AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ.

ಶಾರುಖ್​ ಖಾನ್​ ಮನೆಗೆ ಶೀಘ್ರವೇ ಎನ್​ಸಿಬಿ ಎಂಟ್ರಿ? ಅಧಿಕಾರಿಗಳಿಂದ ಸಿಕ್ತು ಸ್ಪಷ್ಟನೆ
ಶಾರುಖ್ ಖಾನ್
TV9 Web
| Edited By: |

Updated on: Oct 04, 2021 | 1:37 PM

Share

ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ಗೆ ಸಂಕಷ್ಟ ಎದುರಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರನ್ನು ಬಂಧಿಸಲಾಗಿದ್ದು, ಈಗ ಕೋರ್ಟ್​ ಮುಂದೆ ಹಾಜರುಪಡಿಸಲಾಗುತ್ತಿದೆ. ಅವರಿಗೆ ಜೈಲೋ ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ಈಗ ಆರ್ಯನ್​ನಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಗೋಚರವಾಗಿದೆ.

ಆರ್ಯನ್​ ಖಾನ್​ ಅವರು ಕಳೆದ ನಾಲ್ಕು ವರ್ಷಗಳಿಂದ ಡ್ರಗ್ಸ್​ ತೆಗೆದುಕೊಂಡಿದ್ದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರು ಮನೆಯಲ್ಲೂ ಡ್ರಗ್ಸ್​ ಸೇವಿಸುತ್ತಿದ್ದರು ಎನ್ನುವ ಅನುಮಾನ ಮೂಡಿದೆ. ಈ ಕಾರಣಕ್ಕೆ ಶಾರುಖ್​ ಖಾನ್​ ಮನೆಯ ಮೇಲೆ ಎನ್​ಸಿಬಿ ದಾಳಿ ಮಾಡಲಿದೆ ಎನ್ನುವ ವರದಿ ಬಿತ್ತರವಾಗಿತ್ತು. ಇದರಿಂದ ಶಾರುಖ್​ ಖಾನ್​ಗೂ ಸಂಕಷ್ಟ ಎದುರಾಗಲಿದೆ ಎನ್ನಲಾಗಿತ್ತು.

ಶಾರುಖ್​ ಖಾನ್​ ಮನೆಯ ಮೇಲೆ ದಾಳಿ ನಡೆದರೆ ಅದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇನ್ನು, ಶಾರುಖ್​ ಮನೆಯ ಮೇಲೆ ದಾಳಿ ಮಾಡುವುದು ಅಷ್ಟು ಸುಲಭದ ಮಾತೂ ಅಲ್ಲ. ಈ ವಿಚಾರವಾಗಿ ಎನ್​ಸಿಬಿ ಅಧಿಕಾರಿಗಳು ಕೆಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ‘ಶಾರುಖ್​ ಮನೆಯ ಮೇಲೆ ದಾಳಿ ನಡೆಯಲಿದೆ ಎಂಬುದು ಸುಳ್ಳು. ಆ ರೀತಿಯ ಆಲೋಚನೆ ಇಲ್ಲ’ ಎಂದು ಎನ್​ಸಿಬಿ ಅಧಿಕಾರಿಗಳು ಹೇಳಿದ್ದಾರೆ ಎಂದು ವಾಹಿನಿಗಳು ವರದಿ ಮಾಡಿವೆ.

ಅದು 1997ರಲ್ಲಿ ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಜೊತೆಯಾಗಿ ನೀಡಿದ್ದ ಸಂದರ್ಶನ ವೈರಲ್​ ಆಗಿದೆ. ಅದರಲ್ಲಿ ಅವರು ತಮ್ಮ ಪುತ್ರ ಆರ್ಯನ್​ ಖಾನ್​ ಬಗ್ಗೆ ಮಾತನಾಡಿದ್ದರು. ‘ಆರ್ಯನ್​ಗೆ ನಾನು ಹೇಳಿಬಿಟ್ಟಿದ್ದೇನೆ. ಅವನು ಹುಡುಗಿಯರ ಹಿಂದೆ ಹೋಗಬಹುದು. ಎಷ್ಟು ಬೇಕಾದರೂ ಸಿಗರೇಟ್ ಸೇದಬಹುದು. ಡ್ರಗ್ಸ್​ ಸೇವಿಸಬಹುದು ಮತ್ತು ಸೆ*ಕ್ಸ್​ ಕೂಡ ಮಾಡಬಹುದು. ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್​ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್​ ಎಂಜಾಯ್​ ಮಾಡಲಿ’ ಎಂದು ಶಾರುಖ್​ ಹೇಳಿದ್ದರು.

ಇದನ್ನೂ ಓದಿ: ‘ನಾನು​ 4ವರ್ಷಗಳಿಂದ ಡ್ರಗ್ಸ್​ ಸೇವಿಸುತ್ತಿದ್ದೇನೆ, ಅಪ್ಪ-ಅಮ್ಮಂಗೂ ಗೊತ್ತು‘; ಎನ್​ಸಿಬಿ ಎದುರು ಅಳುತ್ತ ಸತ್ಯ ಒಪ್ಪಿಕೊಂಡ ಶಾರುಖ್​ ಪುತ್ರ ಆರ್ಯನ್​ !

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ