AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ
ಶಾರುಖ್ ಖಾನ್
TV9 Web
| Edited By: |

Updated on: Oct 04, 2021 | 1:37 PM

Share

ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಎದುರಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿದ್ದು, ಈಗ ಕೋರ್ಟ್​ ಮುಂದೆ ಹಾಜರುಪಡಿಸಲಾಗುತ್ತಿದೆ. ಅವರಿಗೆ ಜೈಲೋ ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಈಗ ಆರ್ಯನ್​ನಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ. ಈ ಕಾರಣಕ್ಕೆ ಶಾರುಖ್​ ಖಾನ್​ ಮನೆಯ ಮೇಲೆ ಎನ್​ಸಿಬಿ ದಾಳಿ ಮಾಡಲಿದೆ ಎನ್ನುವ ವರದಿ ಬಿತ್ತರವಾಗಿತ್ತು. ಇದರಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮನೆಯ ಮೇಲೆ ದಾಳಿ ನಡೆದರೆ ಅದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಶಾರುಖ್​ ಮನೆಯ ಮೇಲೆ ದಾಳಿ ಮಾಡುವುದು ಅಷ್ಟು ಸುಲಭದ ಮಾತೂ ಅಲ್ಲ. ಈ ವಿಚಾರವಾಗಿ ಎನ್​ಸಿಬಿ ಅಧಿಕಾರಿಗಳು ಕೆಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಶಾರುಖ್​ ಮನೆಯ ಮೇಲೆ ದಾಳಿ ನಡೆಯಲಿದೆ ಎಂಬುದು ಸುಳ್ಳು. ಆ ರೀತಿಯ ಆಲೋಚನೆ ಇಲ್ಲ’ ಎಂದು ಎನ್​ಸಿಬಿ ಅಧಿಕಾರಿಗಳು ಹೇಳಿದ್ದಾರೆ ಎಂದು ವಾಹಿನಿಗಳು ವರದಿ ಮಾಡಿವೆ.

ಅದು 1997ರಲ್ಲಿ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಜೊತೆಯಾಗಿ ನೀಡಿದ್ದ ಸಂದರ್ಶನ ವೈರಲ್​ ಆಗಿದೆ. ಅದರಲ್ಲಿ ಅವರು ತಮ್ಮ ಪುತ್ರ ಆರ್ಯನ್​ ಖಾನ್​ ಬಗ್ಗೆ ಮಾತನಾಡಿದ್ದರು. ‘ಆರ್ಯನ್​ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್​ ಸೇವಿಸಬಹುದು ಮತ್ತು ಸೆ*ಕ್ಸ್​ ಕೂಡ ಮಾಡಬಹುದು. ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್​ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್​ ಎಂಜಾಯ್​ ಮಾಡಲಿ’ ಎಂದು ಶಾರುಖ್​ ಹೇಳಿದ್ದರು.

ಇದನ್ನೂ ಓದಿ: ‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ