AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ಗಂಭೀರ ಆರೋಪ ಮಾಡಿದ್ದಾರೆ.

ಸಮೀರ್​ ವಾಂಖೆಡೆ ಸಹೋದರಿಯ ಖಾಸಗಿ ಫೋಟೋ ಲೀಕ್​ ಮಾಡುವುದಾಗಿ ಬೆದರಿಕೆ; ನವಾಬ್​ ಮಲಿಕ್​ ಮೇಲೆ ಆರೋಪ
ನವಾಬ್ ಮಲಿಕ್, ಯಾಸ್ಮಿನ್ ವಾಂಖೆಡೆ
TV9 Web
| Edited By: |

Updated on: Oct 28, 2021 | 10:23 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಅವರ ಮೇಲೆ ಹಲವು ಅರೋಪಗಳನ್ನೂ ಹೊರಿಸಲಾಗಿದೆ. ಈ ಡ್ರಗ್ಸ್​ ಪ್ರಕರಣದ ತನಿಖೆ ಪಾರದರ್ಶಕವಾಗಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ, ಇದರ ಹಿಂದೆ ಯಾರದ್ದೋ ಪಿತೂರಿ ಇದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಟೀಕೆಗಳ ನಡುವೆ ಸಮೀರ್​ ವಾಂಖೆಡೆ ಅವರ ಫ್ಯಾಮಿಲಿ ವಿಚಾರವನ್ನೂ ಎಳೆದು ತರಲಾಗುತ್ತಿದೆ. ಅದು ಅತಿರೇಕಕ್ಕೆ ಕೂಡ ಹೋಗಿದೆ. ಈಗ ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ಅವರು ಸಮೀರ್​ ವಾಂಖೆಡೆಯ ಸಹೋದರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಮೀರ್​ ವಾಂಖೆಡೆಯ ಕಾರ್ಯವೈಖರಿಯನ್ನು ನವಾಬ್​ ಮಲಿಕ್​ ಮೊದಲಿನಿಂದಲೂ ಟೀಕಿಸುತ್ತಲೇ ಬಂದಿದ್ದಾರೆ. ಆದರೆ ಅವರು ಈಗ ಕೀಳುಮಟ್ಟದಲ್ಲಿ ದಾಳಿಗೆ ಇಳಿದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಮೀರ್​ ವಾಂಖೆಡೆ ಸಹೋದರಿ ಯಾಸ್ಮಿನ್​ ವಾಂಖೆಡೆ ಅವರು ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದು, ನವಾಬ್​ ಮಲಿಕ್​ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ತಮ್ಮ ಖಾಸಗಿ ಫೋಟೋಗಳನ್ನು ಲೀಕ್​ ಮಾಡುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ ಎಂದು ಯಾಸ್ಮಿನ್​ ವಾಂಖೆಡೆ ಅವರು ಈ ಪತ್ರದಲ್ಲಿ ತಿಳಿಸಿದ್ದಾರೆ.

‘ನನ್ನ ಮೇಲೆ ನವಾಬ್​ ಮಲಿಕ್​ ಅವರು ಆಧಾರವಿಲ್ಲದ ಅನೇಕ ಆರೋಪಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ನನ್ನ ಸಹೋದರ ಸಮೀರ್​ ವಾಂಖೆಡೆಗೆ ತೊಂದರೆ ನೀಡಲು ಈ ರೀತಿ ಮಾಡಲಾಗಿದೆ. ಆನ್​ಲೈನ್​ನಲ್ಲಿ ನನ್ನ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ನನ್ನ ಖಾಸಗಿ ಫೋಟೋಗಳನ್ನು ಮಾಧ್ಯಮಗಳಲ್ಲಿ ಲೀಕ್​ ಮಾಡಿಸುವುದಾಗಿ ನವಾಬ್​ ಮಲಿಕ್​ ಬೆದರಿಕೆ ಹಾಕಿದ್ದಾರೆ. ಇವರ ವಿರುದ್ಧ ದಯವಿಟ್ಟು ಕ್ರಮ ಕೈಗೊಳ್ಳಿ’ ಎಂದು ಮಹಿಳಾ ಆಯೋಗಕ್ಕೆ ಯಾಸ್ಮಿನ್​​ ಪತ್ರ ಬರೆದಿದ್ದಾರೆ.

ಸಮೀರ್​ ವಾಂಖೆಡೆ ಮತ್ತು ಅವರ ಕುಟುಂಬದವರ ಮೇಲೆ ಈ ರೀತಿ ವೈಯಕ್ತಿಕವಾಗಿ ದಾಳಿ ಮಾಡಲಾಗುತ್ತಿದೆ. ಅದನ್ನು ಅವರು ಖಂಡಿಸಿದ್ದಾರೆ.

ಇದನ್ನೂ ಓದಿ:

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು