AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್

Sameer Wankhede: ಶಾರುಖ್​ ಪುತ್ರ ಆರ್ಯನ್​ ಖಾನ್​ ಮತ್ತು ಅನನ್ಯಾ ಪಾಂಡೆ ಬಾಲ್ಯದ ಸ್ನೇಹಿತರು. ಡ್ರಗ್ಸ್​ ವಿಚಾರದಲ್ಲಿ ಇವರಿಬ್ಬರ​ ನಡುವೆ ಯಾವ ರೀತಿಯ ಸಂಪರ್ಕ ಇತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್
ಸಮೀರ್​ ವಾಂಖೆಡೆ, ಅನನ್ಯಾ ಪಾಂಡೆ
TV9 Web
| Edited By: |

Updated on: Oct 23, 2021 | 11:36 AM

Share

ಬಾಲಿವುಡ್​ನಲ್ಲಿ ಹರಡಿಕೊಂಡಿರುವ ಡ್ರಗ್ಸ್​ ಜಾಲವನ್ನು ಎನ್​ಸಿಬಿ ಅಧಿಕಾರಿಗಳು ಭೇದಿಸುತ್ತಿದ್ದಾರೆ. ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಆರ್ಯನ್​ ಖಾನ್​ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಇತರೆ ಸೆಲೆಬ್ರಿಟಿಗಳ ಹೆಸರು ಕೂಡ ಹೊರಬರುತ್ತಿದೆ. ಆ ಪೈಕಿ ನಟಿ ಅನನ್ಯಾ ಪಾಂಡೆಗೆ ಎನ್​ಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಅವರ ಮನೆ ಮೇಲೆ ದಾಳಿ ಮಾಡಿದ ಬಳಿಕ ಎನ್​ಬಿಸಿ ಕಚೇರಿಗೆ ಬಂದು ಹಾಜರಾಗುವಂತೆ ನೋಟೀಸ್​ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ವಿಚಾರಣೆಗೆ ಬಾರದ ಅನನ್ಯಾ ಅವರು ಅಧಿಕಾರಿಗಳ ಕೋಪಕ್ಕೆ ಕಾರಣ ಆಗಿದ್ದಾರೆ.

ಮುಂಬೈನ ಎನ್​ಸಿಬಿ ಕಚೇರಿಗೆ ಶುಕ್ರವಾರ (ಅ.22) ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಅನನ್ಯಾಗೆ ಸೂಚಿಸಲಾಗಿತ್ತು. ಆದರೆ ಅವರು ಬಂದಿದ್ದು ಬರೋಬ್ಬರಿ 3 ಗಂಟೆ ತಡವಾಗಿ! ಇದರಿಂದ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅಸಮಾಧಾನಗೊಂಡರು. ಸಮಯ ಪಾಲನೆ ಮಾಡದೇ ಇರುವ ನಟಿಯ ವಿರುದ್ಧ ಅವರು ಗರಂ ಆದರು ಎನ್ನುತ್ತಿವೆ ಮೂಲಗಳು.

ಸಮಯ ಪ್ರಜ್ಞೆ ಇಲ್ಲದೇ ತಡವಾಗಿ ಬಂದು ವಿಚಾರಣೆಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡದಿರುವ ಅನನ್ಯಾ ಪಾಂಡೆ ವರ್ತನೆಗೆ ಸಮೀರ್​ ವಾಂಖೆಡೆ ಕೋಪ ಮಾಡಿಕೊಂಡಿದ್ದಾರೆ. ‘ಮನಸ್ಸಿಗೆ ಬಂದ ಸಮಯದಲ್ಲಿ ಆಗಮಿಸಲು ಇದು ಸಿನಿಮಾ ಪ್ರೊಡಕ್ಷನ್​ ಹೌಸ್​ ಅಲ್ಲ. ಇದು ಕೇಂದ್ರದ ತನಿಖಾ ಸಂಸ್ಥೆ. ಇನ್ಮೇಲೆ ಸರಿಯಾದ ಸಮಯಕ್ಕೆ ವಿಚಾರಣೆಗೆ ಹಾಜರಾಗಬೇಕು’ ಎಂದು ಅನನ್ಯಾ ಪಾಂಡೆಗೆ ಸಮೀರ್ ವಾಂಖೆಡೆ ಕ್ಲಾಸ್​ ತೆಗೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ನಾಲ್ಕು ಗಂಟೆಗಳ ಕಾಲ ಅನನ್ಯಾಗೆ ಎನ್​ಸಿಬಿ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್ಯನ್​ ಖಾನ್​ ಜೊತೆ ಅವರು ಮಾಡಿದ್ದಾರೆ ಎನ್ನಲಾದ ವಾಟ್ಸಾಪ್​ ಚಾಟ್​ಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಅವರ ಮೊಬೈಲ್​ ಫೋನ್​ ಮತ್ತು ಲ್ಯಾಪ್​ಟಾಪ್​ ವಶಪಡಿಸಿಕೊಳ್ಳಲಾಗಿದೆ. ಒಂದು ವೇಳೆ ಅನನ್ಯಾ ಪಾಂಡೆ ಮಾದಕವಸ್ತು ಸೇವಿಸಿರುವುದಕ್ಕೆ ಅಥವಾ ಪೂರೈಕೆ ಮಾಡಿರುವುದಕ್ಕೆ ಸಾಕ್ಷಿಗಳು ಸಿಕ್ಕರೆ ಅವರನ್ನು ಬಂಧಿಸುವ ಸಾಧ್ಯತೆ ಕೂಡ ದಟ್ಟವಾಗಿದೆ. ಇದು ಅವರಿಗೆ ತಲೆನೋವಾಗಿ ಪರಿಣಮಿಸಿದೆ.

ಶಾರುಖ್​ ಪುತ್ರ ಆರ್ಯನ್​ ಖಾನ್​ ಮತ್ತು ಅನನ್ಯಾ ಪಾಂಡೆ ಬಾಲ್ಯದ ಸ್ನೇಹಿತರು. ಇಬ್ಬರ ಕುಟುಂಬದವರ ನಡುವೆ ಒಳ್ಳೆಯ ಒಡನಾಟ ಇದೆ. ಡ್ರಗ್ಸ್​ ವಿಚಾರದಲ್ಲಿ ಅನನ್ಯಾ ಮತ್ತು ಆರ್ಯನ್​ ನಡುವೆ ಯಾವ ರೀತಿಯ ಸಂಪರ್ಕ ಇತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ