AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on: Oct 23, 2021 | 3:45 PM

Share

ಆರ್ಯನ್​ ಖಾನ್​ ಅವರು ಜೈಲು ಸೇರಿ 20 ದಿನಗಳ ಮೇಲಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಜಾಮೀನು ಸಿಗುತ್ತಿಲ್ಲ. ಜೈಲಿನಲ್ಲಿ ಕೊಡುವ ಊಟ ಅವರಿಗೆ ಹೊಂದುತ್ತಿಲ್ಲ. ಅವರಿಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ಇದು ಶಾರುಖ್​ ಖಾನ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆರ್ಯನ್​ಗೆ ಜಾಮೀನು ಕೊಡಿಸಬೇಕು ಎನ್ನುವ ಪ್ರಯತ್ನದಲ್ಲಿ ಶಾರುಖ್ ಇದ್ದಾರೆ. ಈ ಮಧ್ಯೆ, ಆರ್ಯನ್​ಗೆ ಸದ್ಯಕ್ಕೆ ಜಾಮೀನು ಸಿಗುವ ಲಕ್ಷಣ ಗೋಚರವಾಗುತ್ತಿಲ್ಲ. ಆರ್ಯನ್​ಗೆ ಬಾಂಬೆ ಹೈಕೋರ್ಟ್​ನಲ್ಲಿ ಜಾಮೀನು ಸಿಗಬಾರದು ಎಂದು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ತಂತ್ರ ಒಂದನ್ನು ರೂಪಿಸಿದ್ದಾರೆ.

ಎನ್​ಡಿಪಿಎಸ್​ ವಿಶೇಷ ಕೋರ್ಟ್​ನಲ್ಲಿ ಆರ್ಯನ್​ ಅವರ ಜಾಮೀನು ಅರ್ಜಿ ರಿಜೆಕ್ಟ್​ ಆಗಿದೆ. ಈ ಬೆನ್ನಲ್ಲೇ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಶೀಘ್ರವೇ ಅವರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಆದರೆ, ಆರ್ಯನ್​ಗೆ ಜಾಮೀನು ಸಿಗದಂತೆ ನೋಡಿಕೊಳ್ಳಲು ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಪ್ರಯತ್ನಿಸುತ್ತಿದ್ದಾರೆ.

ಆರ್ಯನ್​ ಸ್ಟಾರ್​ ಕಿಡ್​. ಅವರು ಕೋರ್ಟ್​ನಿಂದ ಹೊರ ಬಂದರೆ ಸಾಕ್ಷ್ಯಗಳನ್ನು ನಾಶ ಮಾಡಬಹುದು ಎನ್ನುವ ವಾದವನ್ನು ಎನ್​ಸಿಬಿ ವಕೀಲರು ಬಾಂಬೆ ಹೈಕೋರ್ಟ್​ನಲ್ಲಿಡಲು ಮುಂದಾಗಿದ್ದಾರೆ. ಇದಲ್ಲದೆ, ಈ ಪ್ರಕರಣದಲ್ಲಿ ಒಬ್ಬೊಬ್ಬರಾಗಿ ವಿಚಾರಣೆಗೆ ಹಾಜರುಪಡಿಸಲಾಗುತ್ತಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಎನ್​ಸಿಬಿ ಜಾಮೀನಿಗೆ ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ. ಇದು ಆರ್ಯನ್​ಗೆ ಜಾಮೀನು ಸಿಗದಿರಲು ಪ್ರಮುಖ ಕಾರಣವಾಗಬಹುದು.

ಬಾಂಬೆ ಹೈಕೋರ್ಟ್​ನಲ್ಲೂ ಜಾಮೀನು ಸಿಗದಿದ್ದರೆ ಆರ್ಯನ್​ ಖಾನ್​ ಪರ ವಕೀಲರು ಸುಪ್ರೀಂಕೋರ್ಟ್​ಗೆ ಹೋಗಲು ಅವಕಾಶವಿದೆ. ಅಲ್ಲಿಯೂ ಜಾಮೀನು ರಿಜೆಕ್ಟ್​ ಆದರೆ, ಜೈಲಿನಲ್ಲೇಯೇ ಉಳಿಯಬೇಕಾಗುತ್ತದೆ. ಸದ್ಯ, ಹೈಕೋರ್ಟ್​ನಲ್ಲಿ ನಡೆಯುವ ವಿಚಾರಣೆ ಮೇಲೆ ಎಲ್ಲರ ಚಿತ್ತ ಇದೆ. ಆರ್ಯನ್​ ಬಳಿ ಡ್ರಗ್ಸ್​ ಸಿಕ್ಕಿಲ್ಲ ಎಂಬ ವಾದವನ್ನು ಅವರ ವಕೀಲರು ಮುಂದಿಡುತ್ತಿದ್ದಾರೆ. ಆದರೆ, ಅದು ವರ್ಕೌಟ್​ ಆಗುತ್ತಿಲ್ಲ. ಹೀಗಾಗಿ, ಬೇರೆ ರೀತಿಯ ವಾದ ಮಂಡಿಸುವ ಸಾಧಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಆರ್ಯನ್ ಖಾನ್ ಪ್ರಕರಣದ ತನಿಖಾಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ‘ವಸೂಲಿ’ ಆರೋಪ ಮಾಡಿದ ಮಹಾರಾಷ್ಟ್ರ ಸಚಿವ

ಆರ್ಯನ್​ ಖಾನ್​ಗೆ ಡ್ರಗ್​ ಸಪ್ಲೈ ಮಾಡಿದ್ದು ಅನನ್ಯಾ ಪಾಂಡೆ? ವಾಟ್ಸಾಪ್ ಚಾಟ್​​​ನಿಂದ ಹೊರ ಬಿತ್ತು ರಹಸ್ಯ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?