AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ:’; ಅಭಿಮಾನಿಗಳಲ್ಲಿ ಕೋರಿದ ಸಿದ್ದಾರ್ಥ್​ ಶುಕ್ಲಾ ಕುಟುಂಬ

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

‘ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ:’; ಅಭಿಮಾನಿಗಳಲ್ಲಿ ಕೋರಿದ ಸಿದ್ದಾರ್ಥ್​ ಶುಕ್ಲಾ ಕುಟುಂಬ
ಸಿದ್ಧಾರ್ಥ್ ಶುಕ್ಲಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 06, 2021 | 10:49 PM

Share

ಸಿದ್ದಾರ್ಥ್​ ಶುಕ್ಲಾ ಸಾವಿನ ಸುದ್ದಿಯನ್ನು ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಇಂದು ಸಿದ್ದಾರ್ಥ್​ ಶುಕ್ಲಾ ಮನೆಯಲ್ಲಿ ಶ್ರದ್ಧಾಂಜಲಿ ಸಭೆ ಆಯೋಜನೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ಸಿದ್ದಾರ್ಥ್​ ಕುಟುಂಬ ಎಲ್ಲರ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದು, ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ ಎಂದು ಕೋರಿದೆ.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈಗ ಸಿದ್ದಾರ್ಥ್ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಗೆ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿತ್ತು. ಜೂಮ್ ಮೀಟಿಂಗ್ ಮೂಲಕ ಅನೇಕರು ಪಾಲ್ಗೊಂಡಿದ್ದರು.

ಇದಾದ ಬೆನ್ನಲ್ಲೇ ಕುಟುಂಬ ಪತ್ರಿಕಾ ಪ್ರಟಣೆ ಹೊರಡಿಸಿದೆ. ‘ಸಿದ್ದಾರ್ಥ್ ಪಯಣದ ಭಾಗವಾಗಿರುವ ಮತ್ತು ಆತನಿಗೆ ಪ್ರೀತಿಯನ್ನು ನೀಡಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು. ಅವನು ಈಗ ನಮ್ಮ ಹೃದಯದಲ್ಲಿ ಶಾಶ್ವತವಾಗಿ ವಾಸಿಸುತ್ತಿದ್ದಾನೆ. ಹೀಗಾಗಿ, ಇದು ಖಂಡಿತವಾಗಿಯೂ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ. ಮುಂಬೈ ಪೊಲೀಸರಿಗೆ ನಾವು ವಿಶೇಷ ಧನ್ಯವಾದ ಅರ್ಪಿಸುತ್ತಿದ್ದೇವೆ. ದಯವಿಟ್ಟು ಸಿದ್ದಾರ್ಥ್​ನನ್ನು ನಿಮ್ಮ ಆಲೋಚನೆ ಮತ್ತು ಪ್ರಾರ್ಥನೆಯಲ್ಲಿ ಇರಿಸಿಕೊಳ್ಳಿ. ಓಂ ಶಾಂತಿ’ ಎಂದು ಕುಟುಂಬದವರು ಬರೆದಿದ್ದಾರೆ.

ಸಿದ್ದಾರ್ಥ್ ಶುಕ್ಲಾ ಜೊತೆ ನಟಿ ಶೆಹನಾಜ್ ಗಿಲ್ ಹೆಚ್ಚು ಆಪ್ತವಾಗಿದ್ದರು. ಇಬ್ಬರ ನಡುವೆ ಪ್ರೀತಿ ಇತ್ತು ಎಂಬುದು ಕೂಡ ಈಗ ರಹಸ್ಯವಾಗಿ ಉಳಿದಿಲ್ಲ. ಸಿದ್ದಾರ್ಥ್ ನಿಧನದ ಬಳಿಕ ಶೆಹನಾಜ್ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರು ಕೂಡ ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ