AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಶಿವನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ ಎಂದು ವರದಿ ಬಿತ್ತರ ಆಗಿದೆ. ಅಸಲಿಗೆ ಅವರು ಪತಿಯನ್ನು ಅನ್​ಫಾಲೋ ಮಾಡಿಯೇ ಇಲ್ಲ. ಇದರ ಸ್ಕ್ರೀನ್​ಶಾಟ್​ಗಳನ್ನು ಶೇರ್ ಮಾಡಿಕೊಳ್ಳಲಾಗುತ್ತಿದೆ. ನಯನತಾರಾಗೆ ಆಗದೇ ಇರುವ ಯಾರೋ ಈ ಕೆಲಸ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಯನತಾರಾ ಹಾಗೂ ವಿಘ್ನೇಶ್ ಸಂಸಾರದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು
ನಯನತಾರಾ
ರಾಜೇಶ್ ದುಗ್ಗುಮನೆ
|

Updated on:Mar 03, 2024 | 9:45 AM

Share

ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ಹಾಗೂ ನಯನತಾರಾ ಅವರು ಪ್ರೀತಿಸಿ ಮದುವೆ ಆದವರು. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಆದರೆ, ಕೆಲವರು ಕಿಡಿಗೇಡಿಗಳು ಇವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಯನತಾರಾ ಫ್ಯಾನ್ಸ್ ಅಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ. ನಯನತಾರಾ ಅವರು ಕಾಲಿವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ.

ನಯನತಾರಾ ದಕ್ಷಿಣದ ಬೇಡಿಕೆಯ ನಟಿಯಾಗಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ವಿಘ್ನೇಶ್ ಶಿವನ್ ಅವರು ತಮಿಳು ನಿರ್ದೇಶಕರಾಗಿ ಹೊರಹೊಮ್ಮಿದ್ದಾರೆ. ಇಬ್ಬರು ಮದುವೆ ಆಗಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಇವರು ಅವಳಿ ಮಕ್ಕಳು ಪಡೆದಿದ್ದಾರೆ. ಇವರ ಬಗ್ಗೆ ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಲ್ಲಿ ನಿಜವಿಲ್ಲ ಎಂಬುದನ್ನು ಫ್ಯಾನ್ಸ್ ಸಾಬೀತು ಮಾಡಿದ್ದಾರೆ.

ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಶಿವನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ ಎಂದು ವರದಿ ಬಿತ್ತರ ಆಗಿದೆ. ಅಸಲಿಗೆ ಅವರು ಪತಿಯನ್ನು ಅನ್​ಫಾಲೋ ಮಾಡಿಯೇ ಇಲ್ಲ. ಇದರ ಸ್ಕ್ರೀನ್​ಶಾಟ್​ಗಳನ್ನು ಶೇರ್ ಮಾಡಿಕೊಳ್ಳಲಾಗುತ್ತಿದೆ. ನಯನತಾರಾಗೆ ಆಗದೇ ಇರುವ ಯಾರೋ ಈ ಕೆಲಸ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ನಯನತಾರಾ ಅವರು ‘ಜವಾನ್’ ಸಿನಿಮಾ ಮೂಲಕ ಹಿಂದಿ ಚಿತ್ರರಂಗಕ್ಕೆ ಪರಿಚಯಗೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಶಾರುಖ್ ಖಾನ್​ಗೆ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಾಗಿದೆ. ಹಾಗಂತ ಅವರು ಕೇವಲ ಬಿಗ್ ಬಜೆಟ್ ಸಿನಿಮಾಗಳನ್ನು ಮಾತ್ರ ಮಾಡುತ್ತಿಲ್ಲ. ಹೊಸಬರ ಚಿತ್ರವನ್ನು ಕೂಡ ಒಪ್ಪಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ಜೈ ಶ್ರೀರಾಮ್’: ರಾಮನ ಬಗ್ಗೆ ವಿವಾದಾತ್ಮಕ ಡೈಲಾಗ್; ತಮ್ಮ ಸಿನಿಮಾ ಬಗ್ಗೆ ಮಾತನಾಡಿದ ನಯನತಾರಾ

ಇತ್ತೀಚೆಗೆ ನಯನತಾರಾ ನಟಿಸಿದ ‘ಅನ್ನಪೂರ್ಣಿ’ ಸಿನಿಮಾ ವಿವಾದ ಸೃಷ್ಟಿ ಮಾಡಿತ್ತು. ಈ ಚಿತ್ರದಲ್ಲಿ ಬಳಕೆ ಆದ ವಾಕ್ಯದ ಬಗ್ಗೆ ಅನೇಕರು ತಕರಾರು ತೆಗೆದಿದ್ದರು. ರಾಮ ಕೂಡ ಮಾಂಸ ಸೇವನೆ ಮಾಡುತ್ತಿದ್ದ ಎಂಬ ವಾಕ್ಯ ಸಾಕಷ್ಟು ಟೀಕೆಯನ್ನು ಎದುರಿಸಿತ್ತು. ನಂತರ ಈ ವಾಕ್ಯಕ್ಕೆ ಕತ್ತರಿ ಹಾಕಿ ಮತ್ತೆ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:43 pm, Sat, 2 March 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?