AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ
ಶಾರುಖ್ ಖಾನ್
TV9 Web
| Edited By: |

Updated on: Oct 04, 2021 | 1:37 PM

Share

ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಎದುರಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿದ್ದು, ಈಗ ಕೋರ್ಟ್​ ಮುಂದೆ ಹಾಜರುಪಡಿಸಲಾಗುತ್ತಿದೆ. ಅವರಿಗೆ ಜೈಲೋ ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಈಗ ಆರ್ಯನ್​ನಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ. ಈ ಕಾರಣಕ್ಕೆ ಶಾರುಖ್​ ಖಾನ್​ ಮನೆಯ ಮೇಲೆ ಎನ್​ಸಿಬಿ ದಾಳಿ ಮಾಡಲಿದೆ ಎನ್ನುವ ವರದಿ ಬಿತ್ತರವಾಗಿತ್ತು. ಇದರಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮನೆಯ ಮೇಲೆ ದಾಳಿ ನಡೆದರೆ ಅದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಶಾರುಖ್​ ಮನೆಯ ಮೇಲೆ ದಾಳಿ ಮಾಡುವುದು ಅಷ್ಟು ಸುಲಭದ ಮಾತೂ ಅಲ್ಲ. ಈ ವಿಚಾರವಾಗಿ ಎನ್​ಸಿಬಿ ಅಧಿಕಾರಿಗಳು ಕೆಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಶಾರುಖ್​ ಮನೆಯ ಮೇಲೆ ದಾಳಿ ನಡೆಯಲಿದೆ ಎಂಬುದು ಸುಳ್ಳು. ಆ ರೀತಿಯ ಆಲೋಚನೆ ಇಲ್ಲ’ ಎಂದು ಎನ್​ಸಿಬಿ ಅಧಿಕಾರಿಗಳು ಹೇಳಿದ್ದಾರೆ ಎಂದು ವಾಹಿನಿಗಳು ವರದಿ ಮಾಡಿವೆ.

ಅದು 1997ರಲ್ಲಿ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಜೊತೆಯಾಗಿ ನೀಡಿದ್ದ ಸಂದರ್ಶನ ವೈರಲ್​ ಆಗಿದೆ. ಅದರಲ್ಲಿ ಅವರು ತಮ್ಮ ಪುತ್ರ ಆರ್ಯನ್​ ಖಾನ್​ ಬಗ್ಗೆ ಮಾತನಾಡಿದ್ದರು. ‘ಆರ್ಯನ್​ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್​ ಸೇವಿಸಬಹುದು ಮತ್ತು ಸೆ*ಕ್ಸ್​ ಕೂಡ ಮಾಡಬಹುದು. ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್​ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್​ ಎಂಜಾಯ್​ ಮಾಡಲಿ’ ಎಂದು ಶಾರುಖ್​ ಹೇಳಿದ್ದರು.

ಇದನ್ನೂ ಓದಿ: ‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!