AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Armaan Kohli: ಡ್ರಗ್ಸ್​ ಕೇಸ್​ನಲ್ಲಿ ನಟ ಅರ್ಮಾನ್​ ಕೊಹ್ಲಿ ಬಂಧನ; ಮನೆಯಲ್ಲಿ ಮಾದಕ ವಸ್ತು​ ಪತ್ತೆ

Armaan Kohli arrest: ಡ್ರಗ್ಸ್​ ಕೇಸ್​ನಲ್ಲಿ ಕಿರುತೆರೆ ನಟ ಗೌರವ್​ ದೀಕ್ಷಿತ್ ಅವರನ್ನು ಶನಿವಾರ (ಆ.28) ಬಂಧಿಸಲಾಗಿತ್ತು. ಅದರ ಬೆನ್ನಲ್ಲೇ ಅರ್ಮಾನ್​ ಕೊಹ್ಲಿ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

Armaan Kohli: ಡ್ರಗ್ಸ್​ ಕೇಸ್​ನಲ್ಲಿ ನಟ ಅರ್ಮಾನ್​ ಕೊಹ್ಲಿ ಬಂಧನ; ಮನೆಯಲ್ಲಿ ಮಾದಕ ವಸ್ತು​ ಪತ್ತೆ
ಡ್ರಗ್ಸ್​ ಕೇಸ್​ನಲ್ಲಿ ನಟ ಅರ್ಮಾನ್​ ಕೊಹ್ಲಿ ಬಂಧನ
TV9 Web
| Edited By: |

Updated on: Aug 29, 2021 | 11:49 AM

Share

ಚಿತ್ರರಂಗಕ್ಕೆ ಅಂಟಿರುವ ಡ್ರಗ್ಸ್​​ (Drugs Case) ಜಾಲದ ನಂಟು ತುಂಬಾ ವಿಸ್ತಾರವಾಗಿದೆ. ತನಿಖೆ ಮಾಡಿದಂತೆಲ್ಲ ಇದರ ವ್ಯಾಪ್ತಿ ವಿಸ್ತಾರ ಆಗುತ್ತಲೇ ಇದೆ. ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಈಗಾಗಲೇ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳನ್ನು ಎನ್​ಸಿಬಿ (NCB) ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈಗ ನಟ ಅರ್ಮಾನ್​ ಕೊಹ್ಲಿ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅರ್ಮಾನ್​ ಕೊಹ್ಲಿ (Armaan Kohli) ಅವರನ್ನು ಬಂಧಿಸಲಾಗಿದೆ.

ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸುವ ಮೂಲಕ ಅರ್ಮಾನ್​ ಕೊಹ್ಲಿ ಫೇಮಸ್​ ಆಗಿದ್ದಾರೆ. ಮುಂಬೈನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಎನ್​ಸಿಬಿ ಅಧಿಕಾರಿಗಳು ಭೇದಿಸುತ್ತಿದ್ದಾರೆ. ಶನಿವಾರ (ಆ.28) ಅಜಯ್​ ರಾಜು ಸಿಂಗ್​ ಎಂಬ ಡ್ರಗ್​ ಪೆಡ್ಲರ್​ನನ್ನು ಬಂಧಿಸಲಾಗಿತ್ತು. ಅದರ ಬೆನ್ನಲ್ಲೇ ಅರ್ಮಾನ್​ ಕೊಹ್ಲಿ ಮನೆ ಮೇಲೆ ದಾಳಿ ಮಾಡಲಾಯಿತು. ಆಗ ಅನೇಕ ಮಾದಕ ವಸ್ತುಗಳು ಅವರ ಮನೆಯಲ್ಲಿ ಪತ್ತೆ ಆಗಿವೆ ಎನ್ನಲಾಗಿದೆ.

ಬಾಲಿವುಡ್​ ನಿರ್ದೇಶಕ ರಾಜ್​ಕುಮಾರ್​ ಕೊಹ್ಲಿ ಹಾಗೂ ನಟಿ ನಿಶಿ ಅವರ ಪುತ್ರ ಅರ್ಮಾನ್​ ಕೊಹ್ಲಿ. ಬಾಲನಟನಾಗಿಯೇ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. 1992ರಲ್ಲಿ ಅವರ ತಂದೆಯೇ ನಿರ್ದೇಶಿಸಿದ ‘ವಿರೋಧಿ’ ಸಿನಿಮಾ ಮೂಲಕ ಅವರು ಹೀರೋ ಆದರು. ನಂತರ ಅನೇಕ ಸಿನಿಮಾಗಳಲ್ಲಿ ಅವರು ನಾಯಕನಾಗಿ ನಟಿಸಿದರು. ಹಿಂದಿ ಬಿಗ್​ ಬಾಸ್​ ಸೀಸನ್​ 7ರಲ್ಲಿ ಅವರು ಸ್ಪರ್ಧಿಸಿದ್ದರು. 98 ದಿನಗಳ ಕಾಲ ಪೈಪೋಟಿ ನೀಡಿದ್ದರು. ಈಗ ಡ್ರಗ್ಸ್​ ಕೇಸ್​ನಲ್ಲಿ ಆರೋಪಿಯಾಗಿ ಪೊಲೀಸರ ಅತಿಥಿಯಾಗಿದ್ದಾರೆ.

ಇದೇ ಕೇಸ್​ನಲ್ಲಿ ಶನಿವಾರ (ಆ.28) ಕಿರುತೆರೆ ನಟ ಗೌರವ್​ ದೀಕ್ಷಿತ್ ಅವರನ್ನು ಬಂಧಿಸಲಾಗಿತ್ತು. ಇನ್ನೂ ಅನೇಕರು ಈ ಜಾಲದಲ್ಲಿ ತೊಡಗಿಕೊಂಡಿರುವ ಸಾಧ್ಯತೆ ಇದ್ದು, ಅವರೆಲ್ಲರಿಗೂ ಬಂಧನದ ಭೀತಿ ಎದುರಾಗಿದೆ. ಕನ್ನಡ, ತೆಲುಗು ಸೇರಿ ಎಲ್ಲ ಭಾಷೆಯ ಚಿತ್ರರಂಗದಲ್ಲೂ ಡ್ರಗ್ಸ್​ ವಾಸನೆ ಬಡಿಯುತ್ತಿದೆ. ಈ ದಂಧೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆಯಲ್ಲೂ ಸೆಲೆಬ್ರಿಟಿಗಳು ಭಾಗಿ ಆಗಿರುವ ಶಂಕೆ ಇದೆ. ಹಾಗಾಗಿ ಕೆಲವೇ ದಿನಗಳ ಹಿಂದೆ ಟಾಲಿವುಡ್​ನ ಅನೇಕ ಟಾಪ್​ ನಟ-ನಟಿಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿತ್ತು.

ಇದನ್ನೂ ಓದಿ:

ಡ್ರಗ್ಸ್​ ಕೇಸ್​: ರಾಣಾ ದಗ್ಗುಬಾಟಿ, ರಾಕುಲ್, ರವಿತೇಜ ಸೇರಿ ಟಾಲಿವುಡ್​ನ 8 ಸೆಲೆಬ್ರಿಟಿಗಳಿಗೆ ಇಡಿ ಸಮನ್ಸ್​

ವಿಡಿಯೋದಲ್ಲಿ ಅಪ್ಪನ ಜೊತೆಯೇ ಲೈಂಗಿಕತೆ, ಪ್ರೆಗ್ನೆನ್ಸಿ, ಡ್ರಗ್ಸ್​ ಬಗ್ಗೆ ಮಾತಾಡಿದ ಆಲಿಯಾಗೆ ನೆಟ್ಟಿಗರಿಂದ ಕೆಟ್ಟ ಕಮೆಂಟ್​

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’