AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ಗಂಭೀರ ಆರೋಪ ಮಾಡಿದ್ದಾರೆ.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ
ನವಾಬ್ ಮಲಿಕ್, ಯಾಸ್ಮಿನ್ ವಾಂಖೆಡೆ
TV9 Web
| Edited By: |

Updated on: Oct 28, 2021 | 10:23 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಅವರ ಮೇಲೆ ಹಲವು ಅರೋಪಗಳನ್ನೂ ಹೊರಿಸಲಾಗಿದೆ. ಈ ಡ್ರಗ್ಸ್​ ಪ್ರಕರಣದ ತನಿಖೆ ಪಾರದರ್ಶಕವಾಗಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ, ಇದರ ಹಿಂದೆ ಯಾರದ್ದೋ ಪಿತೂರಿ ಇದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಟೀಕೆಗಳ ನಡುವೆ ಸಮೀರ್​ ವಾಂಖೆಡೆ ಅವರ ಫ್ಯಾಮಿಲಿ ವಿಚಾರವನ್ನೂ ಎಳೆದು ತರಲಾಗುತ್ತಿದೆ. ಅದು ಅತಿರೇಕಕ್ಕೆ ಕೂಡ ಹೋಗಿದೆ. ಈಗ ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ಅವರು ಸಮೀರ್​ ವಾಂಖೆಡೆಯ ಸಹೋದರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ವಾಂಖೆಡೆ ಅವರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ನವಾಬ್​ ಮಲಿಕ್​ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಮ್ಮ ಖಾಸಗಿ ಫೋಟೋಗಳನ್ನು ಲೀಕ್​ ಮಾಡುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ ಎಂದು ಯಾಸ್ಮಿನ್​ ವಾಂಖೆಡೆ ಅವರು ಈ ಪತ್ರದಲ್ಲಿ ತಿಳಿಸಿದ್ದಾರೆ.

‘ನನ್ನ ಮೇಲೆ ನವಾಬ್​ ಮಲಿಕ್​ ಅವರು ಆಧಾರವಿಲ್ಲದ ಅನೇಕ ಆರೋಪಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ನನ್ನ ಸಹೋದರ ಸಮೀರ್​ ವಾಂಖೆಡೆಗೆ ತೊಂದರೆ ನೀಡಲು ಈ ರೀತಿ ಮಾಡಲಾಗಿದೆ. ಆನ್​ಲೈನ್​ನಲ್ಲಿ ನನ್ನ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ನನ್ನ ಖಾಸಗಿ ಫೋಟೋಗಳನ್ನು ಮಾಧ್ಯಮಗಳಲ್ಲಿ ಲೀಕ್​ ಮಾಡಿಸುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮಹಿಳಾ ಆಯೋಗಕ್ಕೆ ಯಾಸ್ಮಿನ್​​ ಪತ್ರ ಬರೆದಿದ್ದಾರೆ.

ಸಮೀರ್​ ವಾಂಖೆಡೆ ಮತ್ತು ಅವರ ಕುಟುಂಬದವರ ಮೇಲೆ ಈ ರೀತಿ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಅದನ್ನು ಅವರು ಖಂಡಿಸಿದ್ದಾರೆ.

ಇದನ್ನೂ ಓದಿ:

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ