AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ

Nawazuddin Siddiqui: ಸೌತ್​ ಸಿನಿಮಾಗಳ ಗೆಲುವಿನಿಂದ ಬಾಲಿವುಡ್​ನಲ್ಲಿ ಹೊಸ ಚರ್ಚೆ ಶುರು ಆಗಿದೆ. ಹಿಂದಿ ಚಿತ್ರರಂಗದ ಪ್ರಮುಖ ಸೆಲೆಬ್ರಿಟಿಗಳು ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

‘ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳ್ತಾರೆ’: ಕೆಜಿಎಫ್​ 2, ಆರ್​ಆರ್​ಆರ್​ ಬಗ್ಗೆ ನವಾಜುದ್ದೀನ್​ ಸಿದ್ದಿಕಿ ಹೇಳಿಕೆ
ನವಾಜುದ್ದೀನ್ ಸಿದ್ದಿಕಿ, ಯಶ್
TV9 Web
| Edited By: |

Updated on: Apr 30, 2022 | 12:12 PM

Share

ಭಾರತೀಯ ಚಿತ್ರರಂಗದಲ್ಲಿ ಈಗ ಹೊಸ ಚರ್ಚೆ ಶುರುವಾಗಿದೆ. ಸೌತ್​ ವರ್ಸಸ್​ ನಾರ್ತ್​ ಎಂಬ ವಾತಾವರಣ ನಿರ್ಮಾಣ ಆಗಿದೆ. ಇಷ್ಟು ದಿನಗಳ ಕಾಲ ದೇಶಾದ್ಯಂತ ಪ್ರಾಬಲ್ಯ ಹೊಂದಿದ್ದ ಬಾಲಿವುಡ್ (Bollywood)​ ಸಿನಿಮಾಗಳು ಈಗ ಮಂಕಾಗಿವೆ. ಅವುಗಳ ಎದುರು ದಕ್ಷಿಣ ಭಾರತದ ಬಿಗ್​ ಬಜೆಟ್​ ಸಿನಿಮಾಗಳು ಶೈನ್​ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಒಂದು ಕಾಲದಲ್ಲಿ ಭರ್ಜರಿ ಕಮಾಯಿ ಮಾಡುತ್ತಿದ್ದ ಹಿಂದಿ ಚಿತ್ರಗಳು ಈಗ ಏಕಾಏಕಿ ನೆಲ ಕಚ್ಚಿರುವುದು ಯಾಕೆ ಎಂಬ ಕುರಿತು ಚರ್ಚೆ ಆಗುತ್ತದೆ. ನಟ ನವಾಜುದ್ದೀನ್​ ಸಿದ್ದಿಕಿ (Nawazuddin Siddiqui) ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ದಕ್ಷಿಣ ಭಾರತದ ಸಿನಿಮಾಗಳ (South Cinema) ಅಭೂತಪೂರ್ವ ಗೆಲುವಿನಿಂದಾಗಿ ಬಾಲಿವುಡ್​ ಮಂದಿಗೆ ಅಭದ್ರತೆ ಕಾಡುತ್ತಿದೆಯೇ ಎಂದು ಕೇಳಿದ್ದಕ್ಕೆ ನಾವಾಜುದ್ದೀನ್​ ಸಿದ್ದಿಕಿ ಉತ್ತರಿಸಿದ್ದಾರೆ. ಇದೆಲ್ಲವೂ ಸದ್ಯದ ಟ್ರೆಂಡ್​ ಅಷ್ಟೇ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಗೆದ್ದ ಸಿನಿಮಾವನ್ನು ಅತಿಯಾಗಿ ಹೊಗಳುವುದರ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಬಾಲಿವುಡ್​ನಲ್ಲಿ ನವಾಜುದ್ದೀನ್​ ಸಿದ್ದಿಕಿ ಸಖತ್ ಬೇಡಿಕೆ ಸೃಷ್ಟಿಕೊಂಡಿದ್ದಾರೆ. ಎಲ್ಲ ಬಗೆಯ ಪಾತ್ರಗಳಿಗೂ ಅವರು ಜೀವ ತುಂಬುತ್ತಾರೆ. ಖಳನಾಗಿ, ಹೀರೋ ಆಗಿ, ಪೋಷಕ ನಟನಾಗಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಈ ವಾರ (ಏ.29) ತೆರೆಕಂಡ ‘ಹೀರೋಪಂತಿ 2’ ಚಿತ್ರದಲ್ಲೂ ಅವರು ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಟೈಗರ್​ ಶ್ರಾಫ್​ ಹೀರೋ. ಆದರೆ ‘ಕೆಜಿಎಫ್​ 2’ ಸಿನಿಮಾದ ಹವಾ ಎದುರು ‘ಹೀರೋಪಂತಿ 2’ ಚಿತ್ರಕ್ಕೆ ನಿರೀಕ್ಷಿತ ಮಟ್ಟದ ಓಪನಿಂಗ್​ ಸಿಕ್ಕಿಲ್ಲ. ಅದೇ ರೀತಿ, ಕಳೆದ ವಾರ ತೆರೆಕಂಡ ಶಾಹಿದ್​ ಕಪೂರ್​ ನಟನೆಯ ‘ಜೆರ್ಸಿ’ ಸಿನಿಮಾ ಕೂಡ ಹೇಳ ಹೆಸರಿಲ್ಲದಂತೆ ನೆಲ ಕಚ್ಚಿದೆ. ಹಾಗಿದ್ದರೂ ಕೂಡ ನವಾಜುದ್ದೀನ್​ ಸಿದ್ದಿಕಿ ಅವರು ಈ ಸಂದರ್ಭವನ್ನು ಬೇರೆ ರೀತಿಯಲ್ಲಿ ಅರ್ಥೈಸಿದ್ದಾರೆ.

‘ಒಂದು ಸಿನಿಮಾ ಗೆದ್ದಾಗ ಎಲ್ಲರೂ ಅದರ ಜೊತೆ ನಿಲ್ಲುತ್ತಾರೆ ಮತ್ತು ಅಗತ್ಯಕ್ಕಿಂತಲೂ ಹೆಚ್ಚಾಗಿ ಹೊಗಳುತ್ತಾರೆ. ಹಾಗೆಯೇ ಒಂದು ಸಿನಿಮಾ ಸೋತಾಗ ಜನರು ಅಗತ್ಯಕ್ಕಿಂತಲೂ ಜಾಸ್ತಿ ಟೀಕಿಸುತ್ತಾರೆ. ಇದು ಫ್ಯಾಷನ್​ ಇದ್ದಂತೆ. ಒಂದು ವೇಳೆ ಬಾಲಿವುಡ್​ ಸಿನಿಮಾ ಗೆದ್ದರೆ ಈ ಮಾತುಗಳೆಲ್ಲ ಬದಲಾಗುತ್ತವೆ. ನನ್ನ ಪ್ರಕಾರ ಇದು ಒಂದು ಟ್ರೆಂಡ್​ ಅಷ್ಟೇ’ ಎಂದು ನವಾಜುದ್ದೀನ್​ ಸಿದ್ದಿಕಿ ಹೇಳಿದ್ದಾರೆ.

ಬಾಲಿವುಡ್​ನವರು ಅತಿಯಾಗಿ ಸೌತ್​ ಸಿನಿಮಾಗಳನ್ನು ರಿಮೇಕ್​ ಮಾಡುವ ಬಗ್ಗೆಯೂ ನವಾಜುದ್ದೀನ್​ ಸಿದ್ದಿಕಿ ಅವರಿಗೆ ತಕರಾರು ಇದೆ. ಆ ಬಗ್ಗೆ ಅವರು ಇತ್ತೀಚೆಗೆ ಮಾತನಾಡಿದ್ದರು. ದಕ್ಷಿಣ ಭಾರತದ ಹಲವು ಚಿತ್ರಗಳು ಹಿಂದಿಗೆ ರಿಮೇಕ್ ಆಗುತ್ತಿವೆ. ಇದು ತಪ್ಪು ಅನ್ನೋದು ನವಾಜುದ್ದೀನ್ ಅವರ ಅಭಿಪ್ರಾಯ. ‘ನಮ್ಮಿಂದ ಒಂದು ತಪ್ಪು ನಡೆದಿದೆ. ನಾವು ಸೌತ್ ಚಿತ್ರಗಳನ್ನು ರೀಮೇಕ್ ಮಾಡುತ್ತಲೇ ಇದ್ದೇವೆ. ನಾವು ಒರಿಜಿನಲ್​ ಸ್ಟೋರಿಗಳನ್ನು ಮಾಡುತ್ತಿಲ್ಲ. ನಾವು ರಿಮೇಕ್​ ಮೇಲೆ ಅವಲಂಬಿತರಾಗಿದ್ದೇವೆ. ನಮ್ಮ ತಪ್ಪುಗಳಿಂದ ನಾವು ಪಾಠ ಕಲಿಯಬೇಕು. ಮೂಲ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಬೇಕಿದೆ’ ಎಂದಿದ್ದರು ನವಾಜುದ್ದೀನ್ ಸಿದ್ದಿಕಿ.

ಒಟ್ಟಿನಲ್ಲಿ ‘ಆರ್​ಆರ್​ಆರ್​’, ‘ಪುಷ್ಪ’ ಹಾಗೂ ‘ಕೆಜಿಎಫ್​ 2’ ಸಿನಿಮಾದ ಗೆಲುವಿನಿಂದ ಬಾಲಿವುಡ್​ನಲ್ಲಿ ಹೊಸ ಚರ್ಚೆ ಶುರು ಆಗಿರುವುದಂತೂ ನಿಜ. ಚಿತ್ರರಂಗದ ಪ್ರಮುಖ ಸೆಲೆಬ್ರಿಟಿಗಳೆಲ್ಲರೂ ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ