಾನ್​ ಅವರನ್ನು ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಅಲಿಯಾಸ್​ ಮೋಹಿತ್​ ಭಾರತೀಯ ಅವರು ಶನಿವಾರ (ನ.6) ಸುದ್ದಿಗೋಷ್ಠಿ ನಡೆಸಿ ಎನ್​ಸಿಪಿ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಅದರ ಬೆನ್ನಲ್ಲೇ ನವಾಬ್​ ಮಲಿಕ್​ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. ‘ಆರ್ಯನ್​ ಖಾನ್​ ಅರೆಸ್ಟ್​ ಹಿಂದೆ ಮಾಸ್ಟರ್​ ಮೈಂಡ್​ ಆಗಿ ಮೋಹಿತ್​ ಕೆಲಸ ಮಾಡಿದ್ದಾರೆ. ಹಣಕ್ಕಾಗಿ ಶಾರುಖ್​ಗೆ ಬೇಡಿಕೆ ಇಡುವಲ್ಲಿ ಸಮೀರ್​ ವಾಂಖೆಡೆ ಮತ್ತು ಮೋಹಿತ್ ಪಾರ್ಟ್ನರ್​ ಆಗಿದ್ದಾರೆ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

‘ಡ್ರಗ್ಸ್​ ಪಾರ್ಟಿ ನಡೆದಿತ್ತು ಎನ್ನಲಾದ ಐಷಾರಾಮಿ ಹಡಗಿನಲ್ಲಿ ಆರ್ಯನ್​ ಖಾನ್​ ಅಂದು ಟಿಕೆಟ್​ ಪಡೆದಿರಲಿಲ್ಲ. ಪ್ರತೀಕ್​ ಗಾಬಾ ಮತ್ತು ಆಮಿರ್​ ಫರ್ನೀಚರ್​ವಾಲ್ ಅವರು ಆರ್ಯನ್​ನನ್ನು ಹಡಗಿಗೆ ಕರೆದುಕೊಂಡು ಹೋಗಿದ್ದರು. ಇದು ಕಿಡ್ನಾಪ್​ ಮತ್ತು ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣ ಆಗಿದೆ. ಇದರ ಹಿಂದಿರುವ ಮಾಸ್ಟರ್​ ಮೈಂಡ್​ ಮೋಹಿತ್​’ ಎಂದು ನವಾಬ್​ ಮಲಿಕ್​ ಆರೋಪ ಹೊರಿಸಿದ್ದಾರೆ.

‘ಆರ್ಯನ್​ ಅರೆಸ್ಟ್​ ಆದ ಬಳಿಕ ನಡೆದ ಘಟನೆಗಳಿಂದ ಸಮೀರ್​ ವಾಂಖೆಡೆ ಭಯಗೊಂಡರು. ಹಾಗಾಗಿ ಅ.7ರಂದು ಓಶಿವಾರಾ ಸ್ಮಶಾನದ ಬಳಿ ಮೋಹಿತ್​ ಮತ್ತು ಸಮೀರ್​ ಭೇಟಿ ಆಗಿದ್ದರು. ಅವರ ಅದೃಷ್ಟಕ್ಕೆ ಅಲ್ಲಿನ ಸಿಸಿಟಿವಿ ಹಾಳಾಗಿತ್ತು. ಹಾಗಾಗಿ ಅದಕ್ಕೆ ಸೂಕ್ತ ಸಾಕ್ಷಿ ಸಿಗಲಿಲ್ಲ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

ಹೀಗೆ ಅನೇಕ ಆರೋಪಗಳನ್ನು ಹೊರಿಸುತ್ತಿರುವ ನವಾಬ್​ ಮಲಿಕ್ ವಿರುದ್ಧ ಸಮೀರ್​ ವಾಂಖೆಡೆ ತಂದೆ ಧ್ಯಾನದೇವ್​ ಕಚ್ರುಜಿ ವಾಂಖೆಡೆ ಅವರು 1.25 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ‘ನವಾಬ್​ ಮಲ್ಲಿಕ್​ ಅವರು, ಸಮೀರ್​ ವಾಂಖೆಡೆ ಕುಟುಂಬವನ್ನು ವಂಚಕ ಕುಟುಂಬ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲ, ಅವರ ಧಾರ್ಮಿಕ ನಂಬಿಕೆಯನ್ನೇ ಪ್ರಶ್ನಿಸಿದ್ದಾರೆ. ವಾಂಖೆಡೆ ಕುಟುಂಬದವನ್ನು ಹಿಂದೂಗಳಲ್ಲ ಎಂದು ಹೇಳಿದ್ದಾರೆ. ಅವರ ಇಡೀ ಕುಟುಂಬದ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ. ಹಾಗಾಗಿ ಸಮೀರ್​ ವಾಂಖೆಡೆಯ ಕುಟುಂಬದ ಗೌರವ, ಸಾಮಾಜಿಕ ಗೌರವ ಮತ್ತು ಅವರೆಲ್ಲರ ಹೆಸರಿಗೆ ಹಾನಿ ಉಂಟಾಗಿದೆ. ಇದು ಸರಿಪಡಿಸಲಾಗದ ನಷ್ಟವಾಗಿದೆ’ ಎಂದು ಮೊಕದ್ದಮೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ವಿದೇಶಿ ಮಾಧ್ಯಮಗಳಿಂದ ಬಿಗ್​ ಪ್ಲ್ಯಾನ್​: ಮಗನ ಡ್ರಗ್ಸ್​ ಕೇಸ್​ ಹಿಂದಿನ ರಹಸ್ಯ ಬಿಚ್ಚಿಡ್ತಾರಾ ಶಾರುಖ್​?

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!