AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nawazuddin Siddiqui: ‘ನನ್ನ ಅಪ್ರಾಪ್ತ ಮಗಳನ್ನು ನಿಮ್ಮ ಮ್ಯಾನೇಜರ್​ ಕೆಟ್ಟದಾಗಿ ತಬ್ಬಿಕೊಂಡ’: ಸ್ಟಾರ್​ ನಟನ ವಿರುದ್ಧ ಪತ್ನಿ ಗರಂ

Aaliya Siddiqui | Bollywood News: ಬಾಲಿವುಡ್​ನ ಸ್ಟಾರ್​ ಕಲಾವಿದ ನವಾಜುದ್ದೀನ್​ ಸಿದ್ದಿಕಿ ಮತ್ತು ಅವರ ಪತ್ನಿ ಆಲಿಯಾ ನಡುವೆ ಬಿರುಕು ಮೂಡಿದೆ. ಈ ಕುರಿತಾಗಿ ಆಲಿಯಾ ಅವರು ಬಹಿರಂಗ ಪತ್ರ ಬರೆದಿದ್ದಾರೆ.

Nawazuddin Siddiqui: ‘ನನ್ನ ಅಪ್ರಾಪ್ತ ಮಗಳನ್ನು ನಿಮ್ಮ ಮ್ಯಾನೇಜರ್​ ಕೆಟ್ಟದಾಗಿ ತಬ್ಬಿಕೊಂಡ’: ಸ್ಟಾರ್​ ನಟನ ವಿರುದ್ಧ ಪತ್ನಿ ಗರಂ
ನವಾಜುದ್ದೀನ್ ಸಿದ್ದಿಕಿ
ಮದನ್​ ಕುಮಾರ್​
|

Updated on:Mar 09, 2023 | 11:13 AM

Share

ನಟ ನವಾಜುದ್ದೀನ್​ ಸಿದ್ದಿಕಿ (Nawazuddin Siddiqui) ಅವರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ. ಅವರ ಪತ್ನಿ ಆಲಿಯಾ ವಿಚ್ಛೇದನಕ್ಕಾಗಿ (Divorce) ಪಟ್ಟು ಹಿಡಿದಿದ್ದಾರೆ. ಮಕ್ಕಳು ಯಾರ ಜೊತೆ ಇರಬೇಕು ಎಂಬ ವಿಚಾರದಲ್ಲಿ ಇಬ್ಬರ ನಡುವೆ ಜಟಾಪಟಿ ನಡೆದಿದೆ. ಅಷ್ಟೇ ಅಲ್ಲದೇ ಪರಸ್ಪರ ಇವರಿಬ್ಬರು ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಮಗಳ ಹೆಸರು ಕೂಡ ಪ್ರಸ್ತಾಪ ಆಗಿದೆ. ‘ನನ್ನ ಅಪ್ರಾಪ್ತ ಮಗಳ ಜೊತೆ ನಿಮ್ಮ ಮ್ಯಾನೇಜರ್​ ಕೆಟ್ಟದಾಗಿ ನಡೆದುಕೊಂಡ’ ಎಂದು ಆಲಿಯಾ (Aaliya Siddiqui) ಅವರು ಬಹಿರಂಗ ಪತ್ರದಲ್ಲಿ ನವಾಜುದ್ದೀನ್​ ಸಿದ್ದಿಕಿಗೆ ತಿವಿದಿದ್ದಾರೆ. ಕೆಲವು ಶಾಕಿಂಗ್​ ವಿಚಾರಗಳನ್ನು ಅವರು ಈ ಪತ್ರದಲ್ಲಿ ವಿವರಿಸಿದ್ದಾರೆ. ‘ನೀವೊಬ್ಬ ಅಪಾಯಕಾರಿ, ಬೇಜವಾಬ್ದಾರಿಯುತ ತಂದೆ’ ಎಂದು ಅವರು ಆರೋಪಿಸಿದ್ದಾರೆ. ಇವುಗಳಿಗೆ ನವಾಜುದ್ದೀನ್ ಸಿದ್ದಿಕಿ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ.

ಆಲಿಯಾ ಸಿದ್ದಿಕಿ ಬಹಿರಂಗ ಪತ್ರದಲ್ಲಿ ಏನಿದೆ?

‘ನನಗೆ ಗೊತ್ತಿಲ್ಲದಂತೆ ನನ್ನ ಅಪ್ರಾಪ್ತ ಮಗಳನ್ನು ನಿಮ್ಮ ಮ್ಯಾನೇಜರ್​ ಜೊತೆ ಬೇರೆ ದೇಶಕ್ಕೆ ಕಳಿಸಿದ್ರಿ. ಅವರಿಬ್ಬರು ಒಂದೇ ಕಡೆ ಉಳಿದುಕೊಳ್ಳುವಂತೆ ಮಾಡಿದ್ರಿ. ಆ ಸಮಯದಲ್ಲಿ ಆತ ನನ್ನ ಮಗಳನ್ನು ಅನುಚಿತವಾಗಿ ತಬ್ಬಿಕೊಂಡಿದ್ದ. ಮಗಳ ವಿರೋಧದ ನಡುವೆಯೂ ಇದೆಲ್ಲ ನಡೆದಿತ್ತು. ನಾವಿಬ್ಬರೂ ಆಕೆಯ ಜೊತೆಯಲ್ಲಿ ಇಲ್ಲದಿದ್ದಾಗ ನಿಮ್ಮ ಮ್ಯಾನೇಜರ್​ ಇದನ್ನೆಲ್ಲ ಮಾಡಿದ ಎಂಬುದನ್ನು ನೀವು ನಿರಾಕರಿಸಲು ಸಾಧ್ಯವಿಲ್ಲ’ ಎಂದು ಆಲಿಯಾ ಸಿದ್ದಿಕಿ ಬಹಿರಂಗ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ
Image
ತಿಂಗಳಿಗೆ ಹತ್ತು ಲಕ್ಷ ಕೊಡ್ತಿದ್ದೀನಿ, ಆದ್ರೂ ಹಣಕ್ಕಾಗಿ ಡ್ರಾಮಾ ಮಾಡ್ತಿದ್ದಾಳೆ: ಪತ್ನಿ ವಿರುದ್ಧ ನವಾಜುದ್ದೀನ್ ಕಿಡಿ
Image
‘ನನ್ನ ಪತಿ ಅತ್ಯಾಚಾರ ಮಾಡಿದ್ದಾರೆ’; ಸ್ಟಾರ್ ನಟನ ವಿರುದ್ಧ ಗುಡುಗಿದ ಪತ್ನಿ
Image
ನಟ ನವಾಜುದ್ದೀನ್ ಸಿದ್ದಿಕಿಯಿಂದ ಪತ್ನಿಗೆ ಚಿತ್ರಹಿಂಸೆ; ನ್ಯಾಯಾಲಯದಲ್ಲಿ ಕೇಸ್ ಮತ್ತಷ್ಟು ಸ್ಟ್ರಾಂಗ್  
Image
‘ಚಿತ್ರರಂಗದಲ್ಲಿ ನೆಪೋಟಿಸಂಗಿಂತಲೂ ಈ ಸಮಸ್ಯೆ ಬಹಳ ಅಪಾಯಕಾರಿ’; ಮುಕ್ತವಾಗಿ ಹೇಳಿಕೊಂಡ ನವಾಜುದ್ದೀನ್ ಸಿದ್ದಿಕಿ

ಇದನ್ನೂ ಓದಿ: ನಟ ನವಾಜುದ್ದೀನ್ ಸಿದ್ದಿಕಿಯಿಂದ ಪತ್ನಿಗೆ ಚಿತ್ರಹಿಂಸೆ; ನ್ಯಾಯಾಲಯದಲ್ಲಿ ಕೇಸ್ ಮತ್ತಷ್ಟು ಸ್ಟ್ರಾಂಗ್  

‘ಆ ಮ್ಯಾನೇಜರ್​ ಮೇಲೆ ನೀವು ಈಗಲೂ ನಂಬಿಕೆ ಇಟ್ಟುಕೊಂಡಿದ್ದೀರಿ. ಅದನ್ನೆಲ್ಲ ನಾನು ವಿರೋಧಿಸಿದಾಗ ನಿಮ್ಮ ಪ್ರಭಾವ ಬಳಸಿ ನನ್ನ ಮಕ್ಕಳನ್ನು ನಿಮ್ಮ ಸುಪರ್ದಿಗೆ ಪಡೆಯಲು ಪ್ರಯತ್ನಿಸುತ್ತಿದ್ದೀರಿ. ನಿಮ್ಮ ಪಿಆರ್​ ತಂಡದವರು ಸತ್ಯವನ್ನು ತಿರುಚುವ ಮುನ್ನವೇ ನಾನು ನಿಮಗೆ ಮತ್ತು ನಿಮ್ಮ ಮ್ಯಾನೇಜರ್​ಗೆ ಜನವರಿ ತಿಂಗಳಲ್ಲೇ ಲೀಗಲ್​ ನೋಟಿಸ್​ ಕಳಿಸಿದ್ದೇನೆ. ಎಲ್ಲದನ್ನೂ ಸಾಬೀತು ಮಾಡಲು ನನ್ನ ಬಳಿ ಸಾಕ್ಷಿಗಳಿವೆ. ನಿಮ್ಮನ್ನು ಒಬ್ಬ ಹೀರೋ ಅಥವಾ ಫ್ಯಾಮಿಲಿ ಮ್ಯಾನ್​ ರೀತಿ ಬಿಂಬಿಸಲು ಪ್ರಯತ್ನಿಸುತ್ತಿರುವ ಪಿಆರ್​ ಏಜೆನ್ಸಿಗಳಿಗೆ ಇದೆಲ್ಲ ತಿಳಿದಿರಲಿ’ ಎಂದು ಆಲಿಯಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ನಿಯ ವಿರುದ್ಧವೇ ನವಾಜುದ್ದೀನ್​ ಸಿದ್ದಿಕಿ ಅವರು ಕೆಲವು ದೂರುಗಳನ್ನು ನೀಡಿದ್ದಾರೆ. ಆ ವಿಚಾರದಲ್ಲಿ ನಟನಿಗೆ ಸಪೋರ್ಟ್ ಮಾಡಲು ವರ್ಸೋವಾ ಪೊಲೀಸರು ಕಾನೂನನ್ನು ಗಾಳಿಗೆ ತೋರಿದ್ದಾರೆ ಎಂದು ಆಲಿಯಾ ಆರೋಪಿಸಿದ್ದಾರೆ. ‘ನೀವು ನೀಡಿದ ಆಧಾರರಹಿತ ಕ್ರಿಮಿನಲ್​ ದೂರಿನ ಅನ್ವಯ ಪೊಲೀಸರು ನನ್ನನ್ನು ರಾತ್ರಿ ವೇಳೆಯಲ್ಲಿ ಠಾಣೆಗೆ ಕರೆಸಿಕೊಂಡಿದ್ದಾರೆ. ಆದರೆ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಸೇರಿ ನಿಮ್ಮ ಹಾಗೂ ಇತರರ ವಿರುದ್ಧ ನಾನು ನೀಡಿದ 5 ದೂರಿನ ಮೇಲೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಆಲಿಯಾ ಆರೋಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:13 am, Thu, 9 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ