AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಡಿಲ ಆಗಲಿದೆ ನಯನತಾರಾ ವೃತ್ತಿಜೀವನದ ರೂಲ್ಸ್​? ಶಾರುಖ್​ ಖಾನ್​ಗಾಗಿ ಈ ನಟಿಯ ಒಪ್ಪಂದ ಬದಲಾಗುತ್ತಾ?

ಇತ್ತೀಚಿನ ವರ್ಷಗಳಲ್ಲಿ ನಯನತಾರಾ ಅವರು ಯಾವುದೇ ಸಿನಿಮಾವನ್ನು ಪ್ರಚಾರ ಮಾಡಿಲ್ಲ. ನಿರ್ಮಾಪಕರಿಂದ ಬಹುಕೋಟಿ ರೂಪಾಯಿ ಸಂಭಾವನೆ ಪಡೆದರೂ ಕೂಡ ಅವರು ಪ್ರಚಾರಕ್ಕೆ ಬರುವುದಿಲ್ಲ. ಆ ರೀತಿಯಾಗಿಯೇ ಅವರು ಒಪ್ಪಂದ ಮಾಡಿಕೊಂಡಿರುತ್ತಾರೆ. ಆದರೆ ‘ಜವಾನ್​’ ವಿಚಾರದಲ್ಲಿ ಅವರು ಈ ರೂಲ್ಸ್​ ಸಡಿಲ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಡಿಲ ಆಗಲಿದೆ ನಯನತಾರಾ ವೃತ್ತಿಜೀವನದ ರೂಲ್ಸ್​? ಶಾರುಖ್​ ಖಾನ್​ಗಾಗಿ ಈ ನಟಿಯ ಒಪ್ಪಂದ ಬದಲಾಗುತ್ತಾ?
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Aug 17, 2023 | 11:34 AM

Share

ನಟಿ ನಯನತಾರಾ (Nayanthara) ಅವರು ದಕ್ಷಿಣ ಭಾರತದಲ್ಲಿ ಲೇಡಿ ಸೂಪರ್​ ಸ್ಟಾರ್​ ಅಂತ ಫೇಮಸ್​. ಕಾಲ್​ಶೀಟ್​ಗಾಗಿ ಅವರ ಮನೆ ಮುಂದೆ ನಿರ್ಮಾಪಕರು ಕ್ಯೂ ನಿಲ್ಲುತ್ತಾರೆ. ಈಗ ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನಟಿಸಿದ್ದು, ಆ ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಶಾರುಖ್​ ಖಾನ್​ (Shah Rukh Khan) ನಟನೆಯ ಸಿನಿಮಾ ಎಂಬ ಕಾರಣಕ್ಕೆ ‘ಜವಾನ್​’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಪ್ರಚಾರ ಕಾರ್ಯಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ. ಈ ಸಿನಿಮಾದ ಸಲುವಾಗಿ ನಯನತಾರಾ ಅವರು ತಮ್ಮ ವೃತ್ತಿಜೀವನದ ಕೆಲವು ನಿಯಮಗಳನ್ನು ಸಡಿಲ ಮಾಡಿಕೊಳ್ಳುತ್ತಾರೆ ಎಂಬ ಸುದ್ದಿ ಹರಡಿದೆ. ಇಷ್ಟು ದಿನ ತಮ್ಮ ಸಿನಿಮಾಗಳ ಪ್ರಚಾರಕ್ಕೆ ಹಿಂದೇಟು ಹಾಕುತ್ತಿದ್ದ ನಯನತಾರಾ ಅವರು ಈಗ ಶಾರುಖ್​ ಖಾನ್​ ಮೇಲಿನ ಗೌರವದಿಂದ ‘ಜವಾನ್​’ ಸಿನಿಮಾದ (Jawan Movie) ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ನಯನತಾರಾ ಅವರು ಯಾವುದೇ ಸಿನಿಮಾವನ್ನು ಪ್ರಚಾರ ಮಾಡಿಲ್ಲ. ನಿರ್ಮಾಪಕರಿಂದ ಬಹುಕೋಟಿ ರೂಪಾಯಿ ಸಂಭಾವನೆ ಪಡೆದರೂ ಕೂಡ ಅವರು ಪ್ರಚಾರಕ್ಕೆ ಬರುವುದಿಲ್ಲ. ಆ ರೀತಿಯಾಗಿಯೇ ಅವರು ಒಪ್ಪಂದ ಮಾಡಿಕೊಂಡಿರುತ್ತಾರೆ. ಆದರೆ ‘ಜವಾನ್​’ ವಿಚಾರದಲ್ಲಿ ಅವರು ಈ ರೂಲ್ಸ್​ ಸಡಿಲ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾರುಖ್​ ಖಾನ್​ ಜೊತೆ ಅವರು ಪ್ರಚಾರದಲ್ಲಿ ಭಾಗಿ ಆಗುತ್ತಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ನಯನತಾರಾ ಅಥವಾ ಶಾರುಖ್​ ಖಾನ್​ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ: ‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಅಟ್ಲಿ ಅವರ ನಿರ್ದೇಶನದಲ್ಲಿ ‘ಜವಾನ್​’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ಶಾರುಖ್​ ಖಾನ್​ ಅವರು ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಸಂಸ್ಥೆ ಬಂಡವಾಳ ಹೂಡಿದೆ. ಶಾರುಖ್​ ಖಾನ್ ಅವರ ಪತ್ನಿ ಗೌರಿ ಖಾನ್​ ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಈ ಸಿನಿಮಾದ ಕಲಾವಿದರಿಗೆ ಬಹುಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ದಕ್ಷಿಣ ಭಾರತದಲ್ಲಿ ಬಹಳ ಖ್ಯಾತಿ ಹೊಂದಿರುವ ನಯನತಾರಾ ಹಾಗೂ ವಿಜಯ್​ ಸೇತುಪತಿ ಅವರು ಈ ಚಿತ್ರದಲ್ಲಿ ನಟಿಸಿರುವುದರಿಂದ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಈ ಚಿತ್ರಕ್ಕೆ ಭರ್ಜರಿ ಕಲೆಕ್ಷನ್​ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ‘ನಯನತಾರಾ ಮೊದಲಿನಂತಿಲ್ಲ’; ವಿಘ್ನೇಶ್​ ಶಿವನ್​ಗೆ ವಾರ್ನಿಂಗ್ ಕೊಟ್ಟ ಶಾರುಖ್ ಖಾನ್

ನಯನತಾರಾ ಅವರು ವಿಘ್ನೇಶ್​ ಶಿವನ್​ ಜೊತೆ ಹಾಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಬಾಡಿಗೆ ತಾಯಿ ಮೂಲಕ ಈ ದಂಪತಿಯು ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ಮಕ್ಕಳ ಆರೈಕೆಯ ಜೊತೆಯಲ್ಲಿ ಸಿನಿಮಾ ಕೆಲಸಗಳಿಗೂ ನಯನತಾರಾ ಅವರು ಸಮಯ ನೀಡುತ್ತಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು ಹಲವು ವರ್ಷಗಳು ಕಳೆದಿದ್ದರೂ ಕೂಡ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ‘ಜವಾನ್​’ ಸಿನಿಮಾದಲ್ಲಿ ಅವರು ಆ್ಯಕ್ಷನ್​ ಮೆರೆದಿದ್ದಾರೆ. ಆ ಕಾರಣದಿಂದಲೂ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!