AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ

NCB Raids Ananya Pandey: ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಯೇ? ಇಲ್ಲಿದೆ ಅಸಲಿ ಮಾಹಿತಿ.

Shah Rukh Khan: ಬಾಲಿವುಡ್​ ನಟ ಶಾರುಖ್​ ಖಾನ್, ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ NCB ದಾಳಿ?; ಇಲ್ಲಿದೆ ಅಸಲಿ ಮಾಹಿತಿ
ಶಾರುಖ್ ಖಾನ್
TV9 Web
| Edited By: |

Updated on:Oct 21, 2021 | 2:49 PM

Share

ಮುಂಬೈ: ಮುಂಬೈನಲ್ಲಿ ಬಾಲಿವುಡ್​ ನಟ, ನಟಿಯರ ಮನೆಗಳ ಮೇಲೆ ಎನ್​ಸಿಬಿ ದಾಳಿ ನಡೆಸಿದೆ. ಅದರಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಟ ಶಾರುಖ್​ ಖಾನ್ ನಿವಾಸ ‘ಮನ್ನತ್’ಗೆ ತೆರಳಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ವರದಿಯಾಗಿತ್ತು. ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿರುವ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್​ಸಿಬಿ ಅಧಿಕಾರಿಗಳು ತನಿಖೆಗಾಗಿ ಶೋಧ ನಡೆಸಲು ಶಾರುಖ್ ನಿವಾಸಕ್ಕೆ ತೆರಳಿದ್ದಾರೆ ಎಂದೂ ಇದೇ ವೇಳೆ ಹೇಳಲಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿ ಪ್ರಕಾರ, ಶಾರುಖ್ ಮನೆಗೆ ಎನ್​ಸಿಬಿ ಅಧಿಕಾರಿಗಳು ಪೇಪರ್​ ವರ್ಕ್​ ಕೆಲಸಕ್ಕಾಗಿ ತೆರಳಿದ್ದರು. ಎನ್​ಸಿಬಿಯ ಮತ್ತೊಂದು ತಂಡ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮನೆಗೆ ತೆರಳಿತ್ತು. ಇದೇ ವೇಳೆ ಎನ್​ಸಿಬಿ ಅನನ್ಯಾ ಪಾಂಡೆಗೆ ಸಮನ್ಸ್ ಜಾರಿ ಮಾಡಿದೆ.

‘ಮನ್ನತ್​’ಗೆ ತೆರಳುತ್ತಿರುವ ಎನ್​ಸಿಬಿ ಅಧಿಕಾರಿಗಳು:

ನಟಿ ಅನನ್ಯಾ ಪಾಂಡೆ ಮನೆಗೆ ಎನ್​ಸಿಬಿ ಅಧಿಕಾರಿಗಳು ತೆರಳುತ್ತಿರುವ ದೃಶ್ಯ:

ಇಂದು ಮುಂಜಾನೆ ನಟ ಶಾರುಖ್ ಆರ್ಥರ್ ರೋಡ್ ಜೈಲಿಗೆ ತೆರಳಿ ಆರ್ಯನ್​ರನ್ನು ಭೇಟಿಯಾಗಿದ್ದರು. ಪ್ರಸ್ತುತ ಆರ್ಯನ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದು, ಹೈಕೋರ್ಟ್​ನಲ್ಲಿ ಅಕ್ಟೋಬರ್ 26ರಂದು ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಶಾರುಖ್ ಮನೆಯಲ್ಲಿ ಶೋಧ ನಡೆದಿಲ್ಲ: ಮೂಲಗಳ ಮಾಹಿತಿ

ಶಾರುಖ್ ಖಾನ್ ಮನೆಯಲ್ಲಿ ಎನ್‌ಸಿಬಿ ಶೋಧ ಮಾಡಿಲ್ಲ ಹಾಗೂ ಶಾರುಖ್ ಖಾನ್‌ಗೆ ಯಾವುದೇ ಸಮನ್ಸ್ ಕೂಡ ನೀಡಿಲ್ಲ ಎಂದು ಮೂಲಗಳು ಮಾಹಿತಿ ನೀಡಿದೆ. ಕೇವಲ ಪೇಪರ್ ವರ್ಕ್‌ಗಾಗಿ ಶಾರುಖ್ ಮನೆಗೆ ಭೇಟಿ ನೀಡಿ, ಎನ್​ಸಿಬಿ ಅಧಿಕಾರಿಗಳು ವಾಪಸ್ಸಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ:

Shah Rukh Khan: ಕೊನೆಗೂ ‘ಮನ್ನತ್​’ನಿಂದ ಹೊರಬಂದ ಶಾರುಖ್; ಆರ್ಥರ್ ರೋಡ್ ಜೈಲಿನಲ್ಲಿ ಪುತ್ರನನ್ನು ಭೇಟಿಯಾದ ನಟ

ಆರ್ಯನ್​ಗೆ ಜಾಮೀನು ನೀಡೋಕೆ ಸಾಧ್ಯವೇ ಇಲ್ಲ ಎಂದ ಎನ್​ಡಿಪಿಎಸ್​ ಕೋರ್ಟ್​

Published On - 12:46 pm, Thu, 21 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?