AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aaliya Siddiqui: ಹೊಸ ಬಾಯ್​ಫ್ರೆಂಡ್​ ಫೋಟೋ ಹಂಚಿಕೊಂಡ ನವಾಜುದ್ದೀನ್​ ಸಿದ್ಧಿಕಿ ಪತ್ನಿ ಆಲಿಯಾ; ಶೀಘ್ರದಲ್ಲೇ ಹೆಸರು ಬದಲಾವಣೆ

Nawazuddin Siddiqui: ‘ಇದರಲ್ಲಿ ನಾನು ಖುಷಿಯಾಗಿದ್ದೇನೆ. ಖುಷಿಯಾಗಿ ಬದುಕುವ ಹಕ್ಕು ನನಗೆ ಇಲ್ಲವೇ’ ಎಂದು ಆಲಿಯಾ ಸಿದ್ಧಿಕಿ ಅವರು ನೆಟ್ಟಿಗರಲ್ಲಿ ಪ್ರಶ್ನೆ ಮಾಡಿದ್ದಾರೆ.

Aaliya Siddiqui: ಹೊಸ ಬಾಯ್​ಫ್ರೆಂಡ್​ ಫೋಟೋ ಹಂಚಿಕೊಂಡ ನವಾಜುದ್ದೀನ್​ ಸಿದ್ಧಿಕಿ ಪತ್ನಿ ಆಲಿಯಾ; ಶೀಘ್ರದಲ್ಲೇ ಹೆಸರು ಬದಲಾವಣೆ
ಬಾಯ್​ಫ್ರೆಂಡ್​ ಜೊತೆ ಆಲಿಯಾ ಸಿದ್ಧಿಕಿ, ನವಾಜುದ್ದೀನ್​ ಸಿದ್ಧಕಿ
ಮದನ್​ ಕುಮಾರ್​
|

Updated on: Jun 07, 2023 | 11:09 AM

Share

ಬಾಲಿವುಡ್​ನ ಖ್ಯಾತ ನಟ ನವಾಜುದ್ದೀನ್​ ಸಿದ್ಧಿಕಿ (Nawazuddin Siddiqui) ಸಂಸಾರದಲ್ಲಿ ಬಿರುಗಾಳಿ ಎದ್ದು ಬಹಳ ತಿಂಗಳು ಕಳೆದಿದೆ. ಇನ್ನೇನು ಈ ಜೋಡಿ ವಿಚ್ಛೇದನ (Divorce) ಕೂಡ ಪಡೆಯಲಿದೆ. ಅಷ್ಟರಲ್ಲಾಗಲೇ ನವಾಜುದ್ದೀನ್​ ಸಿದ್ಧಿಕಿ ಪತ್ನಿ ಆಲಿಯಾ ಸಿದ್ಧಿಕಿ (Aaliya Siddiqui) ಅವರು ಹೊಸ ರಿಲೇಷನ್​ಶಿಪ್​ನಲ್ಲಿ ಮುಳುಗಿದ್ದಾರೆ. ಈಗ ಅವರು ತಮ್ಮ ಹೊಸ ಬಾಯ್​ಫ್ರೆಂಡ್​ ಫೋಟೋ ಹಂಚಿಕೊಂಡಿದ್ದಾರೆ. ಅವರ ಈ ನಿರ್ಧಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ನವಾಜುದ್ದೀನ್​ ಸಿದ್ಧಿಕಿ ಮೇಲೆ ಆಲಿಯಾ ಹೊರಿಸಿರುವ ಆರೋಪಗಳು ಒಂದೆರಡಲ್ಲ. ಕೋರ್ಟ್​ನಲ್ಲಿ ಆ ಎಲ್ಲ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಅದರ ನಡುವೆಯೇ ಆಲಿಯಾಗೆ ಬೇರೆ ವ್ಯಕ್ತಿಯ ಜೊತೆ ಪ್ರೀತಿ ಚಿಗುರಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

‘ನಾನು ಕಾಪಾಡಿಕೊಂಡಿದ್ದ ಸಂಬಂಧದಿಂದ ಹೊರಬರಲು 19 ವರ್ಷ ಹಿಡಿಯಿತು. ಇಂದು ಮತ್ತು ಎಂದೆಂದಿಗೂ ಬದುಕಿನಲ್ಲಿ ಮಕ್ಕಳೇ ನನ್ನ ಮೊದಲ ಆದ್ಯತೆ. ಜೀವನದಲ್ಲಿನ ಕೆಲವು ಸಂಬಂಧಗಳು ಸ್ನೇಹಕ್ಕಿಂತಲೂ ಮಿಗಿಲಾದವು. ಈ ಸಂಬಂಧ ಕೂಡ ಇದೇ ರೀತಿ ಆಗಿರುವಂಥದ್ದು. ಇದರಲ್ಲಿ ನಾನು ಖುಷಿಯಾಗಿದ್ದೇನೆ. ಹಾಗಾಗಿ ಈ ಖುಷಿಯ ವಿಷಯವನ್ನು ನಿಮ್ಮ ಜೊತೆ ಹಂಚಿಕೊಂಡಿದ್ದೇನೆ. ಖುಷಿಯಾಗಿ ಬದುಕುವ ಹಕ್ಕು ನನಗೆ ಇಲ್ಲವೇ’ ಎಂದು ಆಲಿಯಾ ಸಿದ್ಧಿಕಿ ಅವರು ನೆಟ್ಟಿಗರಲ್ಲಿ ಪ್ರಶ್ನೆ ಮಾಡಿದ್ದಾರೆ. ಈ ಫೋಟೋದಲ್ಲಿ ಇರುವ ವ್ಯಕ್ತಿ ಯಾರು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಆಲಿಯಾ ಸಿದ್ಧಿಕಿ ಮಾಡಿದ ಈ ಪೋಸ್ಟ್​ಗೆ ಅನೇಕ ಬಗೆಯ ಪ್ರತಿಕ್ರಿಯೆಗಳು ಬಂದಿವೆ. ‘ನಿಮ್ಮ ಸರ್​ನೇಮ್​ ಬದಲಾಯಿಸಿಕೊಳ್ಳಿ’ ಎಂದು ಒಬ್ಬರು ಸಲಹೆ ನೀಡಿದ್ದಾರೆ. ಅದಕ್ಕೆ ಉತ್ತರಿಸಿರುವ ಆಲಿಯಾ ಅವರು ‘ಅತಿ ಶೀಘ್ರದಲ್ಲಿ’ ಎಂದು ಕಮೆಂಟ್​ ಮಾಡಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆ ಕೂಡ ಅವರು ಬರೆದುಕೊಂಡಿದ್ದರು. ಅಧಿಕೃತವಾಗಿ ವಿಚ್ಛೇದನ ಪಡೆದ ಬಳಿಕ ‘ಆಲಿಯಾ ಸಿದ್ಧಿಕಿ’ ಎಂಬ ಹೆಸರನ್ನು ‘ಅಂಜನಾ ಕಿಶೋರ್​ ಪಾಂಡೆ’ ಎಂದು ಬದಲಾಯಿಸಿಕೊಳ್ಳುವುದಾಗಿ ಅವರು ತಿಳಿಸಿದ್ದರು.

ಇದನ್ನೂ ಓದಿ: ಹೆಣ್ಣಿನ ವೇಷದಲ್ಲಿ ಬಂದ ಸ್ಟಾರ್ ನಟ; ಯಾರು ಎಂದು ಗುರುತಿಸುತ್ತೀರಾ?

ಈ ಹಿಂದೆ ಆಲಿಯಾ ಅವರು ನವಾಜುದ್ದೀನ್​ಗೆ ಬಹಿರಂಗ ಪತ್ರ ಬರೆದಿದ್ದರು. ಅದರಲ್ಲಿ ಅನೇಕ ಗಂಭೀರ ಆರೋಪಗಳನ್ನು ಮಾಡಿದ್ದರು. ‘ನನಗೆ ಗೊತ್ತಿಲ್ಲದಂತೆ ನನ್ನ ಅಪ್ರಾಪ್ತ ಮಗಳನ್ನು ನಿಮ್ಮ ಮ್ಯಾನೇಜರ್​ ಜೊತೆ ಬೇರೆ ದೇಶಕ್ಕೆ ಕಳಿಸಿದ್ರಿ. ಅವರಿಬ್ಬರು ಒಂದೇ ಕಡೆ ಉಳಿದುಕೊಳ್ಳುವಂತೆ ಮಾಡಿದ್ರಿ. ಆ ಸಮಯದಲ್ಲಿ ಆತ ನನ್ನ ಮಗಳನ್ನು ಅನುಚಿತವಾಗಿ ತಬ್ಬಿಕೊಂಡಿದ್ದ. ಮಗಳ ವಿರೋಧದ ನಡುವೆಯೂ ಇದೆಲ್ಲ ನಡೆದಿತ್ತು. ನಾವಿಬ್ಬರೂ ಆಕೆಯ ಜೊತೆಯಲ್ಲಿ ಇಲ್ಲದಿದ್ದಾಗ ನಿಮ್ಮ ಮ್ಯಾನೇಜರ್​ ಇದನ್ನೆಲ್ಲ ಮಾಡಿದ ಎಂಬುದನ್ನು ನೀವು ನಿರಾಕರಿಸಲು ಸಾಧ್ಯವಿಲ್ಲ’ ಎಂದು ಆಲಿಯಾ ಸಿದ್ದಿಕಿ ಬಹಿರಂಗ ಪತ್ರದಲ್ಲಿ ಬರೆದಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್