AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನದ ಭೀತಿಯಲ್ಲಿ ಸಮೀರ್​ ವಾಂಖೆಡೆ; ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ ಎನ್​ಸಿಬಿ ಅಧಿಕಾರಿಗೆ ಹಿನ್ನೆಡೆ

ತಮ್ಮ ವಿರುದ್ಧ ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯನ್ನು ಪ್ರಶ್ನಿಸಿ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಕೋರ್ಟ್​ ಮೆಟ್ಟಿಲು ಏರಿದ್ದಾರೆ. ‘ಮುಂಬೈ ಪೊಲೀಸರು ನನ್ನನ್ನು ಬಂಧಿಸಬಹುದು ಎಂಬ ಆತಂಕ ಎದುರಾಗಿದೆ’ ಎಂದು ಅವರು ಹೇಳಿದ್ದಾರೆ.

ಬಂಧನದ ಭೀತಿಯಲ್ಲಿ ಸಮೀರ್​ ವಾಂಖೆಡೆ; ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ ಎನ್​ಸಿಬಿ ಅಧಿಕಾರಿಗೆ ಹಿನ್ನೆಡೆ
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on:Oct 28, 2021 | 4:53 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಸ್ಟಾರ್​ ಪುತ್ರನ ಬಂಧನದ ಹಿಂದೆ ಸುಲಿಗೆ ಪ್ಲ್ಯಾನ್​ ಮಾಡಲಾಗಿತ್ತು ಎಂಬ ಆರೋಪ ಎದುರಾದ ಬೆನ್ನಲ್ಲೇ ಸಮೀರ್​ ವಾಂಖೆಡೆ ಅವರಿಗೆ ಬಂಧನ ಭೀತಿ ಶುರುವಾಗಿದೆ. ಆರೋಪಕ್ಕೆ ಸಂಬಂಧ ಪಟ್ಟಂತೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ ನೇಮಿಸಿದೆ. ಮುಂಬೈ ಪೊಲೀಸರು ಸಮೀರ್​ ವಾಂಖೆಡೆ ಅವರನ್ನು ವಿಚಾರಣೆಗೆ ಒಳಪಡಿಸಲು ಸಜ್ಜಾಗಿದ್ದಾರೆ. ಆದರೆ ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ನಲ್ಲಿ ವಾಂಖೆಡೆ ಅರ್ಜಿ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಆದೇಶಿಸಿರುವ ತನಿಖೆಯನ್ನು ಪ್ರಶ್ನಿಸಿ ಸಮೀರ್​ ವಾಂಖೆಡೆ ಕೋರ್ಟ್​ ಮೆಟ್ಟಿಲು ಏರಿದ್ದಾರೆ. ‘ಮುಂಬೈ ಪೊಲೀಸರು ನನ್ನನ್ನು ಬಂಧಿಸಬಹುದು ಎಂಬ ಆತಂಕ ಎದುರಾಗಿದೆ. ನನ್ನನ್ನು ವೈಯಕ್ತಿಯವಾಗಿ ಟಾರ್ಗೆಟ್​ ಮಾಡಲಾಗಿದೆ. ಬಂಧನ ಆಗದಂತೆ ತಡೆ ನೀಡಬೇಕು’ ಎಂದು ಹೇಳಿರುವ ಸಮೀರ್​ ವಾಂಖೆಡೆ ಅವರು ಗುರುವಾರ (ಅ.28) ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲ ಆರೋಪಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಒಳಗಾಗಲು ತಾವು ಸಿದ್ಧ ಎಂದು ಅವರು ಹೇಳಿದ್ದಾರೆ.

ಸಮೀರ್​ ವಾಂಖೆಡೆ ಅವರ ಈ ಮನವಿಯನ್ನು ಕೋರ್ಟ್​ ತಿರಸ್ಕರಿಸಿದೆ. ತನಿಖೆಯನ್ನು ಕೈಬಿಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಒಂದು ವೇಳೆ ಭ್ರಷ್ಟಚಾರ ಆರೋಪದ ಮೇಲೆ ಕೇಸ್​ ದಾಖಲಿಸಿ ಸಮೀರ್​ ವಾಂಖೆಡೆ ಅವರನ್ನು ಬಂಧಿಸುವುದಾದರೆ ಮೂರು ದಿನ ಮುಂಚಿತವಾಗಿ ನೋಟಿಸ್​ ನೀಡಲಾಗುವುದು ಎಂದು ಮುಂಬೈ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಸಮೀರ್​ ವಾಂಖೆಡೆ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಆರ್ಯನ್​ ಖಾನ್​ ಭಾಗಿಯಾಗಿದ್ದರು ಎನ್ನಲಾದ ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಎನ್​ಸಿಬಿ ಅಧಿಕಾರಿಗಳ ಜೊತೆ ಖಾಸಗಿ ಡಿಟೆಕ್ಟೀವ್​ ಕಿರಣ್​ ಗೋಸಾವಿ ಮತ್ತು ಅವರ ಬಾಡಿಗಾರ್ಡ್​ ಪ್ರಭಾಕರ್​ ಸೈಲ್​ ಕೂಡ ಹಾಜರಿದ್ದರು. ಇವರಿಬ್ಬರು ಪ್ರಮುಖ ಸಾಕ್ಷಿಗಳಾಗಿದ್ದಾರೆ. ಆದರೆ ದಾಳಿ ಬಳಿಕ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಈಗ ಅವರು ಪುಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡರು ಮತ್ತು ಬಹುಕೋಟಿ ಡೀಲ್​ ಬಗ್ಗೆ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ ಎಂದು ಪ್ರಭಾಕರ್​ ಸೈಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದರ ಜೊತೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಕೂಡ ಸಮೀರ್​ ವಾಂಖೆಡೆ ವಿರುದ್ಧ ಅನೇಕ ಆರೋಪಗಳನ್ನು ಹೊರಿಸಿದ್ದಾರೆ. ಇವುಗಳ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರವು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ.

ಇದನ್ನೂ ಓದಿ:

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

Published On - 3:44 pm, Thu, 28 October 21

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!