AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇವ್​ ಪಾರ್ಟಿ ಮೇಲೆ ದಾಳಿ: ಬಾಲಿವುಡ್ ಸೂಪರ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ವಶಕ್ಕೆ

ದೆಹಲಿ ಮೂಲದ ಕಂಪನಿಯೊಂದು ಈ ಪಾರ್ಟಿಯನ್ನು ಆಯೋಜಿಸಿತ್ತು. ಪಾರ್ಟಿಯಲ್ಲಿ ಭಾಗವಹಿಸುವ ಪ್ರತಿ ವ್ಯಕ್ತಿಗೆ 80 ಸಾವಿರ ರೂ. ದರ ನಿಗದಿ ಮಾಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿದೆ.

ರೇವ್​ ಪಾರ್ಟಿ ಮೇಲೆ ದಾಳಿ: ಬಾಲಿವುಡ್ ಸೂಪರ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ವಶಕ್ಕೆ
ಐಷಾರಾಮಿ ಹಡಗಿನ ಮೇಲೆ ರೇವ್​ ಪಾರ್ಟಿ
TV9 Web
| Edited By: |

Updated on: Oct 03, 2021 | 8:10 AM

Share

ಸೆಲೆಬ್ರಿಟಿಗಳು, ಶ್ರೀಮಂತರು ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬೀಳುವ ಪ್ರಸಂಗ ಹೆಚ್ಚುತ್ತಲೇ ಇದೆ. ಎಷ್ಟೇ ಕೇಸ್​ಗಳು ಜಡಿದರೂ ಮಾದಕ ದ್ರವ್ಯದ ಹಾವಳಿಗೆ ಕಡಿವಾಣ ಬೀಳುತ್ತಿಲ್ಲ. ಮುಂಬೈನ ಕಡಲ ತೀರದಲ್ಲಿ ರೇವ್​ ಪಾರ್ಟಿ ಮಾಡುತ್ತಿದ್ದ ಅನೇಕರನ್ನು ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶನಿವಾರ (ಅ.2) ಮಧ್ಯರಾತ್ರಿ ಈ ದಾಳಿ ನಡೆದಿದೆ. ಈ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ನಟರೊಬ್ಬರ ಮಗ ಕೂಡ ಇದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರ ಗುರುತು ಇನ್ನೂ ಬಹಿರಂಗ ಆಗಿಲ್ಲ. ಒಟ್ಟು 10 ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ.

ವಾಣಿಜ್ಯ ನಗರ ಮುಂಬೈನ ಕಡಲ ತೀರಿದಲ್ಲಿ ಐಷಾರಾಮಿ ಹಡಗಿನ ಮೇಲೆ ಈ ಪಾರ್ಟಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಎನ್​ಸಿಬಿ ಅಧಿಕಾರಿಗಳ ಬಲೆಗೆ ಹೈಪ್ರೊಫೈಲ್​ ವ್ಯಕ್ತಿಗಳ ಮಕ್ಕಳು ಸಿಕ್ಕಿ ಬಿದ್ದಿದ್ದಾರೆ. ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.

ತಮಗೆ ಸಿಕ್ಕ ಸುಳಿವು ಆಧರಿಸಿ ಎನ್​ಸಿಬಿ ಅಧಿಕಾರಿಗಳು ಈ ಕಾರ್ಯಾಚರಣೆ ಆರಂಭಿಸಿದ್ದರು. ಅವರು ಪ್ರಯಾಣಿಕರ ರೀತಿ ಹಡಗಿನಲ್ಲಿ ಸೇರಿಕೊಂಡಿದ್ದರು. ಆ ಹಡಗು ಮಧ್ಯ ಸಮುದ್ರ ಸೇರುತ್ತಿದ್ದಂತೆಯೇ ರೇವ್​ ಪಾರ್ಟಿ ಪ್ರಾರಂಭ ಆಗಿರುವುದು ಅವರ ಗಮನಕ್ಕೆ ಬಂತು. ಕೂಡಲೇ ದಾಳಿ ನಡೆಸಿದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಯಶಸ್ವಿ ಆಗಿದ್ದಾರೆ. ವಶಕ್ಕೆ ಪಡೆಯಲಾದ 10 ಜನರಲ್ಲಿ ಇಬ್ಬರು ಹರಿಯಾಣ ಮತ್ತು ದೆಹಲಿ ಮೂಲದ ಡ್ರಗ್​ ಪೆಡ್ಲರ್​ಗಳು ಎನ್ನಲಾಗಿದೆ.

ದೆಹಲಿ ಮೂಲದ ಕಂಪನಿಯೊಂದು ಈ ಪಾರ್ಟಿಯನ್ನು ಆಯೋಜಿಸಿತ್ತು. ಪಾರ್ಟಿಯಲ್ಲಿ ಭಾಗವಹಿಸುವ ಪ್ರತಿ ವ್ಯಕ್ತಿಗೆ 80 ಸಾವಿರ ರೂ. ದರ ನಿಗದಿ ಮಾಡಲಾಗಿತ್ತು ಎಂಬ ಮಾಹಿತಿ ಕೇಳಿಬಂದಿದೆ. ತನಿಖೆ ಬಳಿಕ ಹೆಚ್ಚಿನ ಸತ್ಯ ಬಹಿರಂಗ ಆಗಬೇಕಿದೆ.

ಇದನ್ನೂ ಓದಿ:

‘ಡ್ರಗ್ಸ್​ ಎಂಬುದು ಸಿನಿಮಾರಂಗಕ್ಕೆ ಸೀಮಿತ ಅಲ್ಲ, ಇದು ಟಿಆರ್​ಪಿ ವಿಷಯವಲ್ಲ’: ನಟ ಚೇತನ್​

ನಟಿಯರ ಜೊತೆ ಬಿಗ್​ ಬಾಸ್​ ಸ್ಪರ್ಧಿಯ ಡ್ರಗ್ಸ್​ ಪಾರ್ಟಿ; ಪೊಲೀಸರ ಬಲೆಗೆ ಬಿದ್ದ 22 ಮಂದಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?