AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on: Oct 23, 2021 | 3:45 PM

Share

ಆರ್ಯನ್​ ಖಾನ್​ ಅವರು ಜೈಲು ಸೇರಿ 20 ದಿನಗಳ ಮೇಲಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಜೈಲಿನಲ್ಲಿ ಕೊಡುವ ಊಟ ಅವರಿಗೆ ಹೊಂದುತ್ತಿಲ್ಲ. ಅವರಿಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ಇದು ಶಾರುಖ್​ ಖಾನ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆರ್ಯನ್​ಗೆ ಜಾಮೀನು ಕೊಡಿಸಬೇಕು ಎನ್ನುವ ಪ್ರಯತ್ನದಲ್ಲಿ ಶಾರುಖ್ ಇದ್ದಾರೆ. ಈ ಮಧ್ಯೆ, ಆರ್ಯನ್​ಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣ ಗೋಚರವಾಗುತ್ತಿಲ್ಲ. ಆರ್ಯನ್​ಗೆ ಬಾಂಬೆ ಹೈಕೋರ್ಟ್​ನಲ್ಲಿ ಜಾಮೀನು ಸಿಗಬಾರದು ಎಂದು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ತಂತ್ರ ಒಂದನ್ನು ರೂಪಿಸಿದ್ದಾರೆ.

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಆದರೆ, ಆರ್ಯನ್​ಗೆ ಜಾಮೀನು ಸಿಗದಂತೆ ನೋಡಿಕೊಳ್ಳಲು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಪ್ರಯತ್ನಿಸುತ್ತಿದ್ದಾರೆ.

ಆರ್ಯನ್​ ಸ್ಟಾರ್​ ಕಿಡ್​. ಅವರು ಕೋರ್ಟ್​ನಿಂದ ಹೊರ ಬಂದರೆ ಸಾಕ್ಷ್ಯಗಳನ್ನು ನಾಶ ಮಾಡಬಹುದು ಎನ್ನುವ ವಾದವನ್ನು ಎನ್​ಸಿಬಿ ವಕೀಲರು ಬಾಂಬೆ ಹೈಕೋರ್ಟ್​ನಲ್ಲಿಡಲು ಮುಂದಾಗಿದ್ದಾರೆ. ಇದಲ್ಲದೆ, ಈ ಪ್ರಕರಣದಲ್ಲಿ ಒಬ್ಬೊಬ್ಬರಾಗಿ ವಿಚಾರಣೆಗೆ ಹಾಜರುಪಡಿಸಲಾಗುತ್ತಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಎನ್​ಸಿಬಿ ಜಾಮೀನಿಗೆ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ. ಇದು ಆರ್ಯನ್​ಗೆ ಜಾಮೀನು ಸಿಗದಿರಲು ಪ್ರಮುಖ ಕಾರಣವಾಗಬಹುದು.

ಬಾಂಬೆ ಹೈಕೋರ್ಟ್​ನಲ್ಲೂ ಜಾಮೀನು ಸಿಗದಿದ್ದರೆ ಆರ್ಯನ್​ ಖಾನ್​ ಪರ ವಕೀಲರು ಸುಪ್ರೀಂಕೋರ್ಟ್​ಗೆ ಹೋಗಲು ಅವಕಾಶವಿದೆ. ಅಲ್ಲಿಯೂ ಜಾಮೀನು ರಿಜೆಕ್ಟ್​ ಆದರೆ, ಜೈಲಿನಲ್ಲೇಯೇ ಉಳಿಯಬೇಕಾಗುತ್ತದೆ. ಸದ್ಯ, ಹೈಕೋರ್ಟ್​ನಲ್ಲಿ ನಡೆಯುವ ವಿಚಾರಣೆ ಮೇಲೆ ಎಲ್ಲರ ಚಿತ್ತ ಇದೆ. ಆರ್ಯನ್​ ಬಳಿ ಡ್ರಗ್ಸ್​ ಸಿಕ್ಕಿಲ್ಲ ಎಂಬ ವಾದವನ್ನು ಅವರ ವಕೀಲರು ಮುಂದಿಡುತ್ತಿದ್ದಾರೆ. ಆದರೆ, ಅದು ವರ್ಕೌಟ್​ ಆಗುತ್ತಿಲ್ಲ. ಹೀಗಾಗಿ, ಬೇರೆ ರೀತಿಯ ವಾದ ಮಂಡಿಸುವ ಸಾಧಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಆರ್ಯನ್ ಖಾನ್ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ‘ವಸೂಲಿ’ ಆರೋಪ ಮಾಡಿದ ಮಹಾರಾಷ್ಟ್ರ ಸಚಿವ

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ