AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಡಿಲ ಆಗಲಿದೆ ನಯನತಾರಾ ವೃತ್ತಿಜೀವನದ ರೂಲ್ಸ್​? ಶಾರುಖ್​ ಖಾನ್​ಗಾಗಿ ಈ ನಟಿಯ ಒಪ್ಪಂದ ಬದಲಾಗುತ್ತಾ?

ಇತ್ತೀಚಿನ ವರ್ಷಗಳಲ್ಲಿ ನಯನತಾರಾ ಅವರು ಯಾವುದೇ ಸಿನಿಮಾವನ್ನು ಪ್ರಚಾರ ಮಾಡಿಲ್ಲ. ನಿರ್ಮಾಪಕರಿಂದ ಬಹುಕೋಟಿ ರೂಪಾಯಿ ಸಂಭಾವನೆ ಪಡೆದರೂ ಕೂಡ ಅವರು ಪ್ರಚಾರಕ್ಕೆ ಬರುವುದಿಲ್ಲ. ಆ ರೀತಿಯಾಗಿಯೇ ಅವರು ಒಪ್ಪಂದ ಮಾಡಿಕೊಂಡಿರುತ್ತಾರೆ. ಆದರೆ ‘ಜವಾನ್​’ ವಿಚಾರದಲ್ಲಿ ಅವರು ಈ ರೂಲ್ಸ್​ ಸಡಿಲ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಡಿಲ ಆಗಲಿದೆ ನಯನತಾರಾ ವೃತ್ತಿಜೀವನದ ರೂಲ್ಸ್​? ಶಾರುಖ್​ ಖಾನ್​ಗಾಗಿ ಈ ನಟಿಯ ಒಪ್ಪಂದ ಬದಲಾಗುತ್ತಾ?
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Aug 17, 2023 | 11:34 AM

Share

ನಟಿ ನಯನತಾರಾ (Nayanthara) ಅವರು ದಕ್ಷಿಣ ಭಾರತದಲ್ಲಿ ಲೇಡಿ ಸೂಪರ್​ ಸ್ಟಾರ್​ ಅಂತ ಫೇಮಸ್​. ಕಾಲ್​ಶೀಟ್​ಗಾಗಿ ಅವರ ಮನೆ ಮುಂದೆ ನಿರ್ಮಾಪಕರು ಕ್ಯೂ ನಿಲ್ಲುತ್ತಾರೆ. ಈಗ ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಶಾರುಖ್​ ಖಾನ್​ (Shah Rukh Khan) ನಟನೆಯ ಸಿನಿಮಾ ಎಂಬ ಕಾರಣಕ್ಕೆ ‘ಜವಾನ್​’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಪ್ರಚಾರ ಕಾರ್ಯಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಈ ಸಿನಿಮಾದ ಸಲುವಾಗಿ ನಯನತಾರಾ ಅವರು ತಮ್ಮ ವೃತ್ತಿಜೀವನದ ಕೆಲವು ನಿಯಮಗಳನ್ನು ಸಡಿಲ ಮಾಡಿಕೊಳ್ಳುತ್ತಾರೆ ಎಂಬ ಸುದ್ದಿ ಹರಡಿದೆ. ಇಷ್ಟು ದಿನ ತಮ್ಮ ಸಿನಿಮಾಗಳ ಪ್ರಚಾರಕ್ಕೆ ಹಿಂದೇಟು ಹಾಕುತ್ತಿದ್ದ ನಯನತಾರಾ ಅವರು ಈಗ ಶಾರುಖ್​ ಖಾನ್​ ಮೇಲಿನ ಗೌರವದಿಂದ ‘ಜವಾನ್​’ ಸಿನಿಮಾದ (Jawan Movie) ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ನಯನತಾರಾ ಅವರು ಯಾವುದೇ ಸಿನಿಮಾವನ್ನು ಪ್ರಚಾರ ಮಾಡಿಲ್ಲ. ನಿರ್ಮಾಪಕರಿಂದ ಬಹುಕೋಟಿ ರೂಪಾಯಿ ಸಂಭಾವನೆ ಪಡೆದರೂ ಕೂಡ ಅವರು ಪ್ರಚಾರಕ್ಕೆ ಬರುವುದಿಲ್ಲ. ಆ ರೀತಿಯಾಗಿಯೇ ಅವರು ಒಪ್ಪಂದ ಮಾಡಿಕೊಂಡಿರುತ್ತಾರೆ. ಆದರೆ ‘ಜವಾನ್​’ ವಿಚಾರದಲ್ಲಿ ಅವರು ಈ ರೂಲ್ಸ್​ ಸಡಿಲ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾರುಖ್​ ಖಾನ್​ ಜೊತೆ ಅವರು ಪ್ರಚಾರದಲ್ಲಿ ಭಾಗಿ ಆಗುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ನಯನತಾರಾ ಅಥವಾ ಶಾರುಖ್​ ಖಾನ್​ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ: ‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಅಟ್ಲಿ ಅವರ ನಿರ್ದೇಶನದಲ್ಲಿ ‘ಜವಾನ್​’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಸಂಸ್ಥೆ ಬಂಡವಾಳ ಹೂಡಿದೆ. ಶಾರುಖ್​ ಖಾನ್ ಅವರ ಪತ್ನಿ ಗೌರಿ ಖಾನ್​ ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಕಲಾವಿದರಿಗೆ ಬಹುಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ದಕ್ಷಿಣ ಭಾರತದಲ್ಲಿ ಬಹಳ ಖ್ಯಾತಿ ಹೊಂದಿರುವ ನಯನತಾರಾ ಹಾಗೂ ವಿಜಯ್​ ಸೇತುಪತಿ ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ನಯನತಾರಾ ಮೊದಲಿನಂತಿಲ್ಲ’; ವಿಘ್ನೇಶ್​ ಶಿವನ್​ಗೆ ವಾರ್ನಿಂಗ್ ಕೊಟ್ಟ ಶಾರುಖ್ ಖಾನ್

ನಯನತಾರಾ ಅವರು ವಿಘ್ನೇಶ್​ ಶಿವನ್​ ಜೊತೆ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಬಾಡಿಗೆ ತಾಯಿ ಮೂಲಕ ಈ ದಂಪತಿಯು ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ಮಕ್ಕಳ ಆರೈಕೆಯ ಜೊತೆಯಲ್ಲಿ ಸಿನಿಮಾ ಕೆಲಸಗಳಿಗೂ ನಯನತಾರಾ ಅವರು ಸಮಯ ನೀಡುತ್ತಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿದ್ದರೂ ಕೂಡ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ‘ಜವಾನ್​’ ಸಿನಿಮಾದಲ್ಲಿ ಅವರು ಆ್ಯಕ್ಷನ್​ ಮೆರೆದಿದ್ದಾರೆ. ಆ ಕಾರಣದಿಂದಲೂ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು