AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜವಾನ್​’ ತಂಡದಲ್ಲಿ ಕಿರಿಕ್​? ನಯನತಾರಾ ಮುನಿಸಿಗೆ ಪ್ರತಿಕ್ರಿಯೆ ನೀಡಿದ ಶಾರುಖ್​ ಖಾನ್​

ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನರ್ಮದಾ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇ​ಸ್​ ಸಿಕ್ಕಿಲ್ಲ ಎಂಬ ಬೇಸರ ಅವರಿಗೆ ಇದೆ ಎಂದು ಗಾಸಿಪ್​ ಹಬ್ಬಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅವರ ಪೋಸ್ಟ್​ ವೈರಲ್​ ಆಗಿದೆ.

‘ಜವಾನ್​’ ತಂಡದಲ್ಲಿ ಕಿರಿಕ್​? ನಯನತಾರಾ ಮುನಿಸಿಗೆ ಪ್ರತಿಕ್ರಿಯೆ ನೀಡಿದ ಶಾರುಖ್​ ಖಾನ್​
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Sep 23, 2023 | 12:14 PM

Share

ಗಲ್ಲಾಪೆಟ್ಟಿಗೆಯಲ್ಲಿ ‘ಜವಾನ್​’ ಸಿನಿಮಾ (Jawan Movie) ಅನೇಕ ಹೊಸ ದಾಖಲೆಗಳನ್ನು ಬರೆದಿದೆ. ವಿಶ್ವಾದ್ಯಂತ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಜಾಗತಿಕ ಮಾರುಕಟ್ಟೆಯಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವ ಹಂತದಲ್ಲಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್​ 532 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಲ್ಲಿ ನಟಿಸಿದ ಎಲ್ಲರ ಖ್ಯಾತಿ ಹೆಚ್ಚಾಗಿದೆ. ‘ಪಠಾಣ್​’ ಬಳಿಕ ಶಾರುಖ್​ ಖಾನ್​ ಅವರಿಗೆ ಮತ್ತೊಂದು ಬಿಗ್​ ಸಕ್ಸಸ್​ ಸಿಕ್ಕಂತಾಗಿದೆ. ‘ಜವಾನ್​’ (Jawan) ಚಿತ್ರದಲ್ಲಿ ನಟಿಸಿದ ಬಳಿಕ ನಯನತಾರಾ ಅವರು ಹಿಂದಿ ಸಿನಿಪ್ರಿಯರ ವಲಯದಲ್ಲೂ ಫೇಮಸ್​ ಆಗಿದ್ದಾರೆ. ಹಾಗಿದ್ದರೂ ಕೂಡ ಅವರಿಗೆ ಒಂದು ಅಸಮಾಧಾನ ಇದೆ ಎಂಬ ಬಗ್ಗೆ ಇತ್ತೀಚೆಗೆ ವರದಿ ಆಗಿತ್ತು. ಅದಕ್ಕೆ ಸಾಕ್ಷಿ ನೀಡುವ ರೀತಿಯಲ್ಲಿ ಶಾರುಖ್​ ಖಾನ್​ (Shah Rukh Khan) ಕೂಡ ಪರೋಕ್ಷವಾಗಿ ಒಂದು ಪೋಸ್ಟ್​ ಮಾಡಿದ್ದಾರೆ. ಅದು ವೈರಲ್​ ಆಗುತ್ತಿದೆ.

ನಯನತಾರಾ ಅವರು ‘ಜವಾನ್​’ ಸಿನಿಮಾದಲ್ಲಿ ನರ್ಮದಾ ಎಂಬ ಪಾತ್ರ ಮಾಡಿದ್ದಾರೆ. ಆ ಪಾತ್ರಕ್ಕೆ ಹೆಚ್ಚು ಸ್ಕ್ರೀನ್​ ಸ್ಪೇ​ಸ್​ ಸಿಕ್ಕಿಲ್ಲ ಎಂಬ ಬೇಸರ ಅವರಿಗೆ ಇದೆ ಎಂದು ಗಾಸಿಪ್​ ಹಬ್ಬಿದೆ. ನಯನತಾರಾ ಅವರ ಪಾತ್ರದ ಬದಲು ದೀಪಿಕಾ ಪಡುಕೋಣೆ ನಿರ್ವಹಿಸಿದ ಪಾತ್ರವನ್ನು ಹೆಚ್ಚು ಹೈಲೈಟ್​ ಮಾಡಲಾಗಿದೆ ಎಂಬುದು ಅವರ ಬೇಸರಕ್ಕೆ ಕಾರಣ. ನರ್ಮದಾ ಎಂಬ ಪಾತ್ರಕ್ಕೆ ಸೂಕ್ತ ಪ್ರಮಾಣದ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂಬುದನ್ನು ಶಾರುಖ್​ ಖಾನ್​ ಕೂಡ ಒಪ್ಪಿಕೊಂಡಿದ್ದಾರೆ! ಆ ಮೂಲಕ ನಯನತಾರಾ ಅವರ ಮುನಿಸಿಗೆ ಶಾರುಖ್​ ಉತ್ತರ ನೀಡಿದಂತಾಗಿದೆ.

‘ಜವಾನ್​’ ಚಿತ್ರದ ಬಳಿಕ ನಯನತಾರಾಗೆ ಸಿಗುತ್ತಾ ಮತ್ತೊಂದು ಗೆಲುವು?

ನಯನತಾರಾ ಮಾಡಿದ ನರ್ಮದಾ ಎಂಬ ಪಾತ್ರದ ಬಗ್ಗೆ ಅಭಿಮಾನಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ‘ಒಂಟಿಯಾಗಿ ಮಗುವನ್ನು ಸಾಕುತ್ತಿರುವ ನರ್ಮದಾ ಎಂಬ ಮಹಿಳೆಯ ಪಾತ್ರ ತುಂಬ ಸೂಕ್ಷ್ಮವಾಗಿ ಮೂಡಿಬಂದಿದೆ. ಎಲ್ಲ ಕ್ಷೇತ್ರದ ಮಹಿಳೆಯರನ್ನು ಪ್ರತಿನಿಧಿಸುವಂತಹ ಪಾತ್ರಗಳನ್ನು ಸಿನಿಮಾದಲ್ಲಿ ತೋರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅಭಿಮಾನಿಯು ಪೋಸ್ಟ್​ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಶಾರುಖ್ ಖಾನ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

‘ಸಿಂಗಲ್​ ಮದರ್​ ಆಗಿ ನರ್ಮದಾ ಪಾತ್ರದ ಕಥೆ ನನಗೂ ಅದ್ಭುತ ಎನಿಸಿತು. ದುರಾದೃಷ್ಟ ಏನೆಂದರೆ, ಆ ಪಾತ್ರಕ್ಕೆ ಒಟ್ಟಾರೆಯಾಗಿ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಗಲಿಲ್ಲ. ಹಾಗಿದ್ದರೂ ಕೂಡ ಅದು ತುಂಬ ಚೆನ್ನಾಗಿ ಮೂಡಿಬಂದಿದೆ’ ಎಂದು ಶಾರುಖ್​ ಖಾನ್​ ಉತ್ತರ ನೀಡಿದ್ದಾರೆ. ಇದಕ್ಕೆ ನಯನತಾರಾ ಅವರು ಏನಾದರೂ ಪ್ರತಿಕ್ರಿಯೆ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕು. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಯನತಾರಾ ಭಾಗವಹಿಸಿಲ್ಲ. ಚಿತ್ರದ ಸಕ್ಸಸ್​ ಸೆಲೆಬ್ರೇಷನ್​ನಲ್ಲೂ ಅವರು ಕಾಣಿಸಿಕೊಳ್ಳಲಿಲ್ಲ. ‘ಜವಾನ್​’ ಗೆಲುವಿನ ಬಳಿಕ ಅವರ ಡಿಮ್ಯಾಂಡ್​ ಹೆಚ್ಚಾಗಿದ್ದು, ಹಲವು ಅವಕಾಶಗಳು ಹರಿದುಬರುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?