AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ಗಂಭೀರ ಆರೋಪ ಮಾಡಿದ್ದಾರೆ.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ
ನವಾಬ್ ಮಲಿಕ್, ಯಾಸ್ಮಿನ್ ವಾಂಖೆಡೆ
TV9 Web
| Edited By: |

Updated on: Oct 28, 2021 | 10:23 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಅವರ ಮೇಲೆ ಹಲವು ಅರೋಪಗಳನ್ನೂ ಹೊರಿಸಲಾಗಿದೆ. ಈ ಡ್ರಗ್ಸ್​ ಪ್ರಕರಣದ ತನಿಖೆ ಪಾರದರ್ಶಕವಾಗಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ, ಇದರ ಹಿಂದೆ ಯಾರದ್ದೋ ಪಿತೂರಿ ಇದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಟೀಕೆಗಳ ನಡುವೆ ಸಮೀರ್​ ವಾಂಖೆಡೆ ಅವರ ಫ್ಯಾಮಿಲಿ ವಿಚಾರವನ್ನೂ ಎಳೆದು ತರಲಾಗುತ್ತಿದೆ. ಅದು ಅತಿರೇಕಕ್ಕೆ ಕೂಡ ಹೋಗಿದೆ. ಈಗ ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ಅವರು ಸಮೀರ್​ ವಾಂಖೆಡೆಯ ಸಹೋದರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ವಾಂಖೆಡೆ ಅವರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ನವಾಬ್​ ಮಲಿಕ್​ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಮ್ಮ ಖಾಸಗಿ ಫೋಟೋಗಳನ್ನು ಲೀಕ್​ ಮಾಡುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ ಎಂದು ಯಾಸ್ಮಿನ್​ ವಾಂಖೆಡೆ ಅವರು ಈ ಪತ್ರದಲ್ಲಿ ತಿಳಿಸಿದ್ದಾರೆ.

‘ನನ್ನ ಮೇಲೆ ನವಾಬ್​ ಮಲಿಕ್​ ಅವರು ಆಧಾರವಿಲ್ಲದ ಅನೇಕ ಆರೋಪಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ನನ್ನ ಸಹೋದರ ಸಮೀರ್​ ವಾಂಖೆಡೆಗೆ ತೊಂದರೆ ನೀಡಲು ಈ ರೀತಿ ಮಾಡಲಾಗಿದೆ. ಆನ್​ಲೈನ್​ನಲ್ಲಿ ನನ್ನ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ನನ್ನ ಖಾಸಗಿ ಫೋಟೋಗಳನ್ನು ಮಾಧ್ಯಮಗಳಲ್ಲಿ ಲೀಕ್​ ಮಾಡಿಸುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮಹಿಳಾ ಆಯೋಗಕ್ಕೆ ಯಾಸ್ಮಿನ್​​ ಪತ್ರ ಬರೆದಿದ್ದಾರೆ.

ಸಮೀರ್​ ವಾಂಖೆಡೆ ಮತ್ತು ಅವರ ಕುಟುಂಬದವರ ಮೇಲೆ ಈ ರೀತಿ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಅದನ್ನು ಅವರು ಖಂಡಿಸಿದ್ದಾರೆ.

ಇದನ್ನೂ ಓದಿ:

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ