AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್​ ಪಾರ್ಟಿ ಮೇಲೆ ದಾಳಿ: ಬಾಲಿವುಡ್ ಸೂಪರ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ವಶಕ್ಕೆ

ದೆಹಲಿ ಮೂಲದ ಕಂಪನಿಯೊಂದು ಈ ಪಾರ್ಟಿಯನ್ನು ಆಯೋಜಿಸಿತ್ತು. ಪಾರ್ಟಿಯಲ್ಲಿ ಭಾಗವಹಿಸುವ ಪ್ರತಿ ವ್ಯಕ್ತಿಗೆ 80 ಸಾವಿರ ರೂ. ದರ ನಿಗದಿ ಮಾಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿದೆ.

ರೇವ್​ ಪಾರ್ಟಿ ಮೇಲೆ ದಾಳಿ: ಬಾಲಿವುಡ್ ಸೂಪರ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ವಶಕ್ಕೆ
ಐಷಾರಾಮಿ ಹಡಗಿನ ಮೇಲೆ ರೇವ್​ ಪಾರ್ಟಿ
TV9 Web
| Edited By: |

Updated on: Oct 03, 2021 | 8:10 AM

Share

ಸೆಲೆಬ್ರಿಟಿಗಳು, ಶ್ರೀಮಂತರು ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬೀಳುವ ಪ್ರಸಂಗ ಹೆಚ್ಚುತ್ತಲೇ ಇದೆ. ಎಷ್ಟೇ ಕೇಸ್​ಗಳು ಜಡಿದರೂ ಮಾದಕ ದ್ರವ್ಯದ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಮುಂಬೈನ ಕಡಲ ತೀರದಲ್ಲಿ ರೇವ್​ ಪಾರ್ಟಿ ಮಾಡುತ್ತಿದ್ದ ಅನೇಕರನ್ನು ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶನಿವಾರ (ಅ.2) ಮಧ್ಯರಾತ್ರಿ ಈ ದಾಳಿ ನಡೆದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ನಟರೊಬ್ಬರ ಮಗ ಕೂಡ ಇದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರ ಗುರುತು ಇನ್ನೂ ಬಹಿರಂಗ ಆಗಿಲ್ಲ. ಒಟ್ಟು 10 ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.

ವಾಣಿಜ್ಯ ನಗರ ಮುಂಬೈನ ಕಡಲ ತೀರಿದಲ್ಲಿ ಐಷಾರಾಮಿ ಹಡಗಿನ ಮೇಲೆ ಈ ಪಾರ್ಟಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಎನ್​ಸಿಬಿ ಅಧಿಕಾರಿಗಳ ಬಲೆಗೆ ಹೈಪ್ರೊಫೈಲ್​ ವ್ಯಕ್ತಿಗಳ ಮಕ್ಕಳು ಸಿಕ್ಕಿ ಬಿದ್ದಿದ್ದಾರೆ. ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.

ತಮಗೆ ಸಿಕ್ಕ ಸುಳಿವು ಆಧರಿಸಿ ಎನ್​ಸಿಬಿ ಅಧಿಕಾರಿಗಳು ಈ ಕಾರ್ಯಾಚರಣೆ ಆರಂಭಿಸಿದ್ದರು. ಅವರು ಪ್ರಯಾಣಿಕರ ರೀತಿ ಹಡಗಿನಲ್ಲಿ ಸೇರಿಕೊಂಡಿದ್ದರು. ಆ ಹಡಗು ಮಧ್ಯ ಸಮುದ್ರ ಸೇರುತ್ತಿದ್ದಂತೆಯೇ ರೇವ್​ ಪಾರ್ಟಿ ಪ್ರಾರಂಭ ಆಗಿರುವುದು ಅವರ ಗಮನಕ್ಕೆ ಬಂತು. ಕೂಡಲೇ ದಾಳಿ ನಡೆಸಿದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಯಶಸ್ವಿ ಆಗಿದ್ದಾರೆ. ವಶಕ್ಕೆ ಪಡೆಯಲಾದ 10 ಜನರಲ್ಲಿ ಇಬ್ಬರು ಹರಿಯಾಣ ಮತ್ತು ದೆಹಲಿ ಮೂಲದ ಡ್ರಗ್​ ಪೆಡ್ಲರ್​ಗಳು ಎನ್ನಲಾಗಿದೆ.

ದೆಹಲಿ ಮೂಲದ ಕಂಪನಿಯೊಂದು ಈ ಪಾರ್ಟಿಯನ್ನು ಆಯೋಜಿಸಿತ್ತು. ಪಾರ್ಟಿಯಲ್ಲಿ ಭಾಗವಹಿಸುವ ಪ್ರತಿ ವ್ಯಕ್ತಿಗೆ 80 ಸಾವಿರ ರೂ. ದರ ನಿಗದಿ ಮಾಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿದೆ. ತನಿಖೆ ಬಳಿಕ ಹೆಚ್ಚಿನ ಸತ್ಯ ಬಹಿರಂಗ ಆಗಬೇಕಿದೆ.

ಇದನ್ನೂ ಓದಿ:

‘ಡ್ರಗ್ಸ್​ ಎಂಬುದು ಸಿನಿಮಾರಂಗಕ್ಕೆ ಸೀಮಿತ ಅಲ್ಲ, ಇದು ಟಿಆರ್​ಪಿ ವಿಷಯವಲ್ಲ’: ನಟ ಚೇತನ್​

ನಟಿಯರ ಜೊತೆ ಬಿಗ್​ ಬಾಸ್​ ಸ್ಪರ್ಧಿಯ ಡ್ರಗ್ಸ್​ ಪಾರ್ಟಿ; ಪೊಲೀಸರ ಬಲೆಗೆ ಬಿದ್ದ 22 ಮಂದಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ