AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್

Sameer Wankhede: ಶಾರುಖ್​ ಪುತ್ರ ಆರ್ಯನ್​ ಖಾನ್​ ಮತ್ತು ಅನನ್ಯಾ ಪಾಂಡೆ ಬಾಲ್ಯದ ಸ್ನೇಹಿತರು. ಡ್ರಗ್ಸ್​ ವಿಚಾರದಲ್ಲಿ ಇವರಿಬ್ಬರ​ ನಡುವೆ ಯಾವ ರೀತಿಯ ಸಂಪರ್ಕ ಇತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

Ananya Panday: ‘ಇದು ಫಿಲ್ಮ್​ ಪ್ರೊಡಕ್ಷನ್​ ಹೌಸ್​ ಅಲ್ಲ’: ವಿಚಾರಣೆಗೆ ತಡವಾಗಿ ಬಂದ ಅನನ್ಯಾಗೆ ಸಮೀರ್​ ವಾಂಖೆಡೆ ಕ್ಲಾಸ್
ಸಮೀರ್​ ವಾಂಖೆಡೆ, ಅನನ್ಯಾ ಪಾಂಡೆ
TV9 Web
| Edited By: |

Updated on: Oct 23, 2021 | 11:36 AM

Share

ಬಾಲಿವುಡ್​ನಲ್ಲಿ ಹರಡಿಕೊಂಡಿರುವ ಡ್ರಗ್ಸ್​ ಜಾಲವನ್ನು ಎನ್​ಸಿಬಿ ಅಧಿಕಾರಿಗಳು ಭೇದಿಸುತ್ತಿದ್ದಾರೆ. ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಆರ್ಯನ್​ ಖಾನ್​ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಇತರೆ ಸೆಲೆಬ್ರಿಟಿಗಳ ಹೆಸರು ಕೂಡ ಹೊರಬರುತ್ತಿದೆ. ಆ ಪೈಕಿ ನಟಿ ಅನನ್ಯಾ ಪಾಂಡೆಗೆ ಎನ್​ಸಿಬಿ ಅಧಿಕಾರಿಗಳು ಬಲೆ ಬೀಸಿದ್ದಾರೆ. ಅವರ ಮನೆ ಮೇಲೆ ದಾಳಿ ಮಾಡಿದ ಬಳಿಕ ಎನ್​ಬಿಸಿ ಕಚೇರಿಗೆ ಬಂದು ಹಾಜರಾಗುವಂತೆ ನೋಟೀಸ್​ ನೀಡಲಾಗಿತ್ತು. ಆದರೆ ಸರಿಯಾದ ಸಮಯಕ್ಕೆ ವಿಚಾರಣೆಗೆ ಬಾರದ ಅನನ್ಯಾ ಅವರು ಅಧಿಕಾರಿಗಳ ಕೋಪಕ್ಕೆ ಕಾರಣ ಆಗಿದ್ದಾರೆ.

ಮುಂಬೈನ ಎನ್​ಸಿಬಿ ಕಚೇರಿಗೆ ಶುಕ್ರವಾರ (ಅ.22) ಬೆಳಗ್ಗೆ 11 ಗಂಟೆಗೆ ಹಾಜರಾಗುವಂತೆ ಅನನ್ಯಾಗೆ ಸೂಚಿಸಲಾಗಿತ್ತು. ಆದರೆ ಅವರು ಬಂದಿದ್ದು ಬರೋಬ್ಬರಿ 3 ಗಂಟೆ ತಡವಾಗಿ! ಇದರಿಂದ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅಸಮಾಧಾನಗೊಂಡರು. ಸಮಯ ಪಾಲನೆ ಮಾಡದೇ ಇರುವ ನಟಿಯ ವಿರುದ್ಧ ಅವರು ಗರಂ ಆದರು ಎನ್ನುತ್ತಿವೆ ಮೂಲಗಳು.

ಸಮಯ ಪ್ರಜ್ಞೆ ಇಲ್ಲದೇ ತಡವಾಗಿ ಬಂದು ವಿಚಾರಣೆಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡದಿರುವ ಅನನ್ಯಾ ಪಾಂಡೆ ವರ್ತನೆಗೆ ಸಮೀರ್​ ವಾಂಖೆಡೆ ಕೋಪ ಮಾಡಿಕೊಂಡಿದ್ದಾರೆ. ‘ಮನಸ್ಸಿಗೆ ಬಂದ ಸಮಯದಲ್ಲಿ ಆಗಮಿಸಲು ಇದು ಸಿನಿಮಾ ಪ್ರೊಡಕ್ಷನ್​ ಹೌಸ್​ ಅಲ್ಲ. ಇದು ಕೇಂದ್ರದ ತನಿಖಾ ಸಂಸ್ಥೆ. ಇನ್ಮೇಲೆ ಸರಿಯಾದ ಸಮಯಕ್ಕೆ ವಿಚಾರಣೆಗೆ ಹಾಜರಾಗಬೇಕು’ ಎಂದು ಅನನ್ಯಾ ಪಾಂಡೆಗೆ ಸಮೀರ್ ವಾಂಖೆಡೆ ಕ್ಲಾಸ್​ ತೆಗೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ನಾಲ್ಕು ಗಂಟೆಗಳ ಕಾಲ ಅನನ್ಯಾಗೆ ಎನ್​ಸಿಬಿ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಆರ್ಯನ್​ ಖಾನ್​ ಜೊತೆ ಅವರು ಮಾಡಿದ್ದಾರೆ ಎನ್ನಲಾದ ವಾಟ್ಸಾಪ್​ ಚಾಟ್​ಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಅವರ ಮೊಬೈಲ್​ ಫೋನ್​ ಮತ್ತು ಲ್ಯಾಪ್​ಟಾಪ್​ ವಶಪಡಿಸಿಕೊಳ್ಳಲಾಗಿದೆ. ಒಂದು ವೇಳೆ ಅನನ್ಯಾ ಪಾಂಡೆ ಮಾದಕವಸ್ತು ಸೇವಿಸಿರುವುದಕ್ಕೆ ಅಥವಾ ಪೂರೈಕೆ ಮಾಡಿರುವುದಕ್ಕೆ ಸಾಕ್ಷಿಗಳು ಸಿಕ್ಕರೆ ಅವರನ್ನು ಬಂಧಿಸುವ ಸಾಧ್ಯತೆ ಕೂಡ ದಟ್ಟವಾಗಿದೆ. ಇದು ಅವರಿಗೆ ತಲೆನೋವಾಗಿ ಪರಿಣಮಿಸಿದೆ.

ಶಾರುಖ್​ ಪುತ್ರ ಆರ್ಯನ್​ ಖಾನ್​ ಮತ್ತು ಅನನ್ಯಾ ಪಾಂಡೆ ಬಾಲ್ಯದ ಸ್ನೇಹಿತರು. ಇಬ್ಬರ ಕುಟುಂಬದವರ ನಡುವೆ ಒಳ್ಳೆಯ ಒಡನಾಟ ಇದೆ. ಡ್ರಗ್ಸ್​ ವಿಚಾರದಲ್ಲಿ ಅನನ್ಯಾ ಮತ್ತು ಆರ್ಯನ್​ ನಡುವೆ ಯಾವ ರೀತಿಯ ಸಂಪರ್ಕ ಇತ್ತು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ:

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?