AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on: Oct 23, 2021 | 3:45 PM

Share

ಆರ್ಯನ್​ ಖಾನ್​ ಅವರು ಜೈಲು ಸೇರಿ 20 ದಿನಗಳ ಮೇಲಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಜೈಲಿನಲ್ಲಿ ಕೊಡುವ ಊಟ ಅವರಿಗೆ ಹೊಂದುತ್ತಿಲ್ಲ. ಅವರಿಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ಇದು ಶಾರುಖ್​ ಖಾನ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆರ್ಯನ್​ಗೆ ಜಾಮೀನು ಕೊಡಿಸಬೇಕು ಎನ್ನುವ ಪ್ರಯತ್ನದಲ್ಲಿ ಶಾರುಖ್ ಇದ್ದಾರೆ. ಈ ಮಧ್ಯೆ, ಆರ್ಯನ್​ಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣ ಗೋಚರವಾಗುತ್ತಿಲ್ಲ. ಆರ್ಯನ್​ಗೆ ಬಾಂಬೆ ಹೈಕೋರ್ಟ್​ನಲ್ಲಿ ಜಾಮೀನು ಸಿಗಬಾರದು ಎಂದು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ತಂತ್ರ ಒಂದನ್ನು ರೂಪಿಸಿದ್ದಾರೆ.

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಆದರೆ, ಆರ್ಯನ್​ಗೆ ಜಾಮೀನು ಸಿಗದಂತೆ ನೋಡಿಕೊಳ್ಳಲು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಪ್ರಯತ್ನಿಸುತ್ತಿದ್ದಾರೆ.

ಆರ್ಯನ್​ ಸ್ಟಾರ್​ ಕಿಡ್​. ಅವರು ಕೋರ್ಟ್​ನಿಂದ ಹೊರ ಬಂದರೆ ಸಾಕ್ಷ್ಯಗಳನ್ನು ನಾಶ ಮಾಡಬಹುದು ಎನ್ನುವ ವಾದವನ್ನು ಎನ್​ಸಿಬಿ ವಕೀಲರು ಬಾಂಬೆ ಹೈಕೋರ್ಟ್​ನಲ್ಲಿಡಲು ಮುಂದಾಗಿದ್ದಾರೆ. ಇದಲ್ಲದೆ, ಈ ಪ್ರಕರಣದಲ್ಲಿ ಒಬ್ಬೊಬ್ಬರಾಗಿ ವಿಚಾರಣೆಗೆ ಹಾಜರುಪಡಿಸಲಾಗುತ್ತಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಎನ್​ಸಿಬಿ ಜಾಮೀನಿಗೆ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ. ಇದು ಆರ್ಯನ್​ಗೆ ಜಾಮೀನು ಸಿಗದಿರಲು ಪ್ರಮುಖ ಕಾರಣವಾಗಬಹುದು.

ಬಾಂಬೆ ಹೈಕೋರ್ಟ್​ನಲ್ಲೂ ಜಾಮೀನು ಸಿಗದಿದ್ದರೆ ಆರ್ಯನ್​ ಖಾನ್​ ಪರ ವಕೀಲರು ಸುಪ್ರೀಂಕೋರ್ಟ್​ಗೆ ಹೋಗಲು ಅವಕಾಶವಿದೆ. ಅಲ್ಲಿಯೂ ಜಾಮೀನು ರಿಜೆಕ್ಟ್​ ಆದರೆ, ಜೈಲಿನಲ್ಲೇಯೇ ಉಳಿಯಬೇಕಾಗುತ್ತದೆ. ಸದ್ಯ, ಹೈಕೋರ್ಟ್​ನಲ್ಲಿ ನಡೆಯುವ ವಿಚಾರಣೆ ಮೇಲೆ ಎಲ್ಲರ ಚಿತ್ತ ಇದೆ. ಆರ್ಯನ್​ ಬಳಿ ಡ್ರಗ್ಸ್​ ಸಿಕ್ಕಿಲ್ಲ ಎಂಬ ವಾದವನ್ನು ಅವರ ವಕೀಲರು ಮುಂದಿಡುತ್ತಿದ್ದಾರೆ. ಆದರೆ, ಅದು ವರ್ಕೌಟ್​ ಆಗುತ್ತಿಲ್ಲ. ಹೀಗಾಗಿ, ಬೇರೆ ರೀತಿಯ ವಾದ ಮಂಡಿಸುವ ಸಾಧಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಆರ್ಯನ್ ಖಾನ್ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ‘ವಸೂಲಿ’ ಆರೋಪ ಮಾಡಿದ ಮಹಾರಾಷ್ಟ್ರ ಸಚಿವ

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ