Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ

NCB Raids Ananya Pandey: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಯೇ? ಇಲ್ಲಿದೆ ಅಸಲಿ ಮಾಹಿತಿ.

Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ
ಶಾರುಖ್ ಖಾನ್
Follow us
| Updated By: shivaprasad.hs

Updated on:Oct 21, 2021 | 2:49 PM

ಮುಂಬೈ: ಮುಂಬೈನಲ್ಲಿ ಬಾಲಿವುಡ್​ ನಟ, ನಟಿಯರ ಮನೆಗಳ ಮೇಲೆ ಎನ್​ಸಿಬಿ ದಾಳಿ ನಡೆಸಿದೆ. ಅದರಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್​ ಖಾನ್ ನಿವಾಸ ‘ಮನ್ನತ್’ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್​ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದೂ ಇದೇ ವೇಳೆ ಹೇಳಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ, ಶಾರುಖ್ ಮನೆಗೆ ಎನ್​ಸಿಬಿ ಅಧಿಕಾರಿಗಳು ಪೇಪರ್​ ವರ್ಕ್​ ಕೆಲಸಕ್ಕಾಗಿ ತೆರಳಿದ್ದರು. ಎನ್​ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಗೆ ತೆರಳಿತ್ತು. ಇದೇ ವೇಳೆ ಎನ್​ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

‘ಮನ್ನತ್​’ಗೆ ತೆರಳುತ್ತಿರುವ ಎನ್​ಸಿಬಿ ಅಧಿಕಾರಿಗಳು:

ನಟಿ ಅನನ್ಯಾ ಪಾಂಡೆ ಮನೆಗೆ ಎನ್​ಸಿಬಿ ಅಧಿಕಾರಿಗಳು ತೆರಳುತ್ತಿರುವ ದೃಶ್ಯ:

ಇಂದು ಮುಂಜಾನೆ ನಟ ಶಾರುಖ್ ಆರ್ಥರ್ ರೋಡ್ ಜೈಲಿಗೆ ತೆರಳಿ ಆರ್ಯನ್​ರನ್ನು ಭೇಟಿಯಾಗಿದ್ದರು. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್​ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಶಾರುಖ್ ಮನೆಯಲ್ಲಿ ಶೋಧ ನಡೆದಿಲ್ಲ: ಮೂಲಗಳ ಮಾಹಿತಿ

ಶಾರುಖ್ ಖಾನ್ ಮನೆಯಲ್ಲಿ ಎನ್‌ಸಿಬಿ ಶೋಧ ಮಾಡಿಲ್ಲ ಹಾಗೂ ಶಾರುಖ್ ಖಾನ್‌ಗೆ ಯಾವುದೇ ಸಮನ್ಸ್ ಕೂಡ ನೀಡಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ. ಕೇವಲ ಪೇಪರ್ ವರ್ಕ್‌ಗಾಗಿ ಶಾರುಖ್ ಮನೆಗೆ ಭೇಟಿ ನೀಡಿ, ಎನ್​ಸಿಬಿ ಅಧಿಕಾರಿಗಳು ವಾಪಸ್ಸಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

Published On - 12:46 pm, Thu, 21 October 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ